Categories: ಕೋಲಾರ

ಸಮಸ್ಯೆಗೆ ಮೊದಲ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ತಾಕೀತು

ಕೋಲಾರ: ನಗರಸಭೆ ಸದಸ್ಯರು ನಗರದ ಜನತೆಯ ಆಶೀರ್ವಾದದಿಂದ ಆಯ್ಕೆಯಾದ ಜನಪ್ರತಿನಿಧಿಗಳು ಅವರನ್ನು ಗೌರವಯತವಾಗಿ ನಡೆದುಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಅದನ್ನು ಅರಿತು ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ನಗರಸಭೆಯ ಆವರಣದಲ್ಲಿ
ಫಲಾನುಭವಿಗಳಿಗೆ ತ್ರಿಚಕ್ರವಾಹನ ವಿತರಿಸಿ ಮಾತನಾಡಿದ ಅವರು, ನಗರಸಭೆ ಸದಸ್ಯರ ಜವಾಬ್ದಾರಿ ಶಾಸಕರಿಗಿಂತ ಹೆಚ್ಚು ಇರುತ್ತದೆ. ಏನೇ ಸಮಸ್ಯೆ ಎದುರಾದರು ಜನ ಮೊದಲು ಸಂಪರ್ಕಿಸುವುದು ನಗರಸಭೆ ಸದಸ್ಯರನ್ನು. ಹೀಗಾಗಿ ಸಾರ್ವಜನಿಕರ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದಾಗ ಅಧಿಕಾರಿಗಳು ಕಾಳಜಿಯಿಂದ ಬಗೆಹರಿಸಬೇಕು ಎಂದರು.

ಕೋಲಾರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೧೫ನೇ ಹಣಕಾಸು ಯೋಜನೆಯಲ್ಲಿ ಸುಮಾರು 8.14 ಕೋಟಿ ಮಂಜೂರಾಗಿದ್ದು, ಕ್ರಿಯಾಯೋಜನೆ ತಯಾರಿಸಿ ಆದ್ಯತೆ ಮೇರೆಗೆ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಇದಕ್ಕೆ ಸದಸ್ಯರು ಸಹಕಾರ ನೀಡಬೇಕು. ನಗರದಲ್ಲಿ ಸ್ವಚ್ಚತೆ ಸಮಸ್ಯೆಯಿದೆ ಏಪ್ರಿಲ್, ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿಗೆ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ ನಗರಸಭೆ ಸದಸ್ಯರು, ಮುಳಬಾಗಿಲು ಸದಸ್ಯರಿಗಿಂತ 10 ಹೆಜ್ಜೆ ಮುಂದಿದ್ದು, ಉತ್ತಮ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನಗರಸಭೆ ಎಂದರೆ ಸ್ವಚ್ಚಗೊಳಿಸುವುದು ಎಂದು ಅರ್ಥ. ಅದನ್ನು ಸಮರ್ಥಿಸಿಕೊಂಡು ಹೋಗುವುದು ಅಧಿಕಾರಿಗಳು ಮತ್ತು ಸದಸ್ಯರ ಕೆಲಸ. ಯಾವುದೇ ವಾರ್ಡಿನಲ್ಲಿ ಯುಜಿಡಿ, ನೀರು, ರಸ್ತೆ, ಚರಂಡಿ ಸಮಸ್ಯೆಯಿದ್ದರೆ ಪ್ರಮಾಣಿಕವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಪೌರಾಯುಕ್ತ ಶಿವಾನಂದ, ಸದಸ್ಯರಾದ ಅಂಬರೀಶ್, ಎಸ್.ಆರ್.ಮುರಳೀಗೌಡ, ರಾಕೇಶ್, ಷರೀಪ್, ಗುಣಶೇಖರ್ ಮುಂತಾದವರು ಇದ್ದರು

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

2 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

5 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

5 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

6 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

7 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

12 hours ago