ಸಮಾಜದಲ್ಲಿ ಇನ್ನೂ ಶೇ.25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ: ಸಿಎಂ ಸಿದ್ದರಾಮಯ್ಯ ಕಳವಳ

ಸಮಾಜದಲ್ಲಿ ಇನ್ನೂ ಶೇ25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು.

ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿಯಾಗಿದೆ. ಇವತ್ತಿನ ಬಹಳಷ್ಟು ಪತ್ರಕರ್ತರು ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ? ಇಲ್ಲವಾ? ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎ‌ಂದರು.

ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ. ಇದಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ, “ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಿಬಿಡಬಹುದು” ಎಂದಿದ್ದರು.

ದುಡಿಯುವ ವರ್ಗಗಳು ಹಸಿವಿನಿಂದ ಮಲುಗಿದರೂ ಪರ್ವಾಗಿಲ್ಲ, ಅನ್ನಭಾಗ್ಯ ಮಾತ್ರ ಜಾರಿ ಮಾಡಬಾರದು ಎನ್ನುವ ಹೊಟ್ಟೆ ತುಂಬಿದವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು.

ಜನರ ಜೇಬಿನಲ್ಲಿ ಹಣ ಇದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೆ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣ ಇರುವ ಕಾರ್ಯಕ್ರಮಗಳನ್ನು ನೀಡಿದೆ. ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರವಾದ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು.

ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ, ಡಾ.ಆರ್.ಪೂರ್ಣಿಮಾ, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ, ಹಿರಿಯ ಪತ್ರಕರ್ತರು ಹಾಗೂ ಈ-ದಿನ‌ ಸುದ್ದಿ ಸಂಸ್ಥೆಯ ಮುಖ್ಯಸ್ಥರಾದ ಡಿ.ಉಮಾಪತಿ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತರಾದ ಡಾ.ಹೇಮಂತ್ ಎಂ ನಿಂಬಾಳ್ಕರ್ ಅವರು ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

11 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

12 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

18 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

19 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago