Categories: ಕೋಲಾರ

ಸಮಾಜದಲ್ಲಿನ ತಾರತಮ್ಯ ನಿವಾರಣೆಗೆ ಶಿಕ್ಷಣದಿಂದ ಮಾತ್ರ ಸಾಧ್ಯ-ಸಚಿವ ಸತೀಶ್ ಜಾರಕಿಹೊಳಿ

ಕೋಲಾರ: ಸಮಾಜದಲ್ಲಿನ ತಾರತಮ್ಯ ನಿವಾರಣೆಗೆ ಶಿಕ್ಷಣದಿಂದ ಮಾತ್ರ ಸಾಧ್ಯವಿದ್ದು ಪ್ರಸ್ತುತ ಸರಕಾರಿ ಉದ್ಯೋಗ, ರಾಜಕೀಯ ಸ್ಥಾನಮಾನಗಳಿಗೆ ಹೋರಾಟದ ಅನಿವಾರ್ಯವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾ ವಾಲ್ಮೀಕಿ ನಾಯಕ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ದಿವಂಗತ ಸಿ.ಆರ್ ಮಾಲಾ ಅವರ ಜ್ಞಾಪಕಾರ್ಥವಾಗಿ 2023-24 ನೇ ಸಾಲಿನ ಎಸ್ಸಿ, ಎಸ್ಟಿ, ಹಾಗೂ ಅಲ್ಪಸಂಖ್ಯಾತರ ವಿಧ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೌಲಭ್ಯಗಳಿಗಾಗಿ ಸಂವಿಧಾನ ಒಂದಿಷ್ಟು ಅವಕಾಶವನ್ನು ನೀಡಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಜೊತೆಗೆ ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಅರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ಸಮುದಾಯವನ್ನು ತಂದು ನಿಲ್ಲಿಸಬೇಕು ಇದಕ್ಕೆ ನಮ್ಮಲ್ಲಿನ ವೈಮನಸ್ಸು ಬಿಟ್ಟು ಸಂಘಟಿತರಾಗಬೇಕು ಎಂದರು.

