Categories: ಕೋಲಾರ

ಸಮಸ್ಯೆಗೆ ಮೊದಲ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ತಾಕೀತು

ಕೋಲಾರ: ನಗರಸಭೆ ಸದಸ್ಯರು ನಗರದ ಜನತೆಯ ಆಶೀರ್ವಾದದಿಂದ ಆಯ್ಕೆಯಾದ ಜನಪ್ರತಿನಿಧಿಗಳು ಅವರನ್ನು ಗೌರವಯತವಾಗಿ ನಡೆದುಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಅದನ್ನು ಅರಿತು ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ನಗರಸಭೆಯ ಆವರಣದಲ್ಲಿ
ಫಲಾನುಭವಿಗಳಿಗೆ ತ್ರಿಚಕ್ರವಾಹನ ವಿತರಿಸಿ ಮಾತನಾಡಿದ ಅವರು, ನಗರಸಭೆ ಸದಸ್ಯರ ಜವಾಬ್ದಾರಿ ಶಾಸಕರಿಗಿಂತ ಹೆಚ್ಚು ಇರುತ್ತದೆ. ಏನೇ ಸಮಸ್ಯೆ ಎದುರಾದರು ಜನ ಮೊದಲು ಸಂಪರ್ಕಿಸುವುದು ನಗರಸಭೆ ಸದಸ್ಯರನ್ನು. ಹೀಗಾಗಿ ಸಾರ್ವಜನಿಕರ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದಾಗ ಅಧಿಕಾರಿಗಳು ಕಾಳಜಿಯಿಂದ ಬಗೆಹರಿಸಬೇಕು ಎಂದರು.

ಕೋಲಾರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೧೫ನೇ ಹಣಕಾಸು ಯೋಜನೆಯಲ್ಲಿ ಸುಮಾರು 8.14 ಕೋಟಿ ಮಂಜೂರಾಗಿದ್ದು, ಕ್ರಿಯಾಯೋಜನೆ ತಯಾರಿಸಿ ಆದ್ಯತೆ ಮೇರೆಗೆ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಇದಕ್ಕೆ ಸದಸ್ಯರು ಸಹಕಾರ ನೀಡಬೇಕು. ನಗರದಲ್ಲಿ ಸ್ವಚ್ಚತೆ ಸಮಸ್ಯೆಯಿದೆ ಏಪ್ರಿಲ್, ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿಗೆ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ ನಗರಸಭೆ ಸದಸ್ಯರು, ಮುಳಬಾಗಿಲು ಸದಸ್ಯರಿಗಿಂತ 10 ಹೆಜ್ಜೆ ಮುಂದಿದ್ದು, ಉತ್ತಮ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನಗರಸಭೆ ಎಂದರೆ ಸ್ವಚ್ಚಗೊಳಿಸುವುದು ಎಂದು ಅರ್ಥ. ಅದನ್ನು ಸಮರ್ಥಿಸಿಕೊಂಡು ಹೋಗುವುದು ಅಧಿಕಾರಿಗಳು ಮತ್ತು ಸದಸ್ಯರ ಕೆಲಸ. ಯಾವುದೇ ವಾರ್ಡಿನಲ್ಲಿ ಯುಜಿಡಿ, ನೀರು, ರಸ್ತೆ, ಚರಂಡಿ ಸಮಸ್ಯೆಯಿದ್ದರೆ ಪ್ರಮಾಣಿಕವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಪೌರಾಯುಕ್ತ ಶಿವಾನಂದ, ಸದಸ್ಯರಾದ ಅಂಬರೀಶ್, ಎಸ್.ಆರ್.ಮುರಳೀಗೌಡ, ರಾಕೇಶ್, ಷರೀಪ್, ಗುಣಶೇಖರ್ ಮುಂತಾದವರು ಇದ್ದರು

Ramesh Babu

Journalist

Recent Posts

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

46 minutes ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

9 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

14 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

17 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

18 hours ago

ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್…

18 hours ago