Categories: ಕೋಲಾರ

ಸಮಸ್ಯೆಗೆ ಮೊದಲ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ತಾಕೀತು

ಕೋಲಾರ: ನಗರಸಭೆ ಸದಸ್ಯರು ನಗರದ ಜನತೆಯ ಆಶೀರ್ವಾದದಿಂದ ಆಯ್ಕೆಯಾದ ಜನಪ್ರತಿನಿಧಿಗಳು ಅವರನ್ನು ಗೌರವಯತವಾಗಿ ನಡೆದುಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಅದನ್ನು ಅರಿತು ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ನಗರಸಭೆಯ ಆವರಣದಲ್ಲಿ
ಫಲಾನುಭವಿಗಳಿಗೆ ತ್ರಿಚಕ್ರವಾಹನ ವಿತರಿಸಿ ಮಾತನಾಡಿದ ಅವರು, ನಗರಸಭೆ ಸದಸ್ಯರ ಜವಾಬ್ದಾರಿ ಶಾಸಕರಿಗಿಂತ ಹೆಚ್ಚು ಇರುತ್ತದೆ. ಏನೇ ಸಮಸ್ಯೆ ಎದುರಾದರು ಜನ ಮೊದಲು ಸಂಪರ್ಕಿಸುವುದು ನಗರಸಭೆ ಸದಸ್ಯರನ್ನು. ಹೀಗಾಗಿ ಸಾರ್ವಜನಿಕರ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದಾಗ ಅಧಿಕಾರಿಗಳು ಕಾಳಜಿಯಿಂದ ಬಗೆಹರಿಸಬೇಕು ಎಂದರು.

ಕೋಲಾರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೧೫ನೇ ಹಣಕಾಸು ಯೋಜನೆಯಲ್ಲಿ ಸುಮಾರು 8.14 ಕೋಟಿ ಮಂಜೂರಾಗಿದ್ದು, ಕ್ರಿಯಾಯೋಜನೆ ತಯಾರಿಸಿ ಆದ್ಯತೆ ಮೇರೆಗೆ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಇದಕ್ಕೆ ಸದಸ್ಯರು ಸಹಕಾರ ನೀಡಬೇಕು. ನಗರದಲ್ಲಿ ಸ್ವಚ್ಚತೆ ಸಮಸ್ಯೆಯಿದೆ ಏಪ್ರಿಲ್, ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿಗೆ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ ನಗರಸಭೆ ಸದಸ್ಯರು, ಮುಳಬಾಗಿಲು ಸದಸ್ಯರಿಗಿಂತ 10 ಹೆಜ್ಜೆ ಮುಂದಿದ್ದು, ಉತ್ತಮ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನಗರಸಭೆ ಎಂದರೆ ಸ್ವಚ್ಚಗೊಳಿಸುವುದು ಎಂದು ಅರ್ಥ. ಅದನ್ನು ಸಮರ್ಥಿಸಿಕೊಂಡು ಹೋಗುವುದು ಅಧಿಕಾರಿಗಳು ಮತ್ತು ಸದಸ್ಯರ ಕೆಲಸ. ಯಾವುದೇ ವಾರ್ಡಿನಲ್ಲಿ ಯುಜಿಡಿ, ನೀರು, ರಸ್ತೆ, ಚರಂಡಿ ಸಮಸ್ಯೆಯಿದ್ದರೆ ಪ್ರಮಾಣಿಕವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಪೌರಾಯುಕ್ತ ಶಿವಾನಂದ, ಸದಸ್ಯರಾದ ಅಂಬರೀಶ್, ಎಸ್.ಆರ್.ಮುರಳೀಗೌಡ, ರಾಕೇಶ್, ಷರೀಪ್, ಗುಣಶೇಖರ್ ಮುಂತಾದವರು ಇದ್ದರು

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

21 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago