Categories: ಕೊಡಗು

ಸಬ್ ಇನ್ಸ್ ಪೆಕ್ಟರ್ ಮತ್ತು ಎ.ಎಸ್.ಐ ಲಾಂಗ್ ತೋರಿಸಿ ಯುವಕರಿಗೆ ಬೆದರಿಕೆ ಪ್ರಕರಣ: ಲಾಂಗ್ ಝಳಪಿಸಿದಕ್ಕೆ ಇಬ್ಬರು ಸಸ್ಪೆಂಡ್

ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ಬಗ್ಗೆ ರಾಜ್ಯದಲ್ಲಿ ಮತ್ತು ಸಾರ್ವಜನಿಕರಲ್ಲಿ ಸದಾಭಿಪ್ರಾಯವಿದೆ. ಅವೆಷ್ಟೋ ಕ್ಲಿಷ್ಟಕರ ಪ್ರಕರಣಗಳನ್ನು ಭೇದಿಸಿ ಪ್ರಶಂಸೆಗೆ ಪಾತ್ರವಾಗಿದೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಸಹಾಯಕ ಸಬ್ ಇನ್ಸ್ ಪೆಕ್ಟರ್ ರಾತ್ರಿಯ ಕರ್ತವ್ಯದಲ್ಲಿ ಲೋಪವೆಸಗಿ ಅಮಾನತುಗೊಂಡಿದ್ದಾರೆ.

ಅಷ್ಟಕ್ಕೂ ನಡೆದಿದ್ದು ಏನು?

ಇತ್ತೀಚಿಗೆ ಸುಂಟಿಕೊಪ್ಪ ಸಮೀಪದ ಗರಂಗಂದೂರು ಗ್ರಾಮದಲ್ಲಿ ತೆರೆ ಮಹೋತ್ಸವವೊಂದು ನಡೆದಿತ್ತು. ಈ ಕಾರ್ಯಕ್ರಮಕ್ಕೆ ಎಂಟು ಜನ ಸ್ನೇಹಿತರು ಅಲ್ಲಿಗೆ ತೆರಳಿ ಮಧ್ಯರಾತ್ರಿ ಎರಡು ಗಂಟೆಗೆ ಸುಮಾರಿಗೆ ಕಾಜುರಿಗೆ ಹೋಗುವ ದಾರಿ ಬಳಿ ಇರುವ ಬಸ್ ಶೆಲ್ಟರ್ ನಲ್ಲಿ ಆಟೋರಿಕ್ಷಕ್ಕಾಗಿ ಕಾದು ಕುಳಿತ ಸಂದರ್ಭ ಒಂದು ಓಮಿನಿ ಕಾರ್ ಹಾಗೂ ನೀಲಿ ನೆಕ್ಸಾನ್ ಕಾರಿನಲ್ಲಿ ಮಫ್ತಿಯಲ್ಲಿ ಬಂದ ಪೊಲೀಸರು ನೇರವಾಗಿ ಬಂದು ಇಸ್ಪೀಟ್ ಎಲ್ಲಿ ಆಡಿದ್ದೀರ ಎಂದು ಹೇಳಿ ಲಾಂಗ್ ಒಬ್ಬರ ಕುತ್ತಿಗೆಗೆ ಹಿಡಿದು ನಂತರ ಬೈಕಿನ 3 ಕೀ ಗಳನ್ನು, ಮೂರು ಮೊಬೈಲ್ ಗಳನ್ನು  ಪಡೆದುಕೊಂಡು ನಾಳೆ ಸ್ಟೇಷನ್ನಿಗೆ ಬರುವಂತೆ ತಿಳಿಸಿ ತೆರಳಿದ್ದಾರೆ.

