ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲೆಂದು ವಧು-ವರರ ಸರಳ ಸಾಮೂಹಿಕ ವಿವಾಹಕ್ಕಾಗಿ ‘ಸಪ್ತಪದಿ’ ಯೋಜನೆ ಜಾರಿಗೆ ತರಲಾಗಿದೆ. ಪ್ರಸ್ತುತ ಈ ಸಪ್ತಪದಿ ವಿವಾಹ ಯೋಜನೆಗೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ ಮಾಡಲಾಗಿದೆ.
‘ಮಾಂಗಲ್ಯ ಭಾಗ್ಯ’ ಯೋಜನೆಯ ಉದ್ದೇಶವು ಮದುವೆಗೆ ದುಂದು ವೆಚ್ಚ ಮಾಡುವ ಮೂಲಕ ಬಡ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸುವುದಾಗಿದೆ. ಈ ಯೋಜನೆಯನ್ನು ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ವಿಸ್ತರಿಸಲಾಗಿದೆ.
ಸಪ್ತಪದಿ ಯೋಜನೆಯಡಿಯ ಮಾರ್ಗಸೂಚಿಗಳನ್ನೇ ‘ಮಾಂಗಲ್ಯ ಭಾಗ್ಯ’ದಲ್ಲಿ ಅಳವಡಿಸಲಾಗಿದೆ. ವರನಿಗೆ ಅಂಗಿ-ಧೋತಿ, 5 ಸಾವಿರ ರೂ. ನಗದು ಹಾಗೂ ವಧುವಿಗೆ ಮಂಗಳಸೂತ್ರಕ್ಕಾಗಿ ಸೀರೆ, 1 ಸಾವಿರ ರೂ. ನಗದು, 8 ಗ್ರಾಂ. ಚಿನ್ನದ ತಾಳಿ-ಗುಂಡುಗಳನ್ನ ನೀಡಲಾಗುತ್ತದೆ.
ದೇವಾಲಯ ಆಡಳಿತ ಮಂಡಳಿಗಳು ಮದುವೆಗೆ ಬರುವ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ನೋಡಿಕೊಳ್ಳಲಿವೆ. ಯೋಜನೆಯಡಿಯಲ್ಲಿ ಸಾಮೂಹಿಕ ವಿವಾಹಕ್ಕೆ ಬೇಕಾಗುವ ವೆಚ್ಚವನ್ನು ದೇವಸ್ಥಾನದ ನಿಧಿಯಿಂದ ಭರಿಸಲಾಗುತ್ತದೆ. ದೇವಸ್ಥಾನದಿಂದ ಸಾಧ್ಯವಾಗದಿದ್ದಾಗ ಮಾತ್ರ ವಧು-ವರರಿಗೆ ನೀಡುವ ಆರ್ಥಿಕ ಸಹಾಯ ಧನವನ್ನು ಇಲಾಖೆಯ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲಾಗುವುದು.
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…