ಮಹತ್ವಾಕಾಂಕ್ಷಿ ಬೆಂಗಳೂರು ಸಬರ್ಬನ್ ರೈಲು ಯೋಜನೆಯ ಕಾರಿಡಾರ್-2ರಲ್ಲಿ ಅಳವಡಿಸಲಿರುವ, ದಾಖಲೆಯ 31 ಮೀ. ಉದ್ದದ ಯು-ಗರ್ಡರ್ ಅನ್ನು ದೇವನಹಳ್ಳಿಯಲ್ಲಿರುವ ಕಾಮಗಾರಿ ಸ್ಥಾವರದಲ್ಲಿ (ಕಾಸ್ಟಿಂಗ್ ಯಾರ್ಡ್) ಶನಿವಾರ ರಾತ್ರಿ ಸಿದ್ಧಪಡಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಈ ಬಗ್ಗೆ ಭಾನುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ದೇಶದ ಉಳಿದ ಮೆಟ್ರೋಗಳಲ್ಲಿ 28 ಮೀ. ಉದ್ದದ ಗರ್ಡರ್ (ಸಿಮೆಂಟ್ ಮತ್ತು ಕಬ್ಬಿಣದ ತೊಲೆ) ತಯಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಬೆಂಗಳೂರು ಸಬರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗಿದೆ. ‘ಯು’ ಆಕಾರದಲ್ಲಿರುವ ಇಂತಹ 450 ‘ಯು-ಗರ್ಡರ್’ಗಳು ಕಾರಿಡಾರ್-2ರಲ್ಲಿ (ಮಲ್ಲಿಗೆ ಲೈನ್) ಅಗತ್ಯವಾಗಿವೆ. ಇದನ್ನು ಯಶವಂತಪುರ-ಹೆಬ್ಬಾಳ ನಡುವಿನ 8 ಕಿ.ಮೀ. ಮಾರ್ಗದಲ್ಲಿ ಸದ್ಯದಲ್ಲೇ ಅಳವಡಿಸಲಾಗುವುದು’ ಎಂದಿದ್ದಾರೆ.
ಇಂತಹ ಯು-ಗರ್ಡರ್ ಸಿದ್ಧಪಡಿಸಿರುವುದು ಒಂದು ತಾಂತ್ರಿಕ ಅದ್ಭುತವಾಗಿದ್ದು, ಸರಕಾರಿ ಸ್ವಾಮ್ಯದ ಕೆ-ರೈಡ್ ಇದರ ಉಸ್ತುವಾರಿ ಮತ್ತು ಗುಣಮಟ್ಟ ನಿಯಂತ್ರಣಗಳನ್ನು ನೋಡಿಕೊಂಡಿದೆ. ಇಂತಹ ಗರ್ಡರ್ ಅಳವಡಿಸುವುದರಿಂದ ನೇರವಾಗಿ ಹಳಿಗಳನ್ನು ಅಳವಡಿಸಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…