ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಅವರು ಮಾತನಾಡಿದರು.
ಸರ್ವಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿರುವ ವಧು – ವರರಿಗೆ ಶುಭ ಹಾರೈಸಿದರು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.
ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಹಲವು ಉದಾತ್ತ ತತ್ವವನ್ನು ಬೋಧಿಸಿದ ಬಸವೇಶ್ವರರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ ಎಂದು ತಿಳಿಸಿದರು.
ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ.
ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು ಎಂದರು.
ಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು, ಈ ಮೂಲಕ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಡಾ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಪಡೆದು, ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯವಾಗಿದೆ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…