ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ಬಗ್ಗೆ ರಾಜ್ಯದಲ್ಲಿ ಮತ್ತು ಸಾರ್ವಜನಿಕರಲ್ಲಿ ಸದಾಭಿಪ್ರಾಯವಿದೆ. ಅವೆಷ್ಟೋ ಕ್ಲಿಷ್ಟಕರ ಪ್ರಕರಣಗಳನ್ನು ಭೇದಿಸಿ ಪ್ರಶಂಸೆಗೆ ಪಾತ್ರವಾಗಿದೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಸಹಾಯಕ ಸಬ್ ಇನ್ಸ್ ಪೆಕ್ಟರ್ ರಾತ್ರಿಯ ಕರ್ತವ್ಯದಲ್ಲಿ ಲೋಪವೆಸಗಿ ಅಮಾನತುಗೊಂಡಿದ್ದಾರೆ.
ಅಷ್ಟಕ್ಕೂ ನಡೆದಿದ್ದು ಏನು?
ಇತ್ತೀಚಿಗೆ ಸುಂಟಿಕೊಪ್ಪ ಸಮೀಪದ ಗರಂಗಂದೂರು ಗ್ರಾಮದಲ್ಲಿ ತೆರೆ ಮಹೋತ್ಸವವೊಂದು ನಡೆದಿತ್ತು. ಈ ಕಾರ್ಯಕ್ರಮಕ್ಕೆ ಎಂಟು ಜನ ಸ್ನೇಹಿತರು ಅಲ್ಲಿಗೆ ತೆರಳಿ ಮಧ್ಯರಾತ್ರಿ ಎರಡು ಗಂಟೆಗೆ ಸುಮಾರಿಗೆ ಕಾಜುರಿಗೆ ಹೋಗುವ ದಾರಿ ಬಳಿ ಇರುವ ಬಸ್ ಶೆಲ್ಟರ್ ನಲ್ಲಿ ಆಟೋರಿಕ್ಷಕ್ಕಾಗಿ ಕಾದು ಕುಳಿತ ಸಂದರ್ಭ ಒಂದು ಓಮಿನಿ ಕಾರ್ ಹಾಗೂ ನೀಲಿ ನೆಕ್ಸಾನ್ ಕಾರಿನಲ್ಲಿ ಮಫ್ತಿಯಲ್ಲಿ ಬಂದ ಪೊಲೀಸರು ನೇರವಾಗಿ ಬಂದು ಇಸ್ಪೀಟ್ ಎಲ್ಲಿ ಆಡಿದ್ದೀರ ಎಂದು ಹೇಳಿ ಲಾಂಗ್ ಒಬ್ಬರ ಕುತ್ತಿಗೆಗೆ ಹಿಡಿದು ನಂತರ ಬೈಕಿನ 3 ಕೀ ಗಳನ್ನು, ಮೂರು ಮೊಬೈಲ್ ಗಳನ್ನು ಪಡೆದುಕೊಂಡು ನಾಳೆ ಸ್ಟೇಷನ್ನಿಗೆ ಬರುವಂತೆ ತಿಳಿಸಿ ತೆರಳಿದ್ದಾರೆ.