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರವು ಜನಪರವಾದ ಯೋಜನೆಗಳನ್ನು ರೂಪಿಸಿದ್ದಾರೆ ಜೊತೆಗೆ ವಿಧ್ಯಾರ್ಥಿಗಳ ಉತ್ಸಾಹ ಮತ್ತು ಹುಮ್ಮಸ್ಸು ಹೆಚ್ಚಾಗಲು ಇಂತಹ ಪೋತ್ಸಾಹದ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಹೋಗಬೇಕು ಅವಕಾಶಗಳು ಯಾವಾಗಲೂ ಸಿಗಲ್ಲ ಸಿಕ್ಕಾಗ ಸದುಪಯೋಗ ಪಡಿಸಿಕೊಳ್ಳಬೇಕು ವಾಲ್ಮೀಕಿ ಸಮುದಾಯವು ಬೇರೆ ಬೇರೆ ಸಮುದಾಯಗಳನ್ನು ಗೌರವಯುತವಾಗಿ ಕಾಣಬೇಕು ಮತ್ತು ಜೊತೆಯಲ್ಲಿ ಕರೆದುಕೊಂಡು ಹೋಗಬೇಕು ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಮನುಷ್ಯನಿಗೆ ಅವಶ್ಯಕತೆ ಇರುವುದನ್ನು ಕೇಳದೇ ಪ್ರಶ್ನೆ ಮಾಡದೇ ಪಡೆಯಲು ಸಾಧ್ಯವಿಲ್ಲ ಅವಕಾಶಗಳಿಗಾಗಿ ಕೆಲವು ಸಂದರ್ಭದಲ್ಲಿ ಹೋರಾಟವು ಮಾಡಬೇಕು ಸಿಎಂ ಸಿದ್ದರಾಮಯ್ಯ ಎಲ್ಲಾ ಜಾತಿ ಸಮುದಾಯಗಳನ್ನು ಜೊತೆಗೆ ಕರೆದುಕೊಂಡು ಹೋಗತ್ತಾ ಇದ್ದಾರೆ ಅವರ ವಿರುದ್ಧವೂ ಸಂಚು ನಡೆಯುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಮಹಾ ಸ್ವಾಮೀಜಿ ಮಾತನಾಡಿ ಜಾತಿ ಎಂಬ ಕಾರಣಗಳಿಂದಾಗಿ ಸಮಾಜದಲ್ಲಿ ತಾರತಮ್ಯದ ಮನೋಭಾವನೆಯಿಂದ ನೋಡುವಂತಾಗಿದೆ ಸಮುದಾಯವನ್ನು ಸ್ವಾಭಿಮಾನದಿಂದ ಬದುಕುವ ವಾತಾವರಣವನ್ನು ಸೃಷ್ಟಿಸಿಕೊಳ್ಳಬೇಕು ವಿಧ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪೋತ್ಸಾಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಯಾವುದೇ ಸಮಾಜಕ್ಕೆ ಒಳ್ಳೆಯದು ಬಯಸುವುದಾದರೆ ನಮ್ಮ ಕೈಲಾದ ಮಟ್ಟಿಗೆ ಸಹಾಯ ಮಾಡಿ ಇತರೆ ಸಮುದಾಯಗಳನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವ ಕೆಲಸವನ್ನು ಮಾಡಬೇಕು ಎಲ್ಲರೂ ಒಂದೇ ಎಂಬುದನ್ನು ಅರ್ಥಮಾಡಿಕೊಂಡು ಒಗ್ಗೂಡಿಸಿಕೊಂಡು ಕಾರ್ಯಕ್ರಮಗಳನ್ನು ಸಮಾಜದಲ್ಲಿ ನಡೆಸಬೇಕು ಹಿಂದೆ ಇದೇ ವಾಲ್ಮೀಕಿ ಸಮುದಾಯ ಭವನದ ಉದ್ಘಾಟನೆಯಲ್ಲೂ ಸಹ ರಾಜಕೀಯ ಮಾಡಿದರು ಆದರೆ ಇವತ್ತು ಭವನದಿಂದ ಎಲ್ಲರಿಗೂ ಅನುಕೂಲವಾಗುತ್ತಿದೆ ಪ್ರತಿಯೊಬ್ಬರೂ ಅಂಬೇಡ್ಕರ್ ವಾಲ್ಮೀಕಿ ಕುವೆಂಪು ಅವರ ಆಶಯಗಳನ್ನು ಮೈಗೂಡಿಸಿಕೊಂಡು ಒಳ್ಳೆಯ ಮಾರ್ಗದಲ್ಲಿ ನಡೆಯಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ನಗರಸಭೆ ಸದಸ್ಯ ಎನ್ ಅಂಬರೀಶ್ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ಎಸ್ಸಿ ಎಸ್ಟಿ ಹಾಗೂ ಅಲ್ಪಸಂಖ್ಯಾತರ ವಿಧ್ಯಾರ್ಥಿಗಳನ್ನು ಅಭಿನಂದನೆ ಸಲ್ಲಿಸುವ ಕೆಲಸವನ್ನು ಮಾಡಿದ್ದೇವೆ ಇವತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಟ್ಟಾಗ ಸಮುದಾಯಗಳು ಮುಖ್ಯವಾಹಿನಿಯಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸುಮಾರು 80 ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು ವೇದಿಕೆಯಲ್ಲಿ ಎಸಿ ಡಾ.ಮೈತ್ರಿ, ತಹಶಿಲ್ದಾರ್ ಹರ್ಷವರ್ಧನ್, ಕುಡಾ ಅಧ್ಯಕ್ಷ ಮಹಮ್ಮದ್ ಅನೀಫ್ , ಕೋಚಿಮುಲ್ ನಿರ್ದೇಶಕ ಷಂಷೀರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರಾದ ಅಶೋಕ್, ಮುರಳಿ, ದಲಿತ ಮುಖಂಡ ಟಿ.ವಿಜಿಕುಮಾರ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್ ಮುಂತಾದವರು ಇದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

2 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

5 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

10 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

12 hours ago