ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಅಗತ್ಯವಿದೆ- ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್

ನಮ್ಮ ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಅಗತ್ಯವಿದೆ ಎಂದು ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ತಿಳಿಸಿದರು.

ದೊಡ್ಡಬಳ್ಳಾಪುರ ಲಯನ್ಸ್ ಭವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವಿಜ್ಞಾನ ಸಿರಿ ಮಾಸಪತ್ರಿಕೆಯ ವತಿಯಿಂದ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸುದ್ದಿ ಮಾಧ್ಯಮಗಳು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಬೇಕು. ವಾಸ್ತವ ಸ್ಥಿತಿಯನ್ನು ಅರಿತು ಸುದ್ದಿಗಳನ್ನು  ಮಾಡಬೇಕು. ಜಾಹೀರಾತು ಇಲ್ಲದೆ ಸುದ್ದಿ ಮಾಧ್ಯಮಗಳು ಉಳಿಯಲು ಸಾಧ್ಯವಿಲ್ಲ. ಮಾಧ್ಯಮಗಳು ಮೌಢ್ಯತೆಯ ಬಗ್ಗೆ ಜನರಲ್ಲಿ ಅರಿವು ಉಂಟು ಮಾಡಬೇಕು. ಮೂಢನಂಬಿಕೆಗಳು ಮನುಷ್ಯತ್ವವನ್ನು ನಾಶ ಮಾಡುತ್ತವೆ ಎಂದರು.

ಮನೋವಿಜ್ಞಾನಿ ಶ್ರೀಧರ್ ಮಾತನಾಡಿ, ಪತ್ರಕರ್ತರು ಆವೇಶಕ್ಕೆ ಒಳಗಾಗಬಾರದು, ಭಾವುಕತೆಗೆ ಅವಕಾಶ ನೀಡಬಾರದು. ಪತ್ರಕರ್ತರಿಗೆ ವೀಕ್ಷಣೆ ಮತ್ತು ಸಂವೇದನೆ ಬಹಳ ಮುಖ್ಯವಾಗಿ ಬೇಕಾಗಿರುವ ಗುಣವಾಗಿರುತ್ತದೆ.   ಸಕಾರಾತ್ಮಕವಾಗಿ, ಸೃಜನಾತ್ಮಕವಾಗಿ, ಸರಳವಾಗಿ, ಸರಾಗವಾಗಿ ಓದಿಕೊಳ್ಳುವಂತಹ ಬರಹಗಳಾಗಿರಬೇಕು. ವಿಜ್ಞಾನದಲ್ಲಿ ಅಂಧ ವಿಶ್ವಾಸ ಮತ್ತು ಭಾವುಕತೆ ಇರುವುದಿಲ್ಲ. ವೈಜ್ಞಾನಿಕ ಶಿಕ್ಷಣದೊಂದಿಗೆ ಪ್ರಶ್ನೆ ಮಾಡುವ ಮಾನಸಿಕ ಸ್ಥಿತಿಯನ್ನು ಬೆಳೆಸಿಕೊಳ್ಳಬೇಕೆಂದರು.

ದೂರದರ್ಶನ ಚಂದನವಾಹಿನಿಯ ಹಿರಿಯ ಪತ್ರಕರ್ತ ನಂಜುಂಡಪ್ಪ ಮಾತನಾಡಿ, ಮಾಧ್ಯಮಗಳು ಸಮಾಜವನ್ನು ಸಕಾರಾತ್ಮಕಗೊಳಿಸಬೇಕು. ಡಿಜಿಟಲ್ ಪತ್ರಿಕೋದ್ಯಮ ಬಂದ ನಂತರ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ.  ಪತ್ರಕರ್ತರು ನಿರಂತರ ಅಧ್ಯಯನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಸುದ್ದಿ ಮಾಧ್ಯಮಗಳಲ್ಲಿ ವಿಜ್ಞಾನ ಲೇಖಕರ ಕೊರತೆ ಇದೆ. ವಿಜ್ಞಾನ ಬರಹಗಾರರನ್ನು ಸೃಷ್ಟಿಸುವ ಕೆಲಸ ಆಗಬೇಕಾಗಿದೆ. ಕೃತಕ ಬುದ್ಧಿಮತ್ತೆ  ಕೈಮೀರುತ್ತಿರುವ ಬಗ್ಗೆ ಎಚ್ಚರಿಕೆಯ ಮಾತುಗಳು ಕೇಳಿ ಬರುತ್ತಿವೆ. ಪತ್ರಕರ್ತರು ಸುದ್ದಿಯಲ್ಲಿ ಸಮಸ್ಯೆ ಮತ್ತು ದುಷ್ಪರಿಣಾಮಗಳ ಬಗ್ಗೆ  ಮಾಹಿತಿ ನೀಡುವುದರ ಜೊತೆಗೆ  ಕಾರಣ ಮತ್ತು ಪರಿಹಾರಗಳ ಬಗ್ಗೆ  ಬೆಳಕು ಚೆಲ್ಲಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜು, ಉಪಾಧ್ಯಕ್ಷ ಶ್ರೀರಾಮಚಂದ್ರ, ಕಾರ್ಯದರ್ಶಿ ಚಿಕ್ಕಹನುಮಂತೇಗೌಡ,  ಲೆಕ್ಕಪರಿಶೋಧಕ ಕೆ.ಪಿ.ಲಕ್ಷ್ಮೀನಾರಾಯಣ್, ಕಾನೂನು ಸಲಹೆಗಾರ ಬಾಬಾಸಾಹೇಬ್, ಪದವಿ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎಂ.ರಾಮಕೃಷ್ಣಯ್ಯ, ವಿಜ್ಞಾನ ಸಿರಿ ಮಾಸ ಪತ್ರಿಕೆ ಸಂಪಾದಕ ವಿ.ಟಿ.ಸ್ವಾಮಿ, ಸಂಪಾದಕ ಮಂಡಲಿಯ ಸದಸ್ಯರುಗಳು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಿದ್ದರು. ‌

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

6 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

6 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago