ಸಮಾಜದಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಪಾತ್ರ ಬಹಳ ಮುಖ್ಯ- ಎಎಸ್ ಪಿ ಪುರುಷೋತ್ತಮ್

ನಗರದಲ್ಲಿ ಸರಗಳ್ಳತನ, ಹಗಲು ದರರೋಡೆ, ಬೆದರಿಕೆ, ಕೊಲೆ ಸೇರಿದಂತೆ ಇತರೆ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ನೇತೃತ್ವದಲ್ಲಿ ನಗರದ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಇತ್ತೀಚಿಗೆ ದೊಡ್ಡಬಳ್ಳಾಪುರ ನಗರ ಭಾಗದಲ್ಲಿ ಅತಿಹೆಚ್ಚಾಗಿ ಹಾಡಹಗಲೇ ಒಂಟಿ ಮಹಿಳೆಯರನ್ನ ಗುರಿಯಾಗಿಸಿಕೊಂಡು ಮಹಿಳೆಯರ ಬಳಿ ಚಿನ್ನದ ಸರ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗುತ್ತಿರುವ ಕಳ್ಳರು.

ತಮ್ಮ ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಂಡ ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಅವರ ದೂರಿನ್ವಯ ಕಳ್ಳರ ಉಪಟಳ ಮಟ್ಟಹಾಕಲು ಪೊಲೀಸರು ತಮ್ಮ ಕಾರ್ಯವನ್ನು ನಿಭಾಯಿಸುತ್ತಿದ್ದರೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ವಿಷಾದನೀಯ.

ಕಳ್ಳರನ್ನು ಮಟ್ಟಹಾಕಲು ಪೊಲೀಸರು ಜೊತೆ ಸಾರ್ವಜನಿಕರು ಸಹ ಸಹಕರಿಸಿದರೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬಹುದು. ಯಾವುದೇ ಕಳ್ಳತನ ಮತ್ತಿತರ ಕಾನೂನು ಬಾಹಿರ ಘಟನೆಗಳು ನಡೆದರೆ ತಕ್ಷಣವೇ ಪೊಲೀಸರಿಗೆ ಕೂಡಲೇ ಮಾಹಿತಿ ನೀಡಬೇಕು. ಮನೆಯಿಂದ ಹೊರ ಬಂದಾಗ‌ ಅಕ್ಕಪಕ್ಕದಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ನಡವಳಿಕೆ ತೋರುತ್ತಿರುವುದು ತಮ್ಮ ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಥವಾ ಅಲ್ಲಿಂದ ಸುರಕ್ಷಿತ ಸ್ಥಳಕ್ಕೆ ಹೋಗಿ ಎಂದು ಎಎಸ್ಪಿ ಪುರುಷೋತ್ತಮ್ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ತಾಲೂಕಿನಲ್ಲಿ ಜನ‌ಸ್ನೇಹಿ ಪೊಲೀಸ್ ವ್ಯವಸ್ಥೆ ಇದ್ದು ಯಾರೂ ಹಿಂಜರಿಯದೆ, ಭಯಪಡದೇ ತಮಗಾದ ಅನ್ಯಾಯದ ಬಗ್ಗೆ ದೂರು ನೀಡಿದರೆ, ಕೂಡಲೇ ಸೂಕ್ತ ತನಿಖೆಯಿಂದ ಕಾನೂನು ರೀತಿಯಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಕೆಲಸ‌ ಮಾಡಲಾಗುವುದು ಎಂದು ತಿಳಿಸಿದರು.

ಇದರ ಜೊತೆಗೆ ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಶೀಘ್ರದಲ್ಲೇ ಕಾನೂನು ವ್ಯಾಪ್ತಿಯಲ್ಲಿ ಇತ್ಯರ್ಥಪಡಿಸುವ ಭರವಸೆ ನೀಡಲಾಯಿತು.

ಈ ವೇಳೆ ಡಿವೈಎಸ್ ಪಿ ನಾಗರಾಜು, ಇನ್ಸ್‌ಪೆಕ್ಟರ್ ಪ್ರೀತಮ್, ಹರೀಶ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

7 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago