ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ- ಸಚಿವ ಕೆ.ಜೆ ಜಾರ್ಜ್

“ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. 18,500 ಮೆಗಾವ್ಯಾಟ್ ವರೆಗೆ ಬೇಡಿಕೆ ಇದ್ದು, ಅಷ್ಟು ವಿದ್ಯುತ್ ಪೂರೈಸಲು ಸಮರ್ಥರಾಗಿದ್ದೇವೆ. ಅದಕ್ಕಾಗಿ ವಿದ್ಯುತ್ ತಂತಿಗಳ ಬದಲಾವಣೆ, ಹೊಸಸಬ್ ಸ್ಟೇಷನ್ ಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಹೊಸದಾಗಿ ನಿರ್ಮಾಣ ಮಾಡುತ್ತಿರುವ 100 ಸಬ್ ಸ್ಟೇಷನ್ ಗಳ ಮಲಕ 3 ಸಾವಿರ ಮಗಾವ್ಯಾಟ್ ವಿದ್ಯುತ್ ಸಂಗ್ರಹಿಸಿ ಪೂರೈಸಲು ಅವಕಾಶ ಇದೆ ಈ ಪೈಕಿ 1,500 ಮೆಗಾವ್ಯಾಟ್ ವಿದ್ಯುತ್ತನ್ನು ರೈತರಿಗೆ ಪೂರೈಸಿದರೆ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯಲಿದೆ”, ಎಂದು ಹೇಳಿದರು.

“ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ವಿದ್ಯುತ್ ಕ್ಷೇತ್ರಕ್ಕೆ ಆದ್ಯತೆ ನೀಡಿರಲಿಲ್ಲ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಯಾದ ಬಳಿಕ ವಿದ್ಯುತ್ ಉತ್ಪಾದನೆ ಮತ್ತು ಸಮರ್ಪಕ ಪೂರೈಕೆಗೆ ಆದ್ಯತೆ ನೀಡಲಾಯಿತು. ರೈತರಿಗೆ ದಿನದ 7 ಗಂಟೆವಿದ್ಯುತ್ ಪೂರೈಸುವುದಾಗಿ ಮಖ್ಯಮಂತ್ರಿಗಳು ಮಾತು ಕೊಟ್ಟಿದ್ದು, ಅದನ್ನು ಜಾರಿಗೊಳಿಸಲು ನಡೆಸಿದ ಪ್ರಯತ್ನ ಫಲ ನೀಡಿದೆ. ಪ್ರತಿ ದಿನ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ”, ಎಂದು ತಿಳಿಸಿದರು.

“ವಿದ್ಯುತ್ ಉತ್ಪಾದನಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಾವಗಡದಲ್ಲಿ ಈಗಿರುವ 2050 ಮೆಗಾ ವ್ಯಾಟ್‌ ಉತ್ಪಾದನಾ ಸಾಮರ್ಥ್ಯದ ಸೋಲಾರ್ ಪಾರ್ಕ್ ಜತೆಗೆ ಮತ್ತೆ 10 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವ ಗುರಿ ಹೊಂದಲಾಗಿದೆ. ಆ ಮೂಲಕ ಪಾವಗಡ ಸೋಲಾರ್ ಪಾರ್ಕನ್ನು ಮತ್ತೆ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಆಗಿ ಹೊರಹೊಮ್ಮುವಂತೆ ಮಾಡಲಾಗುವುದು”, ಎಂದರು.

“ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುವಂತೆ ನೋಡಿಕೊಳ್ಳಲು ಹೆಚ್ಚು ರೈತ ಬಜಾರ್ ಗಳನ್ನು ಸ್ಥಾಪಿಸಬೇಕು ಎಂದು ಹೇಳಿದ ಅವರು, ಸಾವಯವ ಉತ್ಪನ್ನಗಳಿಗೆ ವಿದೇಶಗಳಲ್ಲಿ ಹೆಚ್ಚು ಬೇಡಿಕೆ ಇರುವುದರಿಂದ ಈ ಉತ್ಪನ್ನಗಳನ್ನು ಬೆಳೆಯಲು ರೈತರು ಆದ್ಯತೆ ನಡಬೇಕು. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತದೆ”, ಎಂದು ಹೇಳಿದರು.

Ramesh Babu

Journalist

Recent Posts

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

6 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

7 hours ago

“ಬದುಕಿನ ಬೆಳದಿಂಗಳು”

ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…

8 hours ago

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…

9 hours ago

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…

10 hours ago

ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…

11 hours ago