ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಅಗತ್ಯವಿದೆ- ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್

ನಮ್ಮ ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಅಗತ್ಯವಿದೆ ಎಂದು ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ತಿಳಿಸಿದರು.

ದೊಡ್ಡಬಳ್ಳಾಪುರ ಲಯನ್ಸ್ ಭವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವಿಜ್ಞಾನ ಸಿರಿ ಮಾಸಪತ್ರಿಕೆಯ ವತಿಯಿಂದ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸುದ್ದಿ ಮಾಧ್ಯಮಗಳು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಬೇಕು. ವಾಸ್ತವ ಸ್ಥಿತಿಯನ್ನು ಅರಿತು ಸುದ್ದಿಗಳನ್ನು  ಮಾಡಬೇಕು. ಜಾಹೀರಾತು ಇಲ್ಲದೆ ಸುದ್ದಿ ಮಾಧ್ಯಮಗಳು ಉಳಿಯಲು ಸಾಧ್ಯವಿಲ್ಲ. ಮಾಧ್ಯಮಗಳು ಮೌಢ್ಯತೆಯ ಬಗ್ಗೆ ಜನರಲ್ಲಿ ಅರಿವು ಉಂಟು ಮಾಡಬೇಕು. ಮೂಢನಂಬಿಕೆಗಳು ಮನುಷ್ಯತ್ವವನ್ನು ನಾಶ ಮಾಡುತ್ತವೆ ಎಂದರು.

ಮನೋವಿಜ್ಞಾನಿ ಶ್ರೀಧರ್ ಮಾತನಾಡಿ, ಪತ್ರಕರ್ತರು ಆವೇಶಕ್ಕೆ ಒಳಗಾಗಬಾರದು, ಭಾವುಕತೆಗೆ ಅವಕಾಶ ನೀಡಬಾರದು. ಪತ್ರಕರ್ತರಿಗೆ ವೀಕ್ಷಣೆ ಮತ್ತು ಸಂವೇದನೆ ಬಹಳ ಮುಖ್ಯವಾಗಿ ಬೇಕಾಗಿರುವ ಗುಣವಾಗಿರುತ್ತದೆ.   ಸಕಾರಾತ್ಮಕವಾಗಿ, ಸೃಜನಾತ್ಮಕವಾಗಿ, ಸರಳವಾಗಿ, ಸರಾಗವಾಗಿ ಓದಿಕೊಳ್ಳುವಂತಹ ಬರಹಗಳಾಗಿರಬೇಕು. ವಿಜ್ಞಾನದಲ್ಲಿ ಅಂಧ ವಿಶ್ವಾಸ ಮತ್ತು ಭಾವುಕತೆ ಇರುವುದಿಲ್ಲ. ವೈಜ್ಞಾನಿಕ ಶಿಕ್ಷಣದೊಂದಿಗೆ ಪ್ರಶ್ನೆ ಮಾಡುವ ಮಾನಸಿಕ ಸ್ಥಿತಿಯನ್ನು ಬೆಳೆಸಿಕೊಳ್ಳಬೇಕೆಂದರು.

ದೂರದರ್ಶನ ಚಂದನವಾಹಿನಿಯ ಹಿರಿಯ ಪತ್ರಕರ್ತ ನಂಜುಂಡಪ್ಪ ಮಾತನಾಡಿ, ಮಾಧ್ಯಮಗಳು ಸಮಾಜವನ್ನು ಸಕಾರಾತ್ಮಕಗೊಳಿಸಬೇಕು. ಡಿಜಿಟಲ್ ಪತ್ರಿಕೋದ್ಯಮ ಬಂದ ನಂತರ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ.  ಪತ್ರಕರ್ತರು ನಿರಂತರ ಅಧ್ಯಯನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಸುದ್ದಿ ಮಾಧ್ಯಮಗಳಲ್ಲಿ ವಿಜ್ಞಾನ ಲೇಖಕರ ಕೊರತೆ ಇದೆ. ವಿಜ್ಞಾನ ಬರಹಗಾರರನ್ನು ಸೃಷ್ಟಿಸುವ ಕೆಲಸ ಆಗಬೇಕಾಗಿದೆ. ಕೃತಕ ಬುದ್ಧಿಮತ್ತೆ  ಕೈಮೀರುತ್ತಿರುವ ಬಗ್ಗೆ ಎಚ್ಚರಿಕೆಯ ಮಾತುಗಳು ಕೇಳಿ ಬರುತ್ತಿವೆ. ಪತ್ರಕರ್ತರು ಸುದ್ದಿಯಲ್ಲಿ ಸಮಸ್ಯೆ ಮತ್ತು ದುಷ್ಪರಿಣಾಮಗಳ ಬಗ್ಗೆ  ಮಾಹಿತಿ ನೀಡುವುದರ ಜೊತೆಗೆ  ಕಾರಣ ಮತ್ತು ಪರಿಹಾರಗಳ ಬಗ್ಗೆ  ಬೆಳಕು ಚೆಲ್ಲಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜು, ಉಪಾಧ್ಯಕ್ಷ ಶ್ರೀರಾಮಚಂದ್ರ, ಕಾರ್ಯದರ್ಶಿ ಚಿಕ್ಕಹನುಮಂತೇಗೌಡ,  ಲೆಕ್ಕಪರಿಶೋಧಕ ಕೆ.ಪಿ.ಲಕ್ಷ್ಮೀನಾರಾಯಣ್, ಕಾನೂನು ಸಲಹೆಗಾರ ಬಾಬಾಸಾಹೇಬ್, ಪದವಿ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎಂ.ರಾಮಕೃಷ್ಣಯ್ಯ, ವಿಜ್ಞಾನ ಸಿರಿ ಮಾಸ ಪತ್ರಿಕೆ ಸಂಪಾದಕ ವಿ.ಟಿ.ಸ್ವಾಮಿ, ಸಂಪಾದಕ ಮಂಡಲಿಯ ಸದಸ್ಯರುಗಳು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಿದ್ದರು. ‌

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

37 minutes ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

6 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

18 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

18 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

19 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

22 hours ago