Categories: ರಾಜ್ಯ

ಸಬರ್ಬನ್ ರೈಲು: 31 ಮೀ. ಉದ್ದದ ಯು-ಗರ್ಡರ್ ಸಿದ್ಧ

ಮಹತ್ವಾಕಾಂಕ್ಷಿ ಬೆಂಗಳೂರು ಸಬರ್ಬನ್ ರೈಲು ಯೋಜನೆಯ ಕಾರಿಡಾರ್-2ರಲ್ಲಿ ಅಳವಡಿಸಲಿರುವ, ದಾಖಲೆಯ 31 ಮೀ. ಉದ್ದದ ಯು-ಗರ್ಡರ್ ಅನ್ನು ದೇವನಹಳ್ಳಿಯಲ್ಲಿರುವ ಕಾಮಗಾರಿ ಸ್ಥಾವರದಲ್ಲಿ (ಕಾಸ್ಟಿಂಗ್ ಯಾರ್ಡ್) ಶನಿವಾರ ರಾತ್ರಿ ಸಿದ್ಧಪಡಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಈ ಬಗ್ಗೆ ಭಾನುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ದೇಶದ ಉಳಿದ ಮೆಟ್ರೋಗಳಲ್ಲಿ 28 ಮೀ. ಉದ್ದದ ಗರ್ಡರ್ (ಸಿಮೆಂಟ್ ಮತ್ತು ಕಬ್ಬಿಣದ ತೊಲೆ) ತಯಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಬೆಂಗಳೂರು ಸಬರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗಿದೆ. ‘ಯು’ ಆಕಾರದಲ್ಲಿರುವ ಇಂತಹ 450 ‘ಯು-ಗರ್ಡರ್’ಗಳು ಕಾರಿಡಾರ್-2ರಲ್ಲಿ (ಮಲ್ಲಿಗೆ ಲೈನ್) ಅಗತ್ಯವಾಗಿವೆ. ಇದನ್ನು ಯಶವಂತಪುರ-ಹೆಬ್ಬಾಳ ನಡುವಿನ 8 ಕಿ.ಮೀ. ಮಾರ್ಗದಲ್ಲಿ ಸದ್ಯದಲ್ಲೇ ಅಳವಡಿಸಲಾಗುವುದು’ ಎಂದಿದ್ದಾರೆ.

ಇಂತಹ ಪ್ರತೀ ಒಂದು ಗರ್ಡರ್ ತಯಾರಿಕೆಗೂ ಎಂ60 ಗುಣಮಟ್ಟದ 69.5 ಕ್ಯೂಬಿಕ್ ಮೀಟರ್ ಕಾಂಕ್ರೀಟ್ ಬೇಕಾಗುತ್ತದೆ. ಇಂತಹ ತೊಲೆಗಳು ತಲಾ 178 ಟನ್ ಭಾರವಿರುತ್ತವೆ. ಇವುಗಳಿಂದ ಕಾಮಗಾರಿಗೆ ತಗುಲುವ ಸಮಯ ಸಾಕಷ್ಟು ಉಳಿಯಲಿದೆ. ಇದನ್ನು ಆಸ್ ಸಿಸ್ಟಮ್ ಕಂಪನಿಯು ಬೆಂಗಳೂರು ಸಬರ್ಬನ್ ರೈಲು ಯೋಜನೆಗಾಗಿ ವಿನ್ಯಾಸಗೊಳಿಸಿದ್ದು, ಚೆನ್ನೈನ ಐಐಟಿ ಮತ್ತು ಜನರಲ್ ಕನ್ಸಲ್ಟೆಂಟ್ ಕಂಪನಿಗಳು ಕೂಡ ಇದರಲ್ಲಿ ಸಕ್ರಿಯ ಪಾತ್ರ ವಹಿಸಿ, ಗುಣಮಟ್ಟವನ್ನು ಖಾತ್ರಿಪಡಿಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇಂತಹ ಯು-ಗರ್ಡರ್ ಸಿದ್ಧಪಡಿಸಿರುವುದು ಒಂದು ತಾಂತ್ರಿಕ ಅದ್ಭುತವಾಗಿದ್ದು, ಸರಕಾರಿ ಸ್ವಾಮ್ಯದ ಕೆ-ರೈಡ್ ಇದರ ಉಸ್ತುವಾರಿ ಮತ್ತು ಗುಣಮಟ್ಟ ನಿಯಂತ್ರಣಗಳನ್ನು ನೋಡಿಕೊಂಡಿದೆ. ಇಂತಹ ಗರ್ಡರ್ ಅಳವಡಿಸುವುದರಿಂದ ನೇರವಾಗಿ ಹಳಿಗಳನ್ನು ಅಳವಡಿಸಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

Ramesh Babu

Journalist

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

2 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

14 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

14 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

15 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

16 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

19 hours ago