ಮಹತ್ವಾಕಾಂಕ್ಷಿ ಬೆಂಗಳೂರು ಸಬರ್ಬನ್ ರೈಲು ಯೋಜನೆಯ ಕಾರಿಡಾರ್-2ರಲ್ಲಿ ಅಳವಡಿಸಲಿರುವ, ದಾಖಲೆಯ 31 ಮೀ. ಉದ್ದದ ಯು-ಗರ್ಡರ್ ಅನ್ನು ದೇವನಹಳ್ಳಿಯಲ್ಲಿರುವ ಕಾಮಗಾರಿ ಸ್ಥಾವರದಲ್ಲಿ (ಕಾಸ್ಟಿಂಗ್ ಯಾರ್ಡ್) ಶನಿವಾರ ರಾತ್ರಿ ಸಿದ್ಧಪಡಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಈ ಬಗ್ಗೆ ಭಾನುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ದೇಶದ ಉಳಿದ ಮೆಟ್ರೋಗಳಲ್ಲಿ 28 ಮೀ. ಉದ್ದದ ಗರ್ಡರ್ (ಸಿಮೆಂಟ್ ಮತ್ತು ಕಬ್ಬಿಣದ ತೊಲೆ) ತಯಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಬೆಂಗಳೂರು ಸಬರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗಿದೆ. ‘ಯು’ ಆಕಾರದಲ್ಲಿರುವ ಇಂತಹ 450 ‘ಯು-ಗರ್ಡರ್’ಗಳು ಕಾರಿಡಾರ್-2ರಲ್ಲಿ (ಮಲ್ಲಿಗೆ ಲೈನ್) ಅಗತ್ಯವಾಗಿವೆ. ಇದನ್ನು ಯಶವಂತಪುರ-ಹೆಬ್ಬಾಳ ನಡುವಿನ 8 ಕಿ.ಮೀ. ಮಾರ್ಗದಲ್ಲಿ ಸದ್ಯದಲ್ಲೇ ಅಳವಡಿಸಲಾಗುವುದು’ ಎಂದಿದ್ದಾರೆ.
ಇಂತಹ ಯು-ಗರ್ಡರ್ ಸಿದ್ಧಪಡಿಸಿರುವುದು ಒಂದು ತಾಂತ್ರಿಕ ಅದ್ಭುತವಾಗಿದ್ದು, ಸರಕಾರಿ ಸ್ವಾಮ್ಯದ ಕೆ-ರೈಡ್ ಇದರ ಉಸ್ತುವಾರಿ ಮತ್ತು ಗುಣಮಟ್ಟ ನಿಯಂತ್ರಣಗಳನ್ನು ನೋಡಿಕೊಂಡಿದೆ. ಇಂತಹ ಗರ್ಡರ್ ಅಳವಡಿಸುವುದರಿಂದ ನೇರವಾಗಿ ಹಳಿಗಳನ್ನು ಅಳವಡಿಸಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…