ಮಹತ್ವಾಕಾಂಕ್ಷಿ ಬೆಂಗಳೂರು ಸಬರ್ಬನ್ ರೈಲು ಯೋಜನೆಯ ಕಾರಿಡಾರ್-2ರಲ್ಲಿ ಅಳವಡಿಸಲಿರುವ, ದಾಖಲೆಯ 31 ಮೀ. ಉದ್ದದ ಯು-ಗರ್ಡರ್ ಅನ್ನು ದೇವನಹಳ್ಳಿಯಲ್ಲಿರುವ ಕಾಮಗಾರಿ ಸ್ಥಾವರದಲ್ಲಿ (ಕಾಸ್ಟಿಂಗ್ ಯಾರ್ಡ್) ಶನಿವಾರ ರಾತ್ರಿ ಸಿದ್ಧಪಡಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಈ ಬಗ್ಗೆ ಭಾನುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ದೇಶದ ಉಳಿದ ಮೆಟ್ರೋಗಳಲ್ಲಿ 28 ಮೀ. ಉದ್ದದ ಗರ್ಡರ್ (ಸಿಮೆಂಟ್ ಮತ್ತು ಕಬ್ಬಿಣದ ತೊಲೆ) ತಯಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಬೆಂಗಳೂರು ಸಬರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗಿದೆ. ‘ಯು’ ಆಕಾರದಲ್ಲಿರುವ ಇಂತಹ 450 ‘ಯು-ಗರ್ಡರ್’ಗಳು ಕಾರಿಡಾರ್-2ರಲ್ಲಿ (ಮಲ್ಲಿಗೆ ಲೈನ್) ಅಗತ್ಯವಾಗಿವೆ. ಇದನ್ನು ಯಶವಂತಪುರ-ಹೆಬ್ಬಾಳ ನಡುವಿನ 8 ಕಿ.ಮೀ. ಮಾರ್ಗದಲ್ಲಿ ಸದ್ಯದಲ್ಲೇ ಅಳವಡಿಸಲಾಗುವುದು’ ಎಂದಿದ್ದಾರೆ.
ಇಂತಹ ಯು-ಗರ್ಡರ್ ಸಿದ್ಧಪಡಿಸಿರುವುದು ಒಂದು ತಾಂತ್ರಿಕ ಅದ್ಭುತವಾಗಿದ್ದು, ಸರಕಾರಿ ಸ್ವಾಮ್ಯದ ಕೆ-ರೈಡ್ ಇದರ ಉಸ್ತುವಾರಿ ಮತ್ತು ಗುಣಮಟ್ಟ ನಿಯಂತ್ರಣಗಳನ್ನು ನೋಡಿಕೊಂಡಿದೆ. ಇಂತಹ ಗರ್ಡರ್ ಅಳವಡಿಸುವುದರಿಂದ ನೇರವಾಗಿ ಹಳಿಗಳನ್ನು ಅಳವಡಿಸಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…
ನಟಿ ತ್ರಿಷಾ ಜತೆ ಅಫೇರ್ ಆರೋಪ, ಹೆಂಡ್ತಿ ಡಿವೋರ್ಸ್ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್ ಮೀಡಿಯಾದಲ್ಲಿ…