ಸಮಾಜದಲ್ಲಿ ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಪಾತ್ರ ಬಹಳ ಮುಖ್ಯ- ಎಎಸ್ ಪಿ ಪುರುಷೋತ್ತಮ್

ನಗರದಲ್ಲಿ ಸರಗಳ್ಳತನ, ಹಗಲು ದರರೋಡೆ, ಬೆದರಿಕೆ, ಕೊಲೆ ಸೇರಿದಂತೆ ಇತರೆ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ದೊಡ್ಡಬಳ್ಳಾಪುರ ಪೊಲೀಸ್ ಉಪವಿಭಾಗದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್ ನೇತೃತ್ವದಲ್ಲಿ ನಗರದ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿತ್ತು. ಸಭೆಯಲ್ಲಿ ಹೆಚ್ಚುತ್ತಿರುವ ಸರಗಳ್ಳತನ ಹಾಗೂ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಇತ್ತೀಚಿಗೆ ದೊಡ್ಡಬಳ್ಳಾಪುರ ನಗರ ಭಾಗದಲ್ಲಿ ಅತಿಹೆಚ್ಚಾಗಿ ಹಾಡಹಗಲೇ ಒಂಟಿ ಮಹಿಳೆಯರನ್ನ ಗುರಿಯಾಗಿಸಿಕೊಂಡು ಮಹಿಳೆಯರ ಬಳಿ ಚಿನ್ನದ ಸರ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳನ್ನು ಕದ್ದು ಪರಾರಿಯಾಗುತ್ತಿರುವ ಕಳ್ಳರು.

ತಮ್ಮ ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಂಡ ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಾರೆ. ಅವರ ದೂರಿನ್ವಯ ಕಳ್ಳರ ಉಪಟಳ ಮಟ್ಟಹಾಕಲು ಪೊಲೀಸರು ತಮ್ಮ ಕಾರ್ಯವನ್ನು ನಿಭಾಯಿಸುತ್ತಿದ್ದರೂ ಇಂತಹ ಘಟನೆಗಳು ಮರುಕಳಿಸುತ್ತಿರುವುದು ವಿಷಾದನೀಯ.

ಕಳ್ಳರನ್ನು ಮಟ್ಟಹಾಕಲು ಪೊಲೀಸರು ಜೊತೆ ಸಾರ್ವಜನಿಕರು ಸಹ ಸಹಕರಿಸಿದರೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬಹುದು. ಯಾವುದೇ ಕಳ್ಳತನ ಮತ್ತಿತರ ಕಾನೂನು ಬಾಹಿರ ಘಟನೆಗಳು ನಡೆದರೆ ತಕ್ಷಣವೇ ಪೊಲೀಸರಿಗೆ ಕೂಡಲೇ ಮಾಹಿತಿ ನೀಡಬೇಕು. ಮನೆಯಿಂದ ಹೊರ ಬಂದಾಗ‌ ಅಕ್ಕಪಕ್ಕದಲ್ಲಿ ಯಾರಾದರೂ ಅನುಮಾನಾಸ್ಪದವಾಗಿ ನಡವಳಿಕೆ ತೋರುತ್ತಿರುವುದು ತಮ್ಮ ಗಮನಕ್ಕೆ ಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಅಥವಾ ಅಲ್ಲಿಂದ ಸುರಕ್ಷಿತ ಸ್ಥಳಕ್ಕೆ ಹೋಗಿ ಎಂದು ಎಎಸ್ಪಿ ಪುರುಷೋತ್ತಮ್ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ತಾಲೂಕಿನಲ್ಲಿ ಜನ‌ಸ್ನೇಹಿ ಪೊಲೀಸ್ ವ್ಯವಸ್ಥೆ ಇದ್ದು ಯಾರೂ ಹಿಂಜರಿಯದೆ, ಭಯಪಡದೇ ತಮಗಾದ ಅನ್ಯಾಯದ ಬಗ್ಗೆ ದೂರು ನೀಡಿದರೆ, ಕೂಡಲೇ ಸೂಕ್ತ ತನಿಖೆಯಿಂದ ಕಾನೂನು ರೀತಿಯಲ್ಲಿ ನ್ಯಾಯ ಒದಗಿಸಲು ಪ್ರಾಮಾಣಿಕ ಕೆಲಸ‌ ಮಾಡಲಾಗುವುದು ಎಂದು ತಿಳಿಸಿದರು.

ಇದರ ಜೊತೆಗೆ ಸಭೆಯಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಶೀಘ್ರದಲ್ಲೇ ಕಾನೂನು ವ್ಯಾಪ್ತಿಯಲ್ಲಿ ಇತ್ಯರ್ಥಪಡಿಸುವ ಭರವಸೆ ನೀಡಲಾಯಿತು.

ಈ ವೇಳೆ ಡಿವೈಎಸ್ ಪಿ ನಾಗರಾಜು, ಇನ್ಸ್‌ಪೆಕ್ಟರ್ ಪ್ರೀತಮ್, ಹರೀಶ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

1 hour ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

11 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

14 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 day ago