Categories: ಕೊಡಗು

ಸಬ್ ಇನ್ಸ್ ಪೆಕ್ಟರ್ ಮತ್ತು ಎ.ಎಸ್.ಐ ಲಾಂಗ್ ತೋರಿಸಿ ಯುವಕರಿಗೆ ಬೆದರಿಕೆ ಪ್ರಕರಣ: ಲಾಂಗ್ ಝಳಪಿಸಿದಕ್ಕೆ ಇಬ್ಬರು ಸಸ್ಪೆಂಡ್

ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ಬಗ್ಗೆ ರಾಜ್ಯದಲ್ಲಿ ಮತ್ತು ಸಾರ್ವಜನಿಕರಲ್ಲಿ ಸದಾಭಿಪ್ರಾಯವಿದೆ. ಅವೆಷ್ಟೋ ಕ್ಲಿಷ್ಟಕರ ಪ್ರಕರಣಗಳನ್ನು ಭೇದಿಸಿ ಪ್ರಶಂಸೆಗೆ ಪಾತ್ರವಾಗಿದೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಸಹಾಯಕ ಸಬ್ ಇನ್ಸ್ ಪೆಕ್ಟರ್ ರಾತ್ರಿಯ ಕರ್ತವ್ಯದಲ್ಲಿ ಲೋಪವೆಸಗಿ ಅಮಾನತುಗೊಂಡಿದ್ದಾರೆ.

ಅಷ್ಟಕ್ಕೂ ನಡೆದಿದ್ದು ಏನು?

ಇತ್ತೀಚಿಗೆ ಸುಂಟಿಕೊಪ್ಪ ಸಮೀಪದ ಗರಂಗಂದೂರು ಗ್ರಾಮದಲ್ಲಿ ತೆರೆ ಮಹೋತ್ಸವವೊಂದು ನಡೆದಿತ್ತು. ಈ ಕಾರ್ಯಕ್ರಮಕ್ಕೆ ಎಂಟು ಜನ ಸ್ನೇಹಿತರು ಅಲ್ಲಿಗೆ ತೆರಳಿ ಮಧ್ಯರಾತ್ರಿ ಎರಡು ಗಂಟೆಗೆ ಸುಮಾರಿಗೆ ಕಾಜುರಿಗೆ ಹೋಗುವ ದಾರಿ ಬಳಿ ಇರುವ ಬಸ್ ಶೆಲ್ಟರ್ ನಲ್ಲಿ ಆಟೋರಿಕ್ಷಕ್ಕಾಗಿ ಕಾದು ಕುಳಿತ ಸಂದರ್ಭ ಒಂದು ಓಮಿನಿ ಕಾರ್ ಹಾಗೂ ನೀಲಿ ನೆಕ್ಸಾನ್ ಕಾರಿನಲ್ಲಿ ಮಫ್ತಿಯಲ್ಲಿ ಬಂದ ಪೊಲೀಸರು ನೇರವಾಗಿ ಬಂದು ಇಸ್ಪೀಟ್ ಎಲ್ಲಿ ಆಡಿದ್ದೀರ ಎಂದು ಹೇಳಿ ಲಾಂಗ್ ಒಬ್ಬರ ಕುತ್ತಿಗೆಗೆ ಹಿಡಿದು ನಂತರ ಬೈಕಿನ 3 ಕೀ ಗಳನ್ನು, ಮೂರು ಮೊಬೈಲ್ ಗಳನ್ನು  ಪಡೆದುಕೊಂಡು ನಾಳೆ ಸ್ಟೇಷನ್ನಿಗೆ ಬರುವಂತೆ ತಿಳಿಸಿ ತೆರಳಿದ್ದಾರೆ.

