ಸಮಾಜದಲ್ಲಿ ಇನ್ನೂ ಶೇ.25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ: ಸಿಎಂ ಸಿದ್ದರಾಮಯ್ಯ ಕಳವಳ

ಸಮಾಜದಲ್ಲಿ ಇನ್ನೂ ಶೇ25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಮಾತನಾಡಿದರು.

ಮಹಾತ್ಮ ಗಾಂಧಿ, ಅಂಬೇಡ್ಕರ್ ಅವರೂ ಪತ್ರಕರ್ತರಾಗಿ ಪತ್ರಿಕಾ ವೃತ್ತಿಗೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಧ್ವನಿ ಇಲ್ಲದವರಿಗೆ ಧ್ವನಿ ನೀಡುವುದೇ ಪತ್ರಿಕಾ ವೃತ್ತಿಯ ಉದ್ದೇಶ, ಆಶಯ, ಜವಾಬ್ದಾರಿಯಾಗಿದೆ. ಇವತ್ತಿನ ಬಹಳಷ್ಟು ಪತ್ರಕರ್ತರು ಪತ್ರಿಕಾ ವೃತ್ತಿಯ ಆಶಯಕ್ಕೆ ತಕ್ಕಂತೆ ಇದ್ದೇವಾ? ಇಲ್ಲವಾ? ಎನ್ನುವ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎ‌ಂದರು.

ಸಾಮಾಜಿಕ ಅಸಮಾನತೆ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ. ಇದಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ, “ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಿಬಿಡಬಹುದು” ಎಂದಿದ್ದರು.

ದುಡಿಯುವ ವರ್ಗಗಳು ಹಸಿವಿನಿಂದ ಮಲುಗಿದರೂ ಪರ್ವಾಗಿಲ್ಲ, ಅನ್ನಭಾಗ್ಯ ಮಾತ್ರ ಜಾರಿ ಮಾಡಬಾರದು ಎನ್ನುವ ಹೊಟ್ಟೆ ತುಂಬಿದವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು.

ಜನರ ಜೇಬಿನಲ್ಲಿ ಹಣ ಇದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೆ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣ ಇರುವ ಕಾರ್ಯಕ್ರಮಗಳನ್ನು ನೀಡಿದೆ. ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರವಾದ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು.

ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ, ಡಾ.ಆರ್.ಪೂರ್ಣಿಮಾ, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ, ಹಿರಿಯ ಪತ್ರಕರ್ತರು ಹಾಗೂ ಈ-ದಿನ‌ ಸುದ್ದಿ ಸಂಸ್ಥೆಯ ಮುಖ್ಯಸ್ಥರಾದ ಡಿ.ಉಮಾಪತಿ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತರಾದ ಡಾ.ಹೇಮಂತ್ ಎಂ ನಿಂಬಾಳ್ಕರ್ ಅವರು ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

1 hour ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

2 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

14 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

15 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

18 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago