‘ಸಮಸ್ಯೆ ಬಗೆಹರಿಸದವರು ಅಯೋಗ್ಯರಷ್ಟೇ ಅಲ್ಲ ಮುಠಾಳರು ಸಹ ಹೌದು’- ರೈತ ಮುಖಂಡ ವಸಂತ್ ಕುಮಾರ್

ಅ.19ರಂದು ನಗರಸಭೆಯಲ್ಲಿ ಶಾಸಕ ಧೀರಜ್ ಮುನಿರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕರ ಕುಂದು-ಕೊರತೆ ಸಭೆಯಲ್ಲಿ ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಅದೆಷ್ಟು ‘ಅಯೋಗ್ಯರು’ ಎಂದು ನಗರದ ನಿವಾಸಿ ಗಿರೀಶ್ ಅವರು ಹೇಳಿದ್ದರು. ಗಿರೀಶ್ ಮಾತಿಗೆ ಕೆರಳಿದ ಕೆಲ ನಗರಸಭಾ ಸದಸ್ಯರು ಗಿರೀಶ್ ಮೇಲೆ ಮುಗಿಬಿದ್ದು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗ ನಡೆದಿತ್ತು. ಈ ಪ್ರಸಂಗ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿನ್ನೆಲೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ‌ಯು ನಗರಸಭೆ ಸದಸ್ಯರ ನಡತೆಗೆ ತೀವ್ರ ಅಕ್ರೋಶಗೊಂಡು ಯಾರು ಯೋಗ್ಯರು? ಯಾರು ಅಯೋಗ್ಯರು? ಎಂದು ಸುಮಾರು 45 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ನಾಗರಕೆರೆಯಲ್ಲಿನ ನೀರು ಕಲುಷಿತಗೊಳ್ಳುತ್ತಿರುವ ಹಾಗೂ ಒಳಚರಂಡಿ ನೀರು ಸೂಕ್ತ ರೀತಿಯಲ್ಲಿ ಶುದ್ದೀಕರಿಸದೆ ಬಿಡುತ್ತಿರುವ ಬಗ್ಗೆ ಚನ್ನೈ ಹಸಿರು ನ್ಯಾಯಮಂಡಳಿಗೆ ಗಿರೀಶ್ ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಸಿದ್ದಾರೆ. ನಗರದ ಸ್ವಚ್ಛತೆ ಹಾಗೂ ಒಳಚರಂಡಿ ತ್ಯಾಜ್ಯ ನೀರಿನ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಕೇಳಿರುವ ಮಾಹಿತಿಗೆ ಅಧಿಕಾರಿಗಳು ಸುಳ್ಳು ಮಾಹಿತಿಗಳನ್ನು ನೀಡಿದ್ದಾರೆ. ಇದಕ್ಕೆ ಕುಪಿತಗೊಂಡ ಗಿರೀಶ್ ಕುಂದು ಕೊರತೆ ಸಭೆಯಲ್ಲಿ ‘ಅಯೋಗ್ಯರು’ ಶಬ್ಧ ಬಳಕೆ ಮಾಡಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಗಿರೀಶ್ ಅವರ ಮಾತನ್ನು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಸರ್ಮರ್ಥಿಸಿಕೊಂಡಿದ್ದಾರೆ.

ಈ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ವಸಂತ್ ಕುಮಾರ್, ನಗರದಲ್ಲಿರುವ ಸಮಸ್ಯೆ ಬಗೆಹರಿಸದವರು ಅಯೋಗ್ಯರಷ್ಟೇ ಅಲ್ಲ ಮುಠಾಳರು ಎಂದು ಕರೆದರು ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ.

ಅರ್ಕಾವತಿ ನದಿಪಾತ್ರದ ಕೆರೆಗಳು ಕಲುಷಿತಗೊಂಡು ಜಲಚರ ಪ್ರಾಣಿಗಳು ಮಾರಣಹೋಮ ಆಗುತ್ತಿವೆ. ಕೆರೆ ಕಲುಷಿತಗೊಳ್ಳುತ್ತಿರುವುದನ್ನ ತಡೆಯಲು ಹಾಗೂ ಕಲುಷಿತಗೊಂಡಿರುವ ಕೆರೆಗಳನ್ನ ಶುದ್ಧೀಕರಣ ಮಾಡಲು ಯಾರಿಗೂ ಯೋಗ್ಯತೆ ಇಲ್ಲ. ಕುಡಿಯಲು ನೀರನ್ನು ಪಡೆಯಲು ಹೋರಾಟ, ಪ್ರತಿಭಟನೆ, ಧರಣಿ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ವಕೀಲ ಸತೀಶ್ ಮಾತನಾಡಿ , ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಆಯೋಗ್ಯ ಪದ ಬಳಸಿದ ಗಿರೀಶ್ ಮೇಲೆ ನಗರಸಭೆ ಕೆಲ ಸದಸ್ಯರು ಗೂಂಡಾವರ್ತನೆ ತೋರಿದ್ದಾರೆ. ಗಿರೀಶ್ ಅವರು ನಗರಸಭೆ ಅಧಿಕಾರಿಗಳು, ಸದಸ್ಯರ ಬೇಜವಾಬ್ದಾರಿತನಕ್ಕೆ ಬೇಸತ್ತು ಅಯೋಗ್ಯ ಪದ ಬಳಕೆ ಮಾಡಿದ್ದಾರೆ ಅದರಲ್ಲಿ ತಪ್ಪೇನಿದೆ? ಅವ್ಯವಸ್ಥೆಗಳ ಬಗ್ಗೆ ಪ್ರಶ್ನೆ ಮಾಡಿದವರ ಮೇಲೆ ಏಕಾಏಕಿ ಮುಗಿಬಿದ್ದು ಗಲಾಟೆ ಮಾಡುವುದು ಎಷ್ಟು ಸರಿ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಶ್ನೆ ಮಾಡಿದವರ ಮೇಲೆ ಈ ರೀತಿ ದಬ್ಬಾಳಿಕೆ, ಗೂಂಡಾ ವರ್ತನೆ ಮಾಡಿರುವುದು ಖಂಡನೀಯ ಎಂದು ಆಕ್ರೋಶವ್ಯಕ್ತಪಡಿಸಿದರು.

ಗಿರೀಶ್ ಮೇಲೆ ಗೂಂಡಾವರ್ತನೆ ಮಾಡಿದವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಮುಖಂಡರು ಒತ್ತಾಯಿಸಿದರು.

ಈ ವೇಳೆ ಕಾಳೇಗೌಡ, ವಿಜಿಕುಮಾರದ, ರಮೇಶ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

1 hour ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

15 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

15 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

15 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

15 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

18 hours ago