‘ಸಮಸ್ಯೆ ಬಗೆಹರಿಸದವರು ಅಯೋಗ್ಯರಷ್ಟೇ ಅಲ್ಲ ಮುಠಾಳರು ಸಹ ಹೌದು’- ರೈತ ಮುಖಂಡ ವಸಂತ್ ಕುಮಾರ್

ಅ.19ರಂದು ನಗರಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ‘ಅಯೋಗ್ಯರು’ ಎಂದು ನಗರದ ನಿವಾಸಿ ಗಿರೀಶ್ ಅವರು ಹೇಳಿದ್ದರು. ಗಿರೀಶ್ ಮಾತಿಗೆ ಕೆರಳಿದ ಕೆಲ ನಗರಸಭಾ ಸದಸ್ಯರು ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ನಡೆದಿತ್ತು. ಈ ಪ್ರಸಂಗ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ‌ಯು ನಗರಸಭೆ ಸದಸ್ಯರ ನಡತೆಗೆ ತೀವ್ರ ಅಕ್ರೋಶಗೊಂಡು ಯಾರು ಯೋಗ್ಯರು? ಯಾರು ಅಯೋಗ್ಯರು? ಎಂದು ಸುಮಾರು 45 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ನಾಗರಕೆರೆಯಲ್ಲಿನ ನೀರು ಕಲುಷಿತಗೊಳ್ಳುತ್ತಿರುವ ಹಾಗೂ ಒಳಚರಂಡಿ ನೀರು ಸೂಕ್ತ ರೀತಿಯಲ್ಲಿ ಶುದ್ದೀಕರಿಸದೆ ಬಿಡುತ್ತಿರುವ ಬಗ್ಗೆ ಚನ್ನೈ ಹಸಿರು ನ್ಯಾಯಮಂಡಳಿಗೆ ಗಿರೀಶ್ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ನಗರದ ಸ್ವಚ್ಛತೆ ಹಾಗೂ ಒಳಚರಂಡಿ ತ್ಯಾಜ್ಯ ನೀರಿನ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿರುವ ಮಾಹಿತಿಗೆ ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ. ಇದಕ್ಕೆ ಕುಪಿತಗೊಂಡ ಗಿರೀಶ್ ಕುಂದು ಕೊರತೆ ಸಭೆಯಲ್ಲಿ ‘ಅಯೋಗ್ಯರು’ ಶಬ್ಧ ಬಳಕೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಗಿರೀಶ್ ಅವರ ಮಾತನ್ನು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಸರ್ಮರ್ಥಿಸಿಕೊಂಡಿದ್ದಾರೆ.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ವಸಂತ್ ಕುಮಾರ್, ನಗರದಲ್ಲಿರುವ ಸಮಸ್ಯೆ ಬಗೆಹರಿಸದವರು ಅಯೋಗ್ಯರಷ್ಟೇ ಅಲ್ಲ ಮುಠಾಳರು ಎಂದು ಕರೆದರು ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಅರ್ಕಾವತಿ ನದಿಪಾತ್ರದ ಕೆರೆಗಳು ಕಲುಷಿತಗೊಂಡು ಜಲಚರ ಪ್ರಾಣಿಗಳು ಮಾರಣಹೋಮ ಆಗುತ್ತಿವೆ. ಕೆರೆ ಕಲುಷಿತಗೊಳ್ಳುತ್ತಿರುವುದನ್ನ ತಡೆಯಲು ಹಾಗೂ ಕಲುಷಿತಗೊಂಡಿರುವ ಕೆರೆಗಳನ್ನ ಶುದ್ಧೀಕರಣ ಮಾಡಲು ಯಾರಿಗೂ ಯೋಗ್ಯತೆ ಇಲ್ಲ. ಕುಡಿಯಲು ನೀರನ್ನು ಪಡೆಯಲು ಹೋರಾಟ, ಪ್ರತಿಭಟನೆ, ಧರಣಿ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ವಕೀಲ ಸತೀಶ್ ಮಾತನಾಡಿ , ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಆಯೋಗ್ಯ ಪದ ಬಳಸಿದ ಗಿರೀಶ್ ಮೇಲೆ ನಗರಸಭೆ ಕೆಲ ಸದಸ್ಯರು ಗೂಂಡಾವರ್ತನೆ ತೋರಿದ್ದಾರೆ. ಗಿರೀಶ್ ಅವರು ನಗರಸಭೆ ಅಧಿಕಾರಿಗಳು, ಸದಸ್ಯರ ಬೇಜವಾಬ್ದಾರಿತನಕ್ಕೆ ಬೇಸತ್ತು ಅಯೋಗ್ಯ ಪದ ಬಳಕೆ ಮಾಡಿದ್ದಾರೆ ಅದರಲ್ಲಿ ತಪ್ಪೇನಿದೆ? ಅವ್ಯವಸ್ಥೆಗಳ ಬಗ್ಗೆ ಪ್ರಶ್ನೆ ಮಾಡಿದವರ ಮೇಲೆ ಏಕಾಏಕಿ ಮುಗಿಬಿದ್ದು ಗಲಾಟೆ ಮಾಡುವುದು ಎಷ್ಟು ಸರಿ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನೆ ಮಾಡಿದವರ ಮೇಲೆ ಈ ರೀತಿ ದಬ್ಬಾಳಿಕೆ, ಗೂಂಡಾ ವರ್ತನೆ ಮಾಡಿರುವುದು ಖಂಡನೀಯ ಎಂದು ಆಕ್ರೋಶವ್ಯಕ್ತಪಡಿಸಿದರು.

ಗಿರೀಶ್ ಮೇಲೆ ಗೂಂಡಾವರ್ತನೆ ಮಾಡಿದವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಒತ್ತಾಯಿಸಿದರು.

ಈ ವೇಳೆ ಕಾಳೇಗೌಡ, ವಿಜಿಕುಮಾರದ, ರಮೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

5 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

5 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

17 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

19 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

19 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

20 hours ago