ಮಹತ್ವಾಕಾಂಕ್ಷಿ ಬೆಂಗಳೂರು ಸಬರ್ಬನ್ ರೈಲು ಯೋಜನೆಯ ಕಾರಿಡಾರ್-2ರಲ್ಲಿ ಅಳವಡಿಸಲಿರುವ, ದಾಖಲೆಯ 31 ಮೀ. ಉದ್ದದ ಯು-ಗರ್ಡರ್ ಅನ್ನು ದೇವನಹಳ್ಳಿಯಲ್ಲಿರುವ ಕಾಮಗಾರಿ ಸ್ಥಾವರದಲ್ಲಿ (ಕಾಸ್ಟಿಂಗ್ ಯಾರ್ಡ್) ಶನಿವಾರ ರಾತ್ರಿ ಸಿದ್ಧಪಡಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.
ಈ ಬಗ್ಗೆ ಭಾನುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ದೇಶದ ಉಳಿದ ಮೆಟ್ರೋಗಳಲ್ಲಿ 28 ಮೀ. ಉದ್ದದ ಗರ್ಡರ್ (ಸಿಮೆಂಟ್ ಮತ್ತು ಕಬ್ಬಿಣದ ತೊಲೆ) ತಯಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಬೆಂಗಳೂರು ಸಬರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗಿದೆ. ‘ಯು’ ಆಕಾರದಲ್ಲಿರುವ ಇಂತಹ 450 ‘ಯು-ಗರ್ಡರ್’ಗಳು ಕಾರಿಡಾರ್-2ರಲ್ಲಿ (ಮಲ್ಲಿಗೆ ಲೈನ್) ಅಗತ್ಯವಾಗಿವೆ. ಇದನ್ನು ಯಶವಂತಪುರ-ಹೆಬ್ಬಾಳ ನಡುವಿನ 8 ಕಿ.ಮೀ. ಮಾರ್ಗದಲ್ಲಿ ಸದ್ಯದಲ್ಲೇ ಅಳವಡಿಸಲಾಗುವುದು’ ಎಂದಿದ್ದಾರೆ.
ಇಂತಹ ಯು-ಗರ್ಡರ್ ಸಿದ್ಧಪಡಿಸಿರುವುದು ಒಂದು ತಾಂತ್ರಿಕ ಅದ್ಭುತವಾಗಿದ್ದು, ಸರಕಾರಿ ಸ್ವಾಮ್ಯದ ಕೆ-ರೈಡ್ ಇದರ ಉಸ್ತುವಾರಿ ಮತ್ತು ಗುಣಮಟ್ಟ ನಿಯಂತ್ರಣಗಳನ್ನು ನೋಡಿಕೊಂಡಿದೆ. ಇಂತಹ ಗರ್ಡರ್ ಅಳವಡಿಸುವುದರಿಂದ ನೇರವಾಗಿ ಹಳಿಗಳನ್ನು ಅಳವಡಿಸಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…