ಆಟೋಕ್ಕಾಗಿ ಕಾಯುತ್ತಿರುವುದಾಗಿ ಎಂದು ಪರಿಪರಿಯಾಗಿ ಹೇಳಿಕೊಂಡರು ಕೇಳಲಿಲ್ಲ. ಅವರು ತೆರಳಿದ ನಂತರ ಬೈಕುಗಳನ್ನು ಸಮೀಪದ ಸ್ನೇಹಿತರ ಮನೆಯಲ್ಲಿಟ್ಟು ಈ ವಿಚಾರವಾಗಿ ಸುಂಟಿಕೊಪ್ಪದ ಮತ್ತೋರ್ವ ಎ. ಎಸ್ ಐ ಅವರಿಗೆ ದೂರವಾಣಿ ಮೂಲಕ ಅವರ ಸಂಬಂಧಿ ವಿಚಾರ ತಿಳಿಸಿದರು. ಮೇ ನಾಲ್ಕರಂದು ಸಂಜೆ ಠಾಣೆಗೆ ತೆರಳಿದಾಗ, ಎ. ಎಸ್ ಐ ಇವರಿಂದ 3000 ಹಣವನ್ನು ಪಡೆದುಕೊಂಡು ಮೊಬೈಲ್ ಹಾಗೂ ಬೈಕ್ ನ ಕೀ ಗಳನ್ನು ವಾಪಸ್ ನೀಡಿ, ಖಾಲಿ ಪತ್ರದಲ್ಲಿ ಸಹಿ ಮಾಡಿ ಕಳಿಸಿರುತ್ತಾರೆ ಎಂದು ತಿಳಿದುಬಂದಿದೆ.

ತಪ್ಪು ಮಾಡದೆ ಖಾಲಿ ಪತ್ರಕೆ ಸಹಿ ಹಾಕಿಸಿಕೊಂಡಿದ್ದು ಯುವಕರಿಗೆ ಸಂಶಯ ತಂದೊಡ್ಡಿ, ನೇರವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಬಳಿ ಐವರು ಯುವಕರು ನಡೆದ ಘಟನೆಯ ಬಗ್ಗೆ ವಿವರ ನೀಡಿ ದೂರು ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸೋಮವಾರಪೇಟೆ  ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ತನಿಖೆ ಕೈಗೊಂಡು ನೀಡಿದ ವರದಿ ಅನ್ವಯ ಇದೀಗ ಸಬ್ ಇನ್ಸ್ ಪೆಕ್ಟರ್ ಜಗದೀಶ್, ಸಹಾಯಕ ಸಬ್ ಇನ್ಸ್ ಪೆಕ್ಟರ್ ತೀರ್ಥಕುಮಾರ್ ರವರನ್ನು ಸಸ್ಪೆಂಡ್ ಮಾಡಲಾಗಿದೆ.

ಈ ನಡುವೆ ತೀರ್ಥ ಕುಮಾರ್ ದೂರವಾಣಿ ಮೂಲಕ ನಡೆದ ಘಟನೆ ಹಾಗೂ ಪಡೆದುಕೊಂಡ ಹಣದ ಬಗ್ಗೆ ಮಾತನಾಡಿರುವ ಆಡಿಯೋ ಯುವಕರ ಕೈಗೆ ಸೇರಿದ್ದು, ಇದನ್ನು ಕೂಡ ತನಿಖಾ ಅಧಿಕಾರಿಗಳಿಗೆ ನೀಡಲಾಗಿತ್ತು. ಎಸ್.ಐ, ಹಾಗು ಎ ಎಸ್.ಐ ಅವರು ಕುಡಿದು ರಾತ್ರಿ ಅವಾಂತರ ಸೃಷ್ಟಿಸಿದ್ದಾರೆ ಎಂದು ಯುವಕರು ತನಿಖಾಧಿಕಾರಿಗಳ ಮುಂದೆ ಹೇಳಿದ್ದಾರೆ.

ಬೇರೆ ಬೇರೆ ವೃತ್ತಿಯಲ್ಲಿರುವ ಯುವಕರಿಗೆ ಇಸ್ಪೀಟ್ ಆಟ ತಿಳಿಯದಿದ್ದರೂ, ಇಸ್ಪೀಟ್ ಆಟ ಆಡುತ್ತಿದ್ದಾಗ ಲಾಂಗ್ ತೋರಿಸಿ ದಾಳಿ ನಡೆಸಲಾಗಿದೆ ಎಂದು ಪ್ರಚಾರಪಡಿಸಲಾಗಿದೆ. ಆದರೆ ಪೊಲೀಸರ ತನಿಖೆಯಿಂದ ಇದೀಗ ಯುವಕರು ನಿರಳರಾಗಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

5 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

6 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

7 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

7 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

11 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

13 hours ago