Categories: ಕೋಲಾರ

ಸಮಸ್ಯೆಗೆ ಮೊದಲ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ತಾಕೀತು

ಕೋಲಾರ: ನಗರಸಭೆ ಸದಸ್ಯರು ನಗರದ ಜನತೆಯ ಆಶೀರ್ವಾದದಿಂದ ಆಯ್ಕೆಯಾದ ಜನಪ್ರತಿನಿಧಿಗಳು ಅವರನ್ನು ಗೌರವಯತವಾಗಿ ನಡೆದುಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಅದನ್ನು ಅರಿತು ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ನಗರಸಭೆಯ ಆವರಣದಲ್ಲಿ
ಫಲಾನುಭವಿಗಳಿಗೆ ತ್ರಿಚಕ್ರವಾಹನ ವಿತರಿಸಿ ಮಾತನಾಡಿದ ಅವರು, ನಗರಸಭೆ ಸದಸ್ಯರ ಜವಾಬ್ದಾರಿ ಶಾಸಕರಿಗಿಂತ ಹೆಚ್ಚು ಇರುತ್ತದೆ. ಏನೇ ಸಮಸ್ಯೆ ಎದುರಾದರು ಜನ ಮೊದಲು ಸಂಪರ್ಕಿಸುವುದು ನಗರಸಭೆ ಸದಸ್ಯರನ್ನು. ಹೀಗಾಗಿ ಸಾರ್ವಜನಿಕರ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದಾಗ ಅಧಿಕಾರಿಗಳು ಕಾಳಜಿಯಿಂದ ಬಗೆಹರಿಸಬೇಕು ಎಂದರು.

ಕೋಲಾರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೧೫ನೇ ಹಣಕಾಸು ಯೋಜನೆಯಲ್ಲಿ ಸುಮಾರು 8.14 ಕೋಟಿ ಮಂಜೂರಾಗಿದ್ದು, ಕ್ರಿಯಾಯೋಜನೆ ತಯಾರಿಸಿ ಆದ್ಯತೆ ಮೇರೆಗೆ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಇದಕ್ಕೆ ಸದಸ್ಯರು ಸಹಕಾರ ನೀಡಬೇಕು. ನಗರದಲ್ಲಿ ಸ್ವಚ್ಚತೆ ಸಮಸ್ಯೆಯಿದೆ ಏಪ್ರಿಲ್, ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿಗೆ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ ನಗರಸಭೆ ಸದಸ್ಯರು, ಮುಳಬಾಗಿಲು ಸದಸ್ಯರಿಗಿಂತ 10 ಹೆಜ್ಜೆ ಮುಂದಿದ್ದು, ಉತ್ತಮ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನಗರಸಭೆ ಎಂದರೆ ಸ್ವಚ್ಚಗೊಳಿಸುವುದು ಎಂದು ಅರ್ಥ. ಅದನ್ನು ಸಮರ್ಥಿಸಿಕೊಂಡು ಹೋಗುವುದು ಅಧಿಕಾರಿಗಳು ಮತ್ತು ಸದಸ್ಯರ ಕೆಲಸ. ಯಾವುದೇ ವಾರ್ಡಿನಲ್ಲಿ ಯುಜಿಡಿ, ನೀರು, ರಸ್ತೆ, ಚರಂಡಿ ಸಮಸ್ಯೆಯಿದ್ದರೆ ಪ್ರಮಾಣಿಕವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಪೌರಾಯುಕ್ತ ಶಿವಾನಂದ, ಸದಸ್ಯರಾದ ಅಂಬರೀಶ್, ಎಸ್.ಆರ್.ಮುರಳೀಗೌಡ, ರಾಕೇಶ್, ಷರೀಪ್, ಗುಣಶೇಖರ್ ಮುಂತಾದವರು ಇದ್ದರು

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

45 minutes ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

8 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

9 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

22 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

22 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

22 hours ago