Categories: ಲೇಖನ

ಸಮಾಜದಲ್ಲಿ ಗ್ರಹಿಕೆ ಎಂಬ ಭಾವ ಮತ್ತು ಅರಿವು ನಿಜಕ್ಕೂ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ…?

ಗ್ರಹಿಕೆ…….

” ಈ ಜಗತ್ತು ನಾವು ನಮ್ಮ ಬಗ್ಗೆ ಹೇಳುವ ಸತ್ಯಕ್ಕಿಂತ ಇತರರು ನಮ್ಮ ಬಗ್ಗೆ ಹೇಳುವ ಸುಳ್ಳುಗಳನ್ನೇ ಹೆಚ್ಚು ನಂಬುತ್ತದೆ….”
ಭಾರತರತ್ನ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ……..

ಎಷ್ಟೋ ಬಾರಿ ಈ ಮಾತು ನಮ್ಮೊಳಗೆ ಹೌದು, ಇದು ನಿಜ ಎನಿಸುತ್ತಿರುತ್ತೆ. ಏಕೆಂದರೆ ಕೆಲವೊಮ್ಮೆ ನಾವು ನಮ್ಮದಲ್ಲದ, ನಾವು ಮಾಡಿರದ ಆರೋಪಗಳನ್ನು ನಮ್ಮ ಮೇಲೆ ಹೊರಿಸಿದಾಗ ಮನಸ್ಸು ತಳಮಳಗೊಳ್ಳುತ್ತದೆ. ಮಾನಸಿಕ ಒತ್ತಡಕ್ಕೊಳಗಾಗುತ್ತದೆ. ನಮ್ಮ ತಪ್ಪು ನಮಗೆ ಪಶ್ಚಾತಾಪದ ಭಾವನೆ ಮೂಡಿಸಿದರೆ, ನಮ್ಮದಲ್ಲದ ತಪ್ಪು ಹಿಂಸಾತ್ಮಕ ಮನಸ್ಥಿತಿಯನ್ನು ಸೃಷ್ಟಿ ಮಾಡುತ್ತದೆ. ಇದು ಭಂಡ ವ್ಯಕ್ತಿತ್ವದವರಿಗೆ ಅಷ್ಟಾಗಿ ಅನ್ವಯಿಸುವುದಿಲ್ಲ. ಏಕೆಂದರೆ ಅವರು ಎಲ್ಲವನ್ನು ಸಾಧ್ಯವಾದಷ್ಟು ಸಮ ಪ್ರಮಾಣದಲ್ಲಿಯೋ ಅಥವಾ ನಿರ್ಲಕ್ಷದ ಮನೋಭಾವದಲ್ಲಿಯೋ ಅಥವಾ ಅಜ್ಞಾನದ ರೀತಿ ತಮಗೆ ಅನ್ವಯಿಸುವುದೇ ಇಲ್ಲ ಎಂದು ಪರಿಗಣಿಸಿದಾಗ ಇದು ಅಷ್ಟಾಗಿ ಬಾಧಿಸುವುದಿಲ್ಲ….

ಏಕೆ ಹೀಗೆ ಎಂದರೆ ಈ ಸಮಾಜದಲ್ಲಿ ಗ್ರಹಿಕೆ ಎಂಬ ಭಾವ ಮತ್ತು ಅರಿವು ನಿಜಕ್ಕೂ ಸರಿಯಾಗಿ ಕೆಲಸ ಮಾಡುತ್ತಿಲ್ಲ. ನಮ್ಮೊಳಗೆ ಈ ಗ್ರಹಿಕೆ ಸರಿಯಾಗಿ ಅರ್ಥವಾಗುವಷ್ಟು ನಮ್ಮ ವ್ಯಕ್ತಿತ್ವ ರೂಪುಗೊಂಡಿರುವುದೇ ಇಲ್ಲ. ಆಗ ಅದು ತಪ್ಪಾಗಿ ಮತ್ತು ಸುಲಭವಾಗಿ ಇನ್ನೊಬ್ಬರ ಮಾತನ್ನು ಅರ್ಥ ಮಾಡಿಕೊಳ್ಳುತ್ತದೆ. ಇದು ಜೀವನದ ಎಲ್ಲ ಕ್ಷೇತ್ರಗಳಿಗೂ, ಎಲ್ಲಾ ವರ್ಗದ, ಎಲ್ಲಾ ವಯೋಮಾನದವರಿಗೂ ಸಮ ಪ್ರಮಾಣದಲ್ಲಿ ಅನ್ವಯಿಸುತ್ತದೆ…..

ನಮ್ಮಲ್ಲಿ ಸರಿಯಾದ ಗ್ರಹಿಕೆ ಮೂಡಲು ಅಧ್ಯಯನ, ಚಿಂತನೆ, ಅನುಭವ, ಹೃದಯ ವೈಶಾಲ್ಯತೆ, ಶ್ರಮ, ಕ್ಷಮಾಗುಣ, ಕರುಣೆ, ತ್ಯಾಗ, ಸಹಕಾರ, ಸಮನ್ವಯ ಮುಂತಾದ ಎಲ್ಲಾ ಗುಣಗಳು ಸಮ್ಮಿಲನವಾಗಿರಬೇಕಾಗುತ್ತದೆ. ಆಗ ಮಾತ್ರ ಅದು ಸಾಧ್ಯ. ಉದಾಹರಣೆಗೆ ಮನುಷ್ಯನ ಸಮಗ್ರ ವ್ಯಕ್ತಿತ್ವವನ್ನು ಗ್ರಹಿಸುವಲ್ಲಿ ಗೌತಮ ಬುದ್ಧ ಒಂದು ಮಾದರಿಯಾದರೆ, ಸಾಮಾಜಿಕ ಬದುಕನ್ನು ಗ್ರಹಿಸುವಲ್ಲಿ ಬಸವಣ್ಣ ಮತ್ತೊಂದು ಮಾದರಿಯಾಗುತ್ತಾರೆ, ಹಾಗೆಯೇ ಶೋಷಣೆಯನ್ನು ಗ್ರಹಿಸುವಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರು, ರಾಜಕೀಯವನ್ನು ಗ್ರಹಿಸುವಲ್ಲಿ ಕೌಟಿಲ್ಯನೆಂಬ ಚಾಣಕ್ಯ, ಧರ್ಮ ಮತ್ತು ಆಧ್ಯಾತ್ಮವನ್ನು ಗ್ರಹಿಸುವಲ್ಲಿ ಸ್ವಾಮಿ ವಿವೇಕಾನಂದರು, ನೈತಿಕ ವ್ಯಕ್ತಿತ್ವವನ್ನು ಗ್ರಹಿಸುವಲ್ಲಿ ಮಹಾತ್ಮ ಗಾಂಧಿಯವರು ಹೀಗೆ ಅನೇಕರು ತಮ್ಮ ಗ್ರಹಿಕೆಯಿಂದಲೇ ಇಡೀ ಸಮಾಜಕ್ಕೆ ಮಾರ್ಗದರ್ಶಕರಾಗಿ, ಮಾದರಿಯಾಗಿ ನಮ್ಮ ಮುಂದೆ ನಿಲ್ಲುತ್ತಾರೆ……

ಆ ಗ್ರಹಿಕೆ ಸರಿಯಾದ ದಿಕ್ಕಿನಲ್ಲಿ ಸಾಗದಿದ್ದರೆ ಎಪಿಜೆ ಅಬ್ದುