ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲೆಂದು ವಧು-ವರರ ಸರಳ ಸಾಮೂಹಿಕ ವಿವಾಹಕ್ಕಾಗಿ ‘ಸಪ್ತಪದಿ’ ಯೋಜನೆ ಜಾರಿಗೆ ತರಲಾಗಿದೆ. ಪ್ರಸ್ತುತ ಈ ಸಪ್ತಪದಿ ವಿವಾಹ ಯೋಜನೆಗೆ ‘ಮಾಂಗಲ್ಯ ಭಾಗ್ಯ’ ಎಂದು ಮರುನಾಮಕರಣ ಮಾಡಲಾಗಿದೆ.
‘ಮಾಂಗಲ್ಯ ಭಾಗ್ಯ’ ಯೋಜನೆಯ ಉದ್ದೇಶವು ಮದುವೆಗೆ ದುಂದು ವೆಚ್ಚ ಮಾಡುವ ಮೂಲಕ ಬಡ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನು ತಪ್ಪಿಸುವುದಾಗಿದೆ. ಈ ಯೋಜನೆಯನ್ನು ರಾಜ್ಯದ ಎಲ್ಲಾ ದೇವಸ್ಥಾನಗಳಿಗೂ ವಿಸ್ತರಿಸಲಾಗಿದೆ.
ಸಪ್ತಪದಿ ಯೋಜನೆಯಡಿಯ ಮಾರ್ಗಸೂಚಿಗಳನ್ನೇ ‘ಮಾಂಗಲ್ಯ ಭಾಗ್ಯ’ದಲ್ಲಿ ಅಳವಡಿಸಲಾಗಿದೆ. ವರನಿಗೆ ಅಂಗಿ-ಧೋತಿ, 5 ಸಾವಿರ ರೂ. ನಗದು ಹಾಗೂ ವಧುವಿಗೆ ಮಂಗಳಸೂತ್ರಕ್ಕಾಗಿ ಸೀರೆ, 1 ಸಾವಿರ ರೂ. ನಗದು, 8 ಗ್ರಾಂ. ಚಿನ್ನದ ತಾಳಿ-ಗುಂಡುಗಳನ್ನ ನೀಡಲಾಗುತ್ತದೆ.
ದೇವಾಲಯ ಆಡಳಿತ ಮಂಡಳಿಗಳು ಮದುವೆಗೆ ಬರುವ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ನೋಡಿಕೊಳ್ಳಲಿವೆ. ಯೋಜನೆಯಡಿಯಲ್ಲಿ ಸಾಮೂಹಿಕ ವಿವಾಹಕ್ಕೆ ಬೇಕಾಗುವ ವೆಚ್ಚವನ್ನು ದೇವಸ್ಥಾನದ ನಿಧಿಯಿಂದ ಭರಿಸಲಾಗುತ್ತದೆ. ದೇವಸ್ಥಾನದಿಂದ ಸಾಧ್ಯವಾಗದಿದ್ದಾಗ ಮಾತ್ರ ವಧು-ವರರಿಗೆ ನೀಡುವ ಆರ್ಥಿಕ ಸಹಾಯ ಧನವನ್ನು ಇಲಾಖೆಯ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲಾಗುವುದು.
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…