ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಅಗತ್ಯವಿದೆ- ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್

ನಮ್ಮ ಸಮಾಜಕ್ಕೆ ನಂಬಿಕೆ ಮತ್ತು ವಿಶ್ವಾಸಾರ್ಹ ಸುದ್ದಿ ಅಗತ್ಯವಿದೆ ಎಂದು ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಶ್ರೀಧರ್ ತಿಳಿಸಿದರು.

ದೊಡ್ಡಬಳ್ಳಾಪುರ ಲಯನ್ಸ್ ಭವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ವಿಜ್ಞಾನ ಸಿರಿ ಮಾಸಪತ್ರಿಕೆಯ ವತಿಯಿಂದ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸುದ್ದಿ ಮಾಧ್ಯಮಗಳು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಬೇಕು. ವಾಸ್ತವ ಸ್ಥಿತಿಯನ್ನು ಅರಿತು ಸುದ್ದಿಗಳನ್ನು  ಮಾಡಬೇಕು. ಜಾಹೀರಾತು ಇಲ್ಲದೆ ಸುದ್ದಿ ಮಾಧ್ಯಮಗಳು ಉಳಿಯಲು ಸಾಧ್ಯವಿಲ್ಲ. ಮಾಧ್ಯಮಗಳು ಮೌಢ್ಯತೆಯ ಬಗ್ಗೆ ಜನರಲ್ಲಿ ಅರಿವು ಉಂಟು ಮಾಡಬೇಕು. ಮೂಢನಂಬಿಕೆಗಳು ಮನುಷ್ಯತ್ವವನ್ನು ನಾಶ ಮಾಡುತ್ತವೆ ಎಂದರು.

ಮನೋವಿಜ್ಞಾನಿ ಶ್ರೀಧರ್ ಮಾತನಾಡಿ, ಪತ್ರಕರ್ತರು ಆವೇಶಕ್ಕೆ ಒಳಗಾಗಬಾರದು, ಭಾವುಕತೆಗೆ ಅವಕಾಶ ನೀಡಬಾರದು. ಪತ್ರಕರ್ತರಿಗೆ ವೀಕ್ಷಣೆ ಮತ್ತು ಸಂವೇದನೆ ಬಹಳ ಮುಖ್ಯವಾಗಿ ಬೇಕಾಗಿರುವ ಗುಣವಾಗಿರುತ್ತದೆ.   ಸಕಾರಾತ್ಮಕವಾಗಿ, ಸೃಜನಾತ್ಮಕವಾಗಿ, ಸರಳವಾಗಿ, ಸರಾಗವಾಗಿ ಓದಿಕೊಳ್ಳುವಂತಹ ಬರಹಗಳಾಗಿರಬೇಕು. ವಿಜ್ಞಾನದಲ್ಲಿ ಅಂಧ ವಿಶ್ವಾಸ ಮತ್ತು ಭಾವುಕತೆ ಇರುವುದಿಲ್ಲ. ವೈಜ್ಞಾನಿಕ ಶಿಕ್ಷಣದೊಂದಿಗೆ ಪ್ರಶ್ನೆ ಮಾಡುವ ಮಾನಸಿಕ ಸ್ಥಿತಿಯನ್ನು ಬೆಳೆಸಿಕೊಳ್ಳಬೇಕೆಂದರು.

ದೂರದರ್ಶನ ಚಂದನವಾಹಿನಿಯ ಹಿರಿಯ ಪತ್ರಕರ್ತ ನಂಜುಂಡಪ್ಪ ಮಾತನಾಡಿ, ಮಾಧ್ಯಮಗಳು ಸಮಾಜವನ್ನು ಸಕಾರಾತ್ಮಕಗೊಳಿಸಬೇಕು. ಡಿಜಿಟಲ್ ಪತ್ರಿಕೋದ್ಯಮ ಬಂದ ನಂತರ ಪತ್ರಿಕೋದ್ಯಮ ಸಾಕಷ್ಟು ಬದಲಾಗಿದೆ.  ಪತ್ರಕರ್ತರು ನಿರಂತರ ಅಧ್ಯಯನ ಮತ್ತು ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಸುದ್ದಿ ಮಾಧ್ಯಮಗಳಲ್ಲಿ ವಿಜ್ಞಾನ ಲೇಖಕರ ಕೊರತೆ ಇದೆ. ವಿಜ್ಞಾನ ಬರಹಗಾರರನ್ನು ಸೃಷ್ಟಿಸುವ ಕೆಲಸ ಆಗಬೇಕಾಗಿದೆ. ಕೃತಕ ಬುದ್ಧಿಮತ್ತೆ  ಕೈಮೀರುತ್ತಿರುವ ಬಗ್ಗೆ ಎಚ್ಚರಿಕೆಯ ಮಾತುಗಳು ಕೇಳಿ ಬರುತ್ತಿವೆ. ಪತ್ರಕರ್ತರು ಸುದ್ದಿಯಲ್ಲಿ ಸಮಸ್ಯೆ ಮತ್ತು ದುಷ್ಪರಿಣಾಮಗಳ ಬಗ್ಗೆ  ಮಾಹಿತಿ ನೀಡುವುದರ ಜೊತೆಗೆ  ಕಾರಣ ಮತ್ತು ಪರಿಹಾರಗಳ ಬಗ್ಗೆ  ಬೆಳಕು ಚೆಲ್ಲಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜು, ಉಪಾಧ್ಯಕ್ಷ ಶ್ರೀರಾಮಚಂದ್ರ, ಕಾರ್ಯದರ್ಶಿ ಚಿಕ್ಕಹನುಮಂತೇಗೌಡ,  ಲೆಕ್ಕಪರಿಶೋಧಕ ಕೆ.ಪಿ.ಲಕ್ಷ್ಮೀನಾರಾಯಣ್, ಕಾನೂನು ಸಲಹೆಗಾರ ಬಾಬಾಸಾಹೇಬ್, ಪದವಿ ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕ ಎಂ.ರಾಮಕೃಷ್ಣಯ್ಯ, ವಿಜ್ಞಾನ ಸಿರಿ ಮಾಸ ಪತ್ರಿಕೆ ಸಂಪಾದಕ ವಿ.ಟಿ.ಸ್ವಾಮಿ, ಸಂಪಾದಕ ಮಂಡಲಿಯ ಸದಸ್ಯರುಗಳು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗವಹಿಸಿದ್ದರು. ‌

Ramesh Babu

Journalist

Recent Posts

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

3 minutes ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

32 minutes ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

3 hours ago

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರೋ – ಸಂವಿಧಾನ ರಕ್ಷಕರೋ – ರೇಸು ಕುದುರೆಗಳೋ – ಗೋಮುಖ ವ್ಯಾಘ್ರಗಳೋ…..?

ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…

6 hours ago

‘ಬೆಂಗಳೂರಿನಲ್ಲಿ ಜನಸಂಖ್ಯೆ ವಾರ್ಷಿಕ ಬೆಳವಣಿಗೆ ದರ 3.7%, ವಾಹನ ಸಂಖ್ಯೆ ಬೆಳವಣಿಗೆ ದರ 10% ನಷ್ಟಿದೆ’

ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ…

6 hours ago