ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ- ಸಚಿವ ಕೆ.ಜೆ ಜಾರ್ಜ್

“ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. 18,500 ಮೆಗಾವ್ಯಾಟ್ ವರೆಗೆ ಬೇಡಿಕೆ ಇದ್ದು, ಅಷ್ಟು ವಿದ್ಯುತ್ ಪೂರೈಸಲು ಸಮರ್ಥರಾಗಿದ್ದೇವೆ. ಅದಕ್ಕಾಗಿ ವಿದ್ಯುತ್ ತಂತಿಗಳ ಬದಲಾವಣೆ, ಹೊಸಸಬ್ ಸ್ಟೇಷನ್ ಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಹೊಸದಾಗಿ ನಿರ್ಮಾಣ ಮಾಡುತ್ತಿರುವ 100 ಸಬ್ ಸ್ಟೇಷನ್ ಗಳ ಮಲಕ 3 ಸಾವಿರ ಮಗಾವ್ಯಾಟ್ ವಿದ್ಯುತ್ ಸಂಗ್ರಹಿಸಿ ಪೂರೈಸಲು ಅವಕಾಶ ಇದೆ ಈ ಪೈಕಿ 1,500 ಮೆಗಾವ್ಯಾಟ್ ವಿದ್ಯುತ್ತನ್ನು ರೈತರಿಗೆ ಪೂರೈಸಿದರೆ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯಲಿದೆ”, ಎಂದು ಹೇಳಿದರು.

“ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ವಿದ್ಯುತ್ ಕ್ಷೇತ್ರಕ್ಕೆ ಆದ್ಯತೆ ನೀಡಿರಲಿಲ್ಲ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಯಾದ ಬಳಿಕ ವಿದ್ಯುತ್ ಉತ್ಪಾದನೆ ಮತ್ತು ಸಮರ್ಪಕ ಪೂರೈಕೆಗೆ ಆದ್ಯತೆ ನೀಡಲಾಯಿತು. ರೈತರಿಗೆ ದಿನದ 7 ಗಂಟೆವಿದ್ಯುತ್ ಪೂರೈಸುವುದಾಗಿ ಮಖ್ಯಮಂತ್ರಿಗಳು ಮಾತು ಕೊಟ್ಟಿದ್ದು, ಅದನ್ನು ಜಾರಿಗೊಳಿಸಲು ನಡೆಸಿದ ಪ್ರಯತ್ನ ಫಲ ನೀಡಿದೆ. ಪ್ರತಿ ದಿನ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ”, ಎಂದು ತಿಳಿಸಿದರು.

“ವಿದ್ಯುತ್ ಉತ್ಪಾದನಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಾವಗಡದಲ್ಲಿ ಈಗಿರುವ 2050 ಮೆಗಾ ವ್ಯಾಟ್‌ ಉತ್ಪಾದನಾ ಸಾಮರ್ಥ್ಯದ ಸೋಲಾರ್ ಪಾರ್ಕ್ ಜತೆಗೆ ಮತ್ತೆ 10 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವ ಗುರಿ ಹೊಂದಲಾಗಿದೆ. ಆ ಮೂಲಕ ಪಾವಗಡ ಸೋಲಾರ್ ಪಾರ್ಕನ್ನು ಮತ್ತೆ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಆಗಿ ಹೊರಹೊಮ್ಮುವಂತೆ ಮಾಡಲಾಗುವುದು”, ಎಂದರು.

“ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುವಂತೆ ನೋಡಿಕೊಳ್ಳಲು ಹೆಚ್ಚು ರೈತ ಬಜಾರ್ ಗಳನ್ನು ಸ್ಥಾಪಿಸಬೇಕು ಎಂದು ಹೇಳಿದ ಅವರು, ಸಾವಯವ ಉತ್ಪನ್ನಗಳಿಗೆ ವಿದೇಶಗಳಲ್ಲಿ ಹೆಚ್ಚು ಬೇಡಿಕೆ ಇರುವುದರಿಂದ ಈ ಉತ್ಪನ್ನಗಳನ್ನು ಬೆಳೆಯಲು ರೈತರು ಆದ್ಯತೆ ನಡಬೇಕು. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತದೆ”, ಎಂದು ಹೇಳಿದರು.

Ramesh Babu

Journalist

Recent Posts

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

45 seconds ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

1 hour ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

6 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

7 hours ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

8 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

17 hours ago