“ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. 18,500 ಮೆಗಾವ್ಯಾಟ್ ವರೆಗೆ ಬೇಡಿಕೆ ಇದ್ದು, ಅಷ್ಟು ವಿದ್ಯುತ್ ಪೂರೈಸಲು ಸಮರ್ಥರಾಗಿದ್ದೇವೆ. ಅದಕ್ಕಾಗಿ ವಿದ್ಯುತ್ ತಂತಿಗಳ ಬದಲಾವಣೆ, ಹೊಸಸಬ್ ಸ್ಟೇಷನ್ ಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಹೊಸದಾಗಿ ನಿರ್ಮಾಣ ಮಾಡುತ್ತಿರುವ 100 ಸಬ್ ಸ್ಟೇಷನ್ ಗಳ ಮಲಕ 3 ಸಾವಿರ ಮಗಾವ್ಯಾಟ್ ವಿದ್ಯುತ್ ಸಂಗ್ರಹಿಸಿ ಪೂರೈಸಲು ಅವಕಾಶ ಇದೆ ಈ ಪೈಕಿ 1,500 ಮೆಗಾವ್ಯಾಟ್ ವಿದ್ಯುತ್ತನ್ನು ರೈತರಿಗೆ ಪೂರೈಸಿದರೆ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯಲಿದೆ”, ಎಂದು ಹೇಳಿದರು.
“ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ವಿದ್ಯುತ್ ಕ್ಷೇತ್ರಕ್ಕೆ ಆದ್ಯತೆ ನೀಡಿರಲಿಲ್ಲ. ಆದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಯಾದ ಬಳಿಕ ವಿದ್ಯುತ್ ಉತ್ಪಾದನೆ ಮತ್ತು ಸಮರ್ಪಕ ಪೂರೈಕೆಗೆ ಆದ್ಯತೆ ನೀಡಲಾಯಿತು. ರೈತರಿಗೆ ದಿನದ 7 ಗಂಟೆವಿದ್ಯುತ್ ಪೂರೈಸುವುದಾಗಿ ಮಖ್ಯಮಂತ್ರಿಗಳು ಮಾತು ಕೊಟ್ಟಿದ್ದು, ಅದನ್ನು ಜಾರಿಗೊಳಿಸಲು ನಡೆಸಿದ ಪ್ರಯತ್ನ ಫಲ ನೀಡಿದೆ. ಪ್ರತಿ ದಿನ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ”, ಎಂದು ತಿಳಿಸಿದರು.
“ವಿದ್ಯುತ್ ಉತ್ಪಾದನಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪಾವಗಡದಲ್ಲಿ ಈಗಿರುವ 2050 ಮೆಗಾ ವ್ಯಾಟ್ ಉತ್ಪಾದನಾ ಸಾಮರ್ಥ್ಯದ ಸೋಲಾರ್ ಪಾರ್ಕ್ ಜತೆಗೆ ಮತ್ತೆ 10 ಸಾವಿರ ಎಕರೆಯಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವ ಗುರಿ ಹೊಂದಲಾಗಿದೆ. ಆ ಮೂಲಕ ಪಾವಗಡ ಸೋಲಾರ್ ಪಾರ್ಕನ್ನು ಮತ್ತೆ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಆಗಿ ಹೊರಹೊಮ್ಮುವಂತೆ ಮಾಡಲಾಗುವುದು”, ಎಂದರು.
“ರೈತರು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುವಂತೆ ನೋಡಿಕೊಳ್ಳಲು ಹೆಚ್ಚು ರೈತ ಬಜಾರ್ ಗಳನ್ನು ಸ್ಥಾಪಿಸಬೇಕು ಎಂದು ಹೇಳಿದ ಅವರು, ಸಾವಯವ ಉತ್ಪನ್ನಗಳಿಗೆ ವಿದೇಶಗಳಲ್ಲಿ ಹೆಚ್ಚು ಬೇಡಿಕೆ ಇರುವುದರಿಂದ ಈ ಉತ್ಪನ್ನಗಳನ್ನು ಬೆಳೆಯಲು ರೈತರು ಆದ್ಯತೆ ನಡಬೇಕು. ಇದಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತದೆ”, ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…