ಕೋಲಾರ: ನಗರಸಭೆ ಸದಸ್ಯರು ನಗರದ ಜನತೆಯ ಆಶೀರ್ವಾದದಿಂದ ಆಯ್ಕೆಯಾದ ಜನಪ್ರತಿನಿಧಿಗಳು ಅವರನ್ನು ಗೌರವಯತವಾಗಿ ನಡೆದುಕೊಳ್ಳುವುದು ಅಧಿಕಾರಿಗಳ ಜವಾಬ್ದಾರಿ ಅದನ್ನು ಅರಿತು ಸಮಸ್ಯೆಗಳಿಗೆ ಮೊದಲ ಆದ್ಯತೆ ನೀಡುವಂತೆ ಶಾಸಕ ಕೊತ್ತೂರು ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ನಗರಸಭೆಯ ಆವರಣದಲ್ಲಿ
ಫಲಾನುಭವಿಗಳಿಗೆ ತ್ರಿಚಕ್ರವಾಹನ ವಿತರಿಸಿ ಮಾತನಾಡಿದ ಅವರು, ನಗರಸಭೆ ಸದಸ್ಯರ ಜವಾಬ್ದಾರಿ ಶಾಸಕರಿಗಿಂತ ಹೆಚ್ಚು ಇರುತ್ತದೆ. ಏನೇ ಸಮಸ್ಯೆ ಎದುರಾದರು ಜನ ಮೊದಲು ಸಂಪರ್ಕಿಸುವುದು ನಗರಸಭೆ ಸದಸ್ಯರನ್ನು. ಹೀಗಾಗಿ ಸಾರ್ವಜನಿಕರ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದಾಗ ಅಧಿಕಾರಿಗಳು ಕಾಳಜಿಯಿಂದ ಬಗೆಹರಿಸಬೇಕು ಎಂದರು.
ಕೋಲಾರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೧೫ನೇ ಹಣಕಾಸು ಯೋಜನೆಯಲ್ಲಿ ಸುಮಾರು 8.14 ಕೋಟಿ ಮಂಜೂರಾಗಿದ್ದು, ಕ್ರಿಯಾಯೋಜನೆ ತಯಾರಿಸಿ ಆದ್ಯತೆ ಮೇರೆಗೆ ಕೆಲಸ ಕೈಗೆತ್ತಿಕೊಳ್ಳಲಾಗುವುದು. ಇದಕ್ಕೆ ಸದಸ್ಯರು ಸಹಕಾರ ನೀಡಬೇಕು. ನಗರದಲ್ಲಿ ಸ್ವಚ್ಚತೆ ಸಮಸ್ಯೆಯಿದೆ ಏಪ್ರಿಲ್, ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿಗೆ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ ನಗರಸಭೆ ಸದಸ್ಯರು, ಮುಳಬಾಗಿಲು ಸದಸ್ಯರಿಗಿಂತ 10 ಹೆಜ್ಜೆ ಮುಂದಿದ್ದು, ಉತ್ತಮ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ನಗರಸಭೆ ಎಂದರೆ ಸ್ವಚ್ಚಗೊಳಿಸುವುದು ಎಂದು ಅರ್ಥ. ಅದನ್ನು ಸಮರ್ಥಿಸಿಕೊಂಡು ಹೋಗುವುದು ಅಧಿಕಾರಿಗಳು ಮತ್ತು ಸದಸ್ಯರ ಕೆಲಸ. ಯಾವುದೇ ವಾರ್ಡಿನಲ್ಲಿ ಯುಜಿಡಿ, ನೀರು, ರಸ್ತೆ, ಚರಂಡಿ ಸಮಸ್ಯೆಯಿದ್ದರೆ ಪ್ರಮಾಣಿಕವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಪೌರಾಯುಕ್ತ ಶಿವಾನಂದ, ಸದಸ್ಯರಾದ ಅಂಬರೀಶ್, ಎಸ್.ಆರ್.ಮುರಳೀಗೌಡ, ರಾಕೇಶ್, ಷರೀಪ್, ಗುಣಶೇಖರ್ ಮುಂತಾದವರು ಇದ್ದರು
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…