ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಅಗತ್ಯವಿದೆ- ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್

ನಮ್ಮ ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಅಗತ್ಯವಿದೆ ಎಂದು ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ತಿಳಿಸಿದರು.

ದೊಡ್ಡಬಳ್ಳಾಪುರ ಲಯನ್ಸ್ ಭವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವಿಜ್ಞಾನ ಸಿರಿ ಮಾಸಪತ್ರಿಕೆಯ ವತಿಯಿಂದ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸುದ್ದಿ ಮಾಧ್ಯಮಗಳು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಬೇಕು. ವಾಸ್ತವ ಸ್ಥಿತಿಯನ್ನು ಅರಿತು ಸುದ್ದಿಗಳನ್ನು  ಮಾಡಬೇಕು. ಜಾಹೀರಾತು ಇಲ್ಲದೆ ಸುದ್ದಿ ಮಾಧ್ಯಮಗಳು ಉಳಿಯಲು ಸಾಧ್ಯವಿಲ್ಲ. ಮಾಧ್ಯಮಗಳು ಮೌಢ್ಯತೆಯ ಬಗ್ಗೆ ಜನರಲ್ಲಿ ಅರಿವು ಉಂಟು ಮಾಡಬೇಕು. ಮೂಢನಂಬಿಕೆಗಳು ಮನುಷ್ಯತ್ವವನ್ನು ನಾಶ ಮಾಡುತ್ತವೆ ಎಂದರು.

ಮನೋವಿಜ್ಞಾನಿ ಶ್ರೀಧರ್ ಮಾತನಾಡಿ, ಪತ್ರಕರ್ತರು ಆವೇಶಕ್ಕೆ ಒಳಗಾಗಬಾರದು, ಭಾವುಕತೆಗೆ ಅವಕಾಶ ನೀಡಬಾರದು. ಪತ್ರಕರ್ತರಿಗೆ ವೀಕ್ಷಣೆ ಮತ್ತು ಸಂವೇದನೆ ಬಹಳ ಮುಖ್ಯವಾಗಿ ಬೇಕಾಗಿರುವ ಗುಣವಾಗಿರುತ್ತದೆ.   ಸಕಾರಾತ್ಮಕವಾಗಿ, ಸೃಜನಾತ್ಮಕವಾಗಿ, ಸರಳವಾಗಿ, ಸರಾಗವಾಗಿ ಓದಿಕೊಳ್ಳುವಂತಹ ಬರಹಗಳಾಗಿರಬೇಕು. ವಿಜ್ಞಾನದಲ್ಲಿ ಅಂಧ ವಿಶ್ವಾಸ ಮತ್ತು ಭಾವುಕತೆ ಇರುವುದಿಲ್ಲ. ವೈಜ್ಞಾನಿಕ ಶಿಕ್ಷಣದೊಂದಿಗೆ ಪ್ರಶ್ನೆ ಮಾಡುವ ಮಾನಸಿಕ ಸ್ಥಿತಿಯನ್ನು ಬೆಳೆಸಿಕೊಳ್ಳಬೇಕೆಂದರು.

ದೂರದರ್ಶನ ಚಂದನವಾಹಿನಿಯ ಹಿರಿಯ ಪತ್ರಕರ್ತ ನಂಜುಂಡಪ್ಪ ಮಾತನಾಡಿ, ಮಾಧ್ಯಮಗಳು ಸಮಾಜವನ್ನು ಸಕಾರಾತ್ಮಕಗೊಳಿಸಬೇಕು. ಡಿಜಿಟಲ್ ಪತ್ರಿಕೋದ್ಯಮ ಬಂದ ನಂತರ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ.  ಪತ್ರಕರ್ತರು ನಿರಂತರ ಅಧ್ಯಯನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಸುದ್ದಿ ಮಾಧ್ಯಮಗಳಲ್ಲಿ ವಿಜ್ಞಾನ ಲೇಖಕರ ಕೊರತೆ ಇದೆ. ವಿಜ್ಞಾನ ಬರಹಗಾರರನ್ನು ಸೃಷ್ಟಿಸುವ ಕೆಲಸ ಆಗಬೇಕಾಗಿದೆ. ಕೃತಕ ಬುದ್ಧಿಮತ್ತೆ  ಕೈಮೀರುತ್ತಿರುವ ಬಗ್ಗೆ ಎಚ್ಚರಿಕೆಯ ಮಾತುಗಳು ಕೇಳಿ ಬರುತ್ತಿವೆ. ಪತ್ರಕರ್ತರು ಸುದ್ದಿಯಲ್ಲಿ ಸಮಸ್ಯೆ ಮತ್ತು ದುಷ್ಪರಿಣಾಮಗಳ ಬಗ್ಗೆ  ಮಾಹಿತಿ ನೀಡುವುದರ ಜೊತೆಗೆ  ಕಾರಣ ಮತ್ತು ಪರಿಹಾರಗಳ ಬಗ್ಗೆ  ಬೆಳಕು ಚೆಲ್ಲಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜು, ಉಪಾಧ್ಯಕ್ಷ ಶ್ರೀರಾಮಚಂದ್ರ, ಕಾರ್ಯದರ್ಶಿ ಚಿಕ್ಕಹನುಮಂತೇಗೌಡ,  ಲೆಕ್ಕಪರಿಶೋಧಕ ಕೆ.ಪಿ.ಲಕ್ಷ್ಮೀನಾರಾಯಣ್, ಕಾನೂನು ಸಲಹೆಗಾರ ಬಾಬಾಸಾಹೇಬ್, ಪದವಿ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎಂ.ರಾಮಕೃಷ್ಣಯ್ಯ, ವಿಜ್ಞಾನ ಸಿರಿ ಮಾಸ ಪತ್ರಿಕೆ ಸಂಪಾದಕ ವಿ.ಟಿ.ಸ್ವಾಮಿ, ಸಂಪಾದಕ ಮಂಡಲಿಯ ಸದಸ್ಯರುಗಳು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಿದ್ದರು. ‌

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

6 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

6 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

19 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

20 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

20 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

21 hours ago