Categories: ವಿಜಯನಗರ

ಸಮಸಮಾಜ ನಿರ್ಮಾಣಕ್ಕೆ ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಅವರು ಮಾತನಾಡಿದರು.

ಸರ್ವಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿರುವ ವಧು – ವರರಿಗೆ ಶುಭ ಹಾರೈಸಿದರು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಹಲವು ಉದಾತ್ತ ತತ್ವವನ್ನು ಬೋಧಿಸಿದ ಬಸವೇಶ್ವರರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ ಎಂದು ತಿಳಿಸಿದರು.

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ.
ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು ಎಂದರು.

ಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು, ಈ ಮೂಲಕ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಡಾ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಪಡೆದು, ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯವಾಗಿದೆ ಎಂದು ಹೇಳಿದರು.

Ramesh Babu

Journalist

Share
Published by
Ramesh Babu

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

28 minutes ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

5 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

5 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

13 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago