ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಅಗತ್ಯವಿದೆ- ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್

ನಮ್ಮ ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಅಗತ್ಯವಿದೆ ಎಂದು ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ತಿಳಿಸಿದರು.

ದೊಡ್ಡಬಳ್ಳಾಪುರ ಲಯನ್ಸ್ ಭವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವಿಜ್ಞಾನ ಸಿರಿ ಮಾಸಪತ್ರಿಕೆಯ ವತಿಯಿಂದ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸುದ್ದಿ ಮಾಧ್ಯಮಗಳು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಬೇಕು. ವಾಸ್ತವ ಸ್ಥಿತಿಯನ್ನು ಅರಿತು ಸುದ್ದಿಗಳನ್ನು  ಮಾಡಬೇಕು. ಜಾಹೀರಾತು ಇಲ್ಲದೆ ಸುದ್ದಿ ಮಾಧ್ಯಮಗಳು ಉಳಿಯಲು ಸಾಧ್ಯವಿಲ್ಲ. ಮಾಧ್ಯಮಗಳು ಮೌಢ್ಯತೆಯ ಬಗ್ಗೆ ಜನರಲ್ಲಿ ಅರಿವು ಉಂಟು ಮಾಡಬೇಕು. ಮೂಢನಂಬಿಕೆಗಳು ಮನುಷ್ಯತ್ವವನ್ನು ನಾಶ ಮಾಡುತ್ತವೆ ಎಂದರು.

ಮನೋವಿಜ್ಞಾನಿ ಶ್ರೀಧರ್ ಮಾತನಾಡಿ, ಪತ್ರಕರ್ತರು ಆವೇಶಕ್ಕೆ ಒಳಗಾಗಬಾರದು, ಭಾವುಕತೆಗೆ ಅವಕಾಶ ನೀಡಬಾರದು. ಪತ್ರಕರ್ತರಿಗೆ ವೀಕ್ಷಣೆ ಮತ್ತು ಸಂವೇದನೆ ಬಹಳ ಮುಖ್ಯವಾಗಿ ಬೇಕಾಗಿರುವ ಗುಣವಾಗಿರುತ್ತದೆ.   ಸಕಾರಾತ್ಮಕವಾಗಿ, ಸೃಜನಾತ್ಮಕವಾಗಿ, ಸರಳವಾಗಿ, ಸರಾಗವಾಗಿ ಓದಿಕೊಳ್ಳುವಂತಹ ಬರಹಗಳಾಗಿರಬೇಕು. ವಿಜ್ಞಾನದಲ್ಲಿ ಅಂಧ ವಿಶ್ವಾಸ ಮತ್ತು ಭಾವುಕತೆ ಇರುವುದಿಲ್ಲ. ವೈಜ್ಞಾನಿಕ ಶಿಕ್ಷಣದೊಂದಿಗೆ ಪ್ರಶ್ನೆ ಮಾಡುವ ಮಾನಸಿಕ ಸ್ಥಿತಿಯನ್ನು ಬೆಳೆಸಿಕೊಳ್ಳಬೇಕೆಂದರು.

ದೂರದರ್ಶನ ಚಂದನವಾಹಿನಿಯ ಹಿರಿಯ ಪತ್ರಕರ್ತ ನಂಜುಂಡಪ್ಪ ಮಾತನಾಡಿ, ಮಾಧ್ಯಮಗಳು ಸಮಾಜವನ್ನು ಸಕಾರಾತ್ಮಕಗೊಳಿಸಬೇಕು. ಡಿಜಿಟಲ್ ಪತ್ರಿಕೋದ್ಯಮ ಬಂದ ನಂತರ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ.  ಪತ್ರಕರ್ತರು ನಿರಂತರ ಅಧ್ಯಯನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಸುದ್ದಿ ಮಾಧ್ಯಮಗಳಲ್ಲಿ ವಿಜ್ಞಾನ ಲೇಖಕರ ಕೊರತೆ ಇದೆ. ವಿಜ್ಞಾನ ಬರಹಗಾರರನ್ನು ಸೃಷ್ಟಿಸುವ ಕೆಲಸ ಆಗಬೇಕಾಗಿದೆ. ಕೃತಕ ಬುದ್ಧಿಮತ್ತೆ  ಕೈಮೀರುತ್ತಿರುವ ಬಗ್ಗೆ ಎಚ್ಚರಿಕೆಯ ಮಾತುಗಳು ಕೇಳಿ ಬರುತ್ತಿವೆ. ಪತ್ರಕರ್ತರು ಸುದ್ದಿಯಲ್ಲಿ ಸಮಸ್ಯೆ ಮತ್ತು ದುಷ್ಪರಿಣಾಮಗಳ ಬಗ್ಗೆ  ಮಾಹಿತಿ ನೀಡುವುದರ ಜೊತೆಗೆ  ಕಾರಣ ಮತ್ತು ಪರಿಹಾರಗಳ ಬಗ್ಗೆ  ಬೆಳಕು ಚೆಲ್ಲಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜು, ಉಪಾಧ್ಯಕ್ಷ ಶ್ರೀರಾಮಚಂದ್ರ, ಕಾರ್ಯದರ್ಶಿ ಚಿಕ್ಕಹನುಮಂತೇಗೌಡ,  ಲೆಕ್ಕಪರಿಶೋಧಕ ಕೆ.ಪಿ.ಲಕ್ಷ್ಮೀನಾರಾಯಣ್, ಕಾನೂನು ಸಲಹೆಗಾರ ಬಾಬಾಸಾಹೇಬ್, ಪದವಿ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎಂ.ರಾಮಕೃಷ್ಣಯ್ಯ, ವಿಜ್ಞಾನ ಸಿರಿ ಮಾಸ ಪತ್ರಿಕೆ ಸಂಪಾದಕ ವಿ.ಟಿ.ಸ್ವಾಮಿ, ಸಂಪಾದಕ ಮಂಡಲಿಯ ಸದಸ್ಯರುಗಳು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಿದ್ದರು. ‌

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

11 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago