ನಗರದಲ್ಲಿ ಸರಗಳ್ಳತನ, ಹಗಲು ದರರೋಡೆ, ಬೆದರಿಕೆ, ಕೊಲೆ ಸೇರಿದಂತೆ ಇತರೆ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ನೇತೃತ್ವದಲ್ಲಿ ನಗರದ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಇತ್ತೀಚಿಗೆ ದೊಡ್ಡಬಳ್ಳಾಪುರ ನಗರ ಭಾಗದಲ್ಲಿ ಅತಿಹೆಚ್ಚಾಗಿ ಹಾಡಹಗಲೇ ಒಂಟಿ ಮಹಿಳೆಯರನ್ನ ಗುರಿಯಾಗಿಸಿಕೊಂಡು ಮಹಿಳೆಯರ ಬಳಿ ಚಿನ್ನದ ಸರ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗುತ್ತಿರುವ ಕಳ್ಳರು.
ಕಳ್ಳರನ್ನು ಮಟ್ಟಹಾಕಲು ಪೊಲೀಸರು ಜೊತೆ ಸಾರ್ವಜನಿಕರು ಸಹ ಸಹಕರಿಸಿದರೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬಹುದು. ಯಾವುದೇ ಕಳ್ಳತನ ಮತ್ತಿತರ ಕಾನೂನು ಬಾಹಿರ ಘಟನೆಗಳು ನಡೆದರೆ ತಕ್ಷಣವೇ ಪೊಲೀಸರಿಗೆ ಕೂಡಲೇ ಮಾಹಿತಿ ನೀಡಬೇಕು. ಮನೆಯಿಂದ ಹೊರ ಬಂದಾಗ ಅಕ್ಕಪಕ್ಕದಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ನಡವಳಿಕೆ ತೋರುತ್ತಿರುವುದು ತಮ್ಮ ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಥವಾ ಅಲ್ಲಿಂದ ಸುರಕ್ಷಿತ ಸ್ಥಳಕ್ಕೆ ಹೋಗಿ ಎಂದು ಎಎಸ್ಪಿ ಪುರುಷೋತ್ತಮ್ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಇದರ ಜೊತೆಗೆ ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಶೀಘ್ರದಲ್ಲೇ ಕಾನೂನು ವ್ಯಾಪ್ತಿಯಲ್ಲಿ ಇತ್ಯರ್ಥಪಡಿಸುವ ಭರವಸೆ ನೀಡಲಾಯಿತು.
ಈ ವೇಳೆ ಡಿವೈಎಸ್ ಪಿ ನಾಗರಾಜು, ಇನ್ಸ್ಪೆಕ್ಟರ್ ಪ್ರೀತಮ್, ಹರೀಶ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…