ಆಟೋಕ್ಕಾಗಿ ಕಾಯುತ್ತಿರುವುದಾಗಿ ಎಂದು ಪರಿಪರಿಯಾಗಿ ಹೇಳಿಕೊಂಡರು ಕೇಳಲಿಲ್ಲ. ಅವರು ತೆರಳಿದ ನಂತರ ಬೈಕುಗಳನ್ನು ಸಮೀಪದ ಸ್ನೇಹಿತರ ಮನೆಯಲ್ಲಿಟ್ಟು ಈ ವಿಚಾರವಾಗಿ ಸುಂಟಿಕೊಪ್ಪದ ಮತ್ತೋರ್ವ ಎ. ಎಸ್ ಐ ಅವರಿಗೆ ದೂರವಾಣಿ ಮೂಲಕ ಅವರ ಸಂಬಂಧಿ ವಿಚಾರ ತಿಳಿಸಿದರು. ಮೇ ನಾಲ್ಕರಂದು ಸಂಜೆ ಠಾಣೆಗೆ ತೆರಳಿದಾಗ, ಎ. ಎಸ್ ಐ ಇವರಿಂದ 3000 ಹಣವನ್ನು ಪಡೆದುಕೊಂಡು ಮೊಬೈಲ್ ಹಾಗೂ ಬೈಕ್ ನ ಕೀ ಗಳನ್ನು ವಾಪಸ್ ನೀಡಿ, ಖಾಲಿ ಪತ್ರದಲ್ಲಿ ಸಹಿ ಮಾಡಿ ಕಳಿಸಿರುತ್ತಾರೆ ಎಂದು ತಿಳಿದುಬಂದಿದೆ.
ತಪ್ಪು ಮಾಡದೆ ಖಾಲಿ ಪತ್ರಕೆ ಸಹಿ ಹಾಕಿಸಿಕೊಂಡಿದ್ದು ಯುವಕರಿಗೆ ಸಂಶಯ ತಂದೊಡ್ಡಿ, ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಬಳಿ ಐವರು ಯುವಕರು ನಡೆದ ಘಟನೆಯ ಬಗ್ಗೆ ವಿವರ ನೀಡಿ ದೂರು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸೋಮವಾರಪೇಟೆ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ತನಿಖೆ ಕೈಗೊಂಡು ನೀಡಿದ ವರದಿ ಅನ್ವಯ ಇದೀಗ ಸಬ್ ಇನ್ಸ್ ಪೆಕ್ಟರ್ ಜಗದೀಶ್, ಸಹಾಯಕ ಸಬ್ ಇನ್ಸ್ ಪೆಕ್ಟರ್ ತೀರ್ಥಕುಮಾರ್ ರವರನ್ನು ಸಸ್ಪೆಂಡ್ ಮಾಡಲಾಗಿದೆ.
ಈ ನಡುವೆ ತೀರ್ಥ ಕುಮಾರ್ ದೂರವಾಣಿ ಮೂಲಕ ನಡೆದ ಘಟನೆ ಹಾಗೂ ಪಡೆದುಕೊಂಡ ಹಣದ ಬಗ್ಗೆ ಮಾತನಾಡಿರುವ ಆಡಿಯೋ ಯುವಕರ ಕೈಗೆ ಸೇರಿದ್ದು, ಇದನ್ನು ಕೂಡ ತನಿಖಾ ಅಧಿಕಾರಿಗಳಿಗೆ ನೀಡಲಾಗಿತ್ತು. ಎಸ್.ಐ, ಹಾಗು ಎ ಎಸ್.ಐ ಅವರು ಕುಡಿದು ರಾತ್ರಿ ಅವಾಂತರ ಸೃಷ್ಟಿಸಿದ್ದಾರೆ ಎಂದು ಯುವಕರು ತನಿಖಾಧಿಕಾರಿಗಳ ಮುಂದೆ ಹೇಳಿದ್ದಾರೆ.
ಬೇರೆ ಬೇರೆ ವೃತ್ತಿಯಲ್ಲಿರುವ ಯುವಕರಿಗೆ ಇಸ್ಪೀಟ್ ಆಟ ತಿಳಿಯದಿದ್ದರೂ, ಇಸ್ಪೀಟ್ ಆಟ ಆಡುತ್ತಿದ್ದಾಗ ಲಾಂಗ್ ತೋರಿಸಿ ದಾಳಿ ನಡೆಸಲಾಗಿದೆ ಎಂದು ಪ್ರಚಾರಪಡಿಸಲಾಗಿದೆ. ಆದರೆ ಪೊಲೀಸರ ತನಿಖೆಯಿಂದ ಇದೀಗ ಯುವಕರು ನಿರಳರಾಗಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…