ಸಮಾಜದಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಪಾತ್ರ ಬಹಳ ಮುಖ್ಯ- ಎಎಸ್ ಪಿ ಪುರುಷೋತ್ತಮ್

ನಗರದಲ್ಲಿ ಸರಗಳ್ಳತನ, ಹಗಲು ದರರೋಡೆ, ಬೆದರಿಕೆ, ಕೊಲೆ ಸೇರಿದಂತೆ ಇತರೆ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ನೇತೃತ್ವದಲ್ಲಿ ನಗರದ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಇತ್ತೀಚಿಗೆ ದೊಡ್ಡಬಳ್ಳಾಪುರ ನಗರ ಭಾಗದಲ್ಲಿ ಅತಿಹೆಚ್ಚಾಗಿ ಹಾಡಹಗಲೇ ಒಂಟಿ ಮಹಿಳೆಯರನ್ನ ಗುರಿಯಾಗಿಸಿಕೊಂಡು ಮಹಿಳೆಯರ ಬಳಿ ಚಿನ್ನದ ಸರ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗುತ್ತಿರುವ ಕಳ್ಳರು.

ತಮ್ಮ ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಂಡ ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಅವರ ದೂರಿನ್ವಯ ಕಳ್ಳರ ಉಪಟಳ ಮಟ್ಟಹಾಕಲು ಪೊಲೀಸರು ತಮ್ಮ ಕಾರ್ಯವನ್ನು ನಿಭಾಯಿಸುತ್ತಿದ್ದರೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ವಿಷಾದನೀಯ.

ಕಳ್ಳರನ್ನು ಮಟ್ಟಹಾಕಲು ಪೊಲೀಸರು ಜೊತೆ ಸಾರ್ವಜನಿಕರು ಸಹ ಸಹಕರಿಸಿದರೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬಹುದು. ಯಾವುದೇ ಕಳ್ಳತನ ಮತ್ತಿತರ ಕಾನೂನು ಬಾಹಿರ ಘಟನೆಗಳು ನಡೆದರೆ ತಕ್ಷಣವೇ ಪೊಲೀಸರಿಗೆ ಕೂಡಲೇ ಮಾಹಿತಿ ನೀಡಬೇಕು. ಮನೆಯಿಂದ ಹೊರ ಬಂದಾಗ‌ ಅಕ್ಕಪಕ್ಕದಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ನಡವಳಿಕೆ ತೋರುತ್ತಿರುವುದು ತಮ್ಮ ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಥವಾ ಅಲ್ಲಿಂದ ಸುರಕ್ಷಿತ ಸ್ಥಳಕ್ಕೆ ಹೋಗಿ ಎಂದು ಎಎಸ್ಪಿ ಪುರುಷೋತ್ತಮ್ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ತಾಲೂಕಿನಲ್ಲಿ ಜನ‌ಸ್ನೇಹಿ ಪೊಲೀಸ್ ವ್ಯವಸ್ಥೆ ಇದ್ದು ಯಾರೂ ಹಿಂಜರಿಯದೆ, ಭಯಪಡದೇ ತಮಗಾದ ಅನ್ಯಾಯದ ಬಗ್ಗೆ ದೂರು ನೀಡಿದರೆ, ಕೂಡಲೇ ಸೂಕ್ತ ತನಿಖೆಯಿಂದ ಕಾನೂನು ರೀತಿಯಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಕೆಲಸ‌ ಮಾಡಲಾಗುವುದು ಎಂದು ತಿಳಿಸಿದರು.

ಇದರ ಜೊತೆಗೆ ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಶೀಘ್ರದಲ್ಲೇ ಕಾನೂನು ವ್ಯಾಪ್ತಿಯಲ್ಲಿ ಇತ್ಯರ್ಥಪಡಿಸುವ ಭರವಸೆ ನೀಡಲಾಯಿತು.

ಈ ವೇಳೆ ಡಿವೈಎಸ್ ಪಿ ನಾಗರಾಜು, ಇನ್ಸ್‌ಪೆಕ್ಟರ್ ಪ್ರೀತಮ್, ಹರೀಶ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

2 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago