Categories: ರಾಜ್ಯ

ಸಪ್ತಪದಿಗೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ ಮಾಡಿದ ಸರ್ಕಾರ

ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲೆಂದು ವಧು-ವರರ ಸರಳ ಸಾಮೂಹಿಕ ವಿವಾಹಕ್ಕಾಗಿ ‘ಸಪ್ತಪದಿ’ ಯೋಜನೆ ಜಾರಿಗೆ ತರಲಾಗಿದೆ. ಪ್ರಸ್ತುತ ಈ ಸಪ್ತಪದಿ ವಿವಾಹ ಯೋಜನೆಗೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ ಮಾಡಲಾಗಿದೆ.

‘ಮಾಂಗಲ್ಯ ಭಾಗ್ಯ’ ಯೋಜನೆಯ ಉದ್ದೇಶವು ಮದುವೆಗೆ ದುಂದು ವೆಚ್ಚ ಮಾಡುವ ಮೂಲಕ ಬಡ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸುವುದಾಗಿದೆ. ಈ ಯೋಜನೆಯನ್ನು ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ವಿಸ್ತರಿಸಲಾಗಿದೆ.

ಸಪ್ತಪದಿ ಯೋಜನೆಯಡಿಯ ಮಾರ್ಗಸೂಚಿಗಳನ್ನೇ ‘ಮಾಂಗಲ್ಯ ಭಾಗ್ಯ’ದಲ್ಲಿ ಅಳವಡಿಸಲಾಗಿದೆ. ವರನಿಗೆ ಅಂಗಿ-ಧೋತಿ, 5 ಸಾವಿರ ರೂ. ನಗದು ಹಾಗೂ ವಧುವಿಗೆ ಮಂಗಳಸೂತ್ರಕ್ಕಾಗಿ ಸೀರೆ, 1 ಸಾವಿರ ರೂ. ನಗದು, 8 ಗ್ರಾಂ. ಚಿನ್ನದ ತಾಳಿ-ಗುಂಡುಗಳನ್ನ ನೀಡಲಾಗುತ್ತದೆ.

ದೇವಾಲಯ ಆಡಳಿತ ಮಂಡಳಿಗಳು ಮದುವೆಗೆ ಬರುವ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ನೋಡಿಕೊಳ್ಳಲಿವೆ. ಯೋಜನೆಯಡಿಯಲ್ಲಿ ಸಾಮೂಹಿಕ ವಿವಾಹಕ್ಕೆ ಬೇಕಾಗುವ ವೆಚ್ಚವನ್ನು ದೇವಸ್ಥಾನದ ನಿಧಿಯಿಂದ ಭರಿಸಲಾಗುತ್ತದೆ. ದೇವಸ್ಥಾನದಿಂದ ಸಾಧ್ಯವಾಗದಿದ್ದಾಗ ಮಾತ್ರ ವಧು-ವರರಿಗೆ ನೀಡುವ ಆರ್ಥಿಕ ಸಹಾಯ ಧನವನ್ನು ಇಲಾಖೆಯ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲಾಗುವುದು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

28 minutes ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

2 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

5 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

19 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago