Categories: ರಾಜ್ಯ

ಸಬರ್ಬನ್ ರೈಲು: 31 ಮೀ. ಉದ್ದದ ಯು-ಗರ್ಡರ್ ಸಿದ್ಧ

ಮಹತ್ವಾಕಾಂಕ್ಷಿ ಬೆಂಗಳೂರು ಸಬರ್ಬನ್ ರೈಲು ಯೋಜನೆಯ ಕಾರಿಡಾರ್-2ರಲ್ಲಿ ಅಳವಡಿಸಲಿರುವ, ದಾಖಲೆಯ 31 ಮೀ. ಉದ್ದದ ಯು-ಗರ್ಡರ್ ಅನ್ನು ದೇವನಹಳ್ಳಿಯಲ್ಲಿರುವ ಕಾಮಗಾರಿ ಸ್ಥಾವರದಲ್ಲಿ (ಕಾಸ್ಟಿಂಗ್ ಯಾರ್ಡ್) ಶನಿವಾರ ರಾತ್ರಿ ಸಿದ್ಧಪಡಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಈ ಬಗ್ಗೆ ಭಾನುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ದೇಶದ ಉಳಿದ ಮೆಟ್ರೋಗಳಲ್ಲಿ 28 ಮೀ. ಉದ್ದದ ಗರ್ಡರ್ (ಸಿಮೆಂಟ್ ಮತ್ತು ಕಬ್ಬಿಣದ ತೊಲೆ) ತಯಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಬೆಂಗಳೂರು ಸಬರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗಿದೆ. ‘ಯು’ ಆಕಾರದಲ್ಲಿರುವ ಇಂತಹ 450 ‘ಯು-ಗರ್ಡರ್’ಗಳು ಕಾರಿಡಾರ್-2ರಲ್ಲಿ (ಮಲ್ಲಿಗೆ ಲೈನ್) ಅಗತ್ಯವಾಗಿವೆ. ಇದನ್ನು ಯಶವಂತಪುರ-ಹೆಬ್ಬಾಳ ನಡುವಿನ 8 ಕಿ.ಮೀ. ಮಾರ್ಗದಲ್ಲಿ ಸದ್ಯದಲ್ಲೇ ಅಳವಡಿಸಲಾಗುವುದು’ ಎಂದಿದ್ದಾರೆ.

ಇಂತಹ ಪ್ರತೀ ಒಂದು ಗರ್ಡರ್ ತಯಾರಿಕೆಗೂ ಎಂ60 ಗುಣಮಟ್ಟದ 69.5 ಕ್ಯೂಬಿಕ್ ಮೀಟರ್ ಕಾಂಕ್ರೀಟ್ ಬೇಕಾಗುತ್ತದೆ. ಇಂತಹ ತೊಲೆಗಳು ತಲಾ 178 ಟನ್ ಭಾರವಿರುತ್ತವೆ. ಇವುಗಳಿಂದ ಕಾಮಗಾರಿಗೆ ತಗುಲುವ ಸಮಯ ಸಾಕಷ್ಟು ಉಳಿಯಲಿದೆ. ಇದನ್ನು ಆಸ್ ಸಿಸ್ಟಮ್ ಕಂಪನಿಯು ಬೆಂಗಳೂರು ಸಬರ್ಬನ್ ರೈಲು ಯೋಜನೆಗಾಗಿ ವಿನ್ಯಾಸಗೊಳಿಸಿದ್ದು, ಚೆನ್ನೈನ ಐಐಟಿ ಮತ್ತು ಜನರಲ್ ಕನ್ಸಲ್ಟೆಂಟ್ ಕಂಪನಿಗಳು ಕೂಡ ಇದರಲ್ಲಿ ಸಕ್ರಿಯ ಪಾತ್ರ ವಹಿಸಿ, ಗುಣಮಟ್ಟವನ್ನು ಖಾತ್ರಿಪಡಿಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇಂತಹ ಯು-ಗರ್ಡರ್ ಸಿದ್ಧಪಡಿಸಿರುವುದು ಒಂದು ತಾಂತ್ರಿಕ ಅದ್ಭುತವಾಗಿದ್ದು, ಸರಕಾರಿ ಸ್ವಾಮ್ಯದ ಕೆ-ರೈಡ್ ಇದರ ಉಸ್ತುವಾರಿ ಮತ್ತು ಗುಣಮಟ್ಟ ನಿಯಂತ್ರಣಗಳನ್ನು ನೋಡಿಕೊಂಡಿದೆ. ಇಂತಹ ಗರ್ಡರ್ ಅಳವಡಿಸುವುದರಿಂದ ನೇರವಾಗಿ ಹಳಿಗಳನ್ನು ಅಳವಡಿಸಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

5 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

22 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

22 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago