ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಅವರು ಮಾತನಾಡಿದರು.
ಸರ್ವಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿರುವ ವಧು – ವರರಿಗೆ ಶುಭ ಹಾರೈಸಿದರು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.
ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. ‘ದಯವೇ ಧರ್ಮದ ಮೂಲವಯ್ಯ’ ಎಂದು ನುಡಿದು, ಹಲವು ಉದಾತ್ತ ತತ್ವವನ್ನು ಬೋಧಿಸಿದ ಬಸವೇಶ್ವರರನ್ನು ಸರ್ಕಾರ ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದೆ ಎಂದು ತಿಳಿಸಿದರು.
ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ.
ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು ಎಂದರು.
ಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು, ಈ ಮೂಲಕ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಡಾ. ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಪಡೆದು, ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯವಾಗಿದೆ ಎಂದು ಹೇಳಿದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…