ಆಟೋಕ್ಕಾಗಿ ಕಾಯುತ್ತಿರುವುದಾಗಿ ಎಂದು ಪರಿಪರಿಯಾಗಿ ಹೇಳಿಕೊಂಡರು ಕೇಳಲಿಲ್ಲ. ಅವರು ತೆರಳಿದ ನಂತರ ಬೈಕುಗಳನ್ನು ಸಮೀಪದ ಸ್ನೇಹಿತರ ಮನೆಯಲ್ಲಿಟ್ಟು ಈ ವಿಚಾರವಾಗಿ ಸುಂಟಿಕೊಪ್ಪದ ಮತ್ತೋರ್ವ ಎ. ಎಸ್ ಐ ಅವರಿಗೆ ದೂರವಾಣಿ ಮೂಲಕ ಅವರ ಸಂಬಂಧಿ ವಿಚಾರ ತಿಳಿಸಿದರು. ಮೇ ನಾಲ್ಕರಂದು ಸಂಜೆ ಠಾಣೆಗೆ ತೆರಳಿದಾಗ, ಎ. ಎಸ್ ಐ ಇವರಿಂದ 3000 ಹಣವನ್ನು ಪಡೆದುಕೊಂಡು ಮೊಬೈಲ್ ಹಾಗೂ ಬೈಕ್ ನ ಕೀ ಗಳನ್ನು ವಾಪಸ್ ನೀಡಿ, ಖಾಲಿ ಪತ್ರದಲ್ಲಿ ಸಹಿ ಮಾಡಿ ಕಳಿಸಿರುತ್ತಾರೆ ಎಂದು ತಿಳಿದುಬಂದಿದೆ.

ತಪ್ಪು ಮಾಡದೆ ಖಾಲಿ ಪತ್ರಕೆ ಸಹಿ ಹಾಕಿಸಿಕೊಂಡಿದ್ದು ಯುವಕರಿಗೆ ಸಂಶಯ ತಂದೊಡ್ಡಿ, ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಬಳಿ ಐವರು ಯುವಕರು ನಡೆದ ಘಟನೆಯ ಬಗ್ಗೆ ವಿವರ ನೀಡಿ ದೂರು ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸೋಮವಾರಪೇಟೆ  ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ತನಿಖೆ ಕೈಗೊಂಡು ನೀಡಿದ ವರದಿ ಅನ್ವಯ ಇದೀಗ ಸಬ್ ಇನ್ಸ್ ಪೆಕ್ಟರ್ ಜಗದೀಶ್, ಸಹಾಯಕ ಸಬ್ ಇನ್ಸ್ ಪೆಕ್ಟರ್ ತೀರ್ಥಕುಮಾರ್ ರವರನ್ನು ಸಸ್ಪೆಂಡ್ ಮಾಡಲಾಗಿದೆ.

ಈ ನಡುವೆ ತೀರ್ಥ ಕುಮಾರ್ ದೂರವಾಣಿ ಮೂಲಕ ನಡೆದ ಘಟನೆ ಹಾಗೂ ಪಡೆದುಕೊಂಡ ಹಣದ ಬಗ್ಗೆ ಮಾತನಾಡಿರುವ ಆಡಿಯೋ ಯುವಕರ ಕೈಗೆ ಸೇರಿದ್ದು, ಇದನ್ನು ಕೂಡ ತನಿಖಾ ಅಧಿಕಾರಿಗಳಿಗೆ ನೀಡಲಾಗಿತ್ತು. ಎಸ್.ಐ, ಹಾಗು ಎ ಎಸ್.ಐ ಅವರು ಕುಡಿದು ರಾತ್ರಿ ಅವಾಂತರ ಸೃಷ್ಟಿಸಿದ್ದಾರೆ ಎಂದು ಯುವಕರು ತನಿಖಾಧಿಕಾರಿಗಳ ಮುಂದೆ ಹೇಳಿದ್ದಾರೆ.

ಬೇರೆ ಬೇರೆ ವೃತ್ತಿಯಲ್ಲಿರುವ ಯುವಕರಿಗೆ ಇಸ್ಪೀಟ್ ಆಟ ತಿಳಿಯದಿದ್ದರೂ, ಇಸ್ಪೀಟ್ ಆಟ ಆಡುತ್ತಿದ್ದಾಗ ಲಾಂಗ್ ತೋರಿಸಿ ದಾಳಿ ನಡೆಸಲಾಗಿದೆ ಎಂದು ಪ್ರಚಾರಪಡಿಸಲಾಗಿದೆ. ಆದರೆ ಪೊಲೀಸರ ತನಿಖೆಯಿಂದ ಇದೀಗ ಯುವಕರು ನಿರಳರಾಗಿದ್ದಾರೆ.

Ramesh Babu

Journalist

Recent Posts

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

13 minutes ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

7 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

8 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

8 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

9 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

21 hours ago