ಸಮಾಜದಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಪಾತ್ರ ಬಹಳ ಮುಖ್ಯ- ಎಎಸ್ ಪಿ ಪುರುಷೋತ್ತಮ್

ನಗರದಲ್ಲಿ ಸರಗಳ್ಳತನ, ಹಗಲು ದರರೋಡೆ, ಬೆದರಿಕೆ, ಕೊಲೆ ಸೇರಿದಂತೆ ಇತರೆ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ನೇತೃತ್ವದಲ್ಲಿ ನಗರದ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಇತ್ತೀಚಿಗೆ ದೊಡ್ಡಬಳ್ಳಾಪುರ ನಗರ ಭಾಗದಲ್ಲಿ ಅತಿಹೆಚ್ಚಾಗಿ ಹಾಡಹಗಲೇ ಒಂಟಿ ಮಹಿಳೆಯರನ್ನ ಗುರಿಯಾಗಿಸಿಕೊಂಡು ಮಹಿಳೆಯರ ಬಳಿ ಚಿನ್ನದ ಸರ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗುತ್ತಿರುವ ಕಳ್ಳರು.

ತಮ್ಮ ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಂಡ ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಅವರ ದೂರಿನ್ವಯ ಕಳ್ಳರ ಉಪಟಳ ಮಟ್ಟಹಾಕಲು ಪೊಲೀಸರು ತಮ್ಮ ಕಾರ್ಯವನ್ನು ನಿಭಾಯಿಸುತ್ತಿದ್ದರೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ವಿಷಾದನೀಯ.

ಕಳ್ಳರನ್ನು ಮಟ್ಟಹಾಕಲು ಪೊಲೀಸರು ಜೊತೆ ಸಾರ್ವಜನಿಕರು ಸಹ ಸಹಕರಿಸಿದರೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬಹುದು. ಯಾವುದೇ ಕಳ್ಳತನ ಮತ್ತಿತರ ಕಾನೂನು ಬಾಹಿರ ಘಟನೆಗಳು ನಡೆದರೆ ತಕ್ಷಣವೇ ಪೊಲೀಸರಿಗೆ ಕೂಡಲೇ ಮಾಹಿತಿ ನೀಡಬೇಕು. ಮನೆಯಿಂದ ಹೊರ ಬಂದಾಗ‌ ಅಕ್ಕಪಕ್ಕದಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ನಡವಳಿಕೆ ತೋರುತ್ತಿರುವುದು ತಮ್ಮ ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಥವಾ ಅಲ್ಲಿಂದ ಸುರಕ್ಷಿತ ಸ್ಥಳಕ್ಕೆ ಹೋಗಿ ಎಂದು ಎಎಸ್ಪಿ ಪುರುಷೋತ್ತಮ್ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ತಾಲೂಕಿನಲ್ಲಿ ಜನ‌ಸ್ನೇಹಿ ಪೊಲೀಸ್ ವ್ಯವಸ್ಥೆ ಇದ್ದು ಯಾರೂ ಹಿಂಜರಿಯದೆ, ಭಯಪಡದೇ ತಮಗಾದ ಅನ್ಯಾಯದ ಬಗ್ಗೆ ದೂರು ನೀಡಿದರೆ, ಕೂಡಲೇ ಸೂಕ್ತ ತನಿಖೆಯಿಂದ ಕಾನೂನು ರೀತಿಯಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಕೆಲಸ‌ ಮಾಡಲಾಗುವುದು ಎಂದು ತಿಳಿಸಿದರು.

ಇದರ ಜೊತೆಗೆ ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಶೀಘ್ರದಲ್ಲೇ ಕಾನೂನು ವ್ಯಾಪ್ತಿಯಲ್ಲಿ ಇತ್ಯರ್ಥಪಡಿಸುವ ಭರವಸೆ ನೀಡಲಾಯಿತು.

ಈ ವೇಳೆ ಡಿವೈಎಸ್ ಪಿ ನಾಗರಾಜು, ಇನ್ಸ್‌ಪೆಕ್ಟರ್ ಪ್ರೀತಮ್, ಹರೀಶ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

20 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

22 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

23 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

2 days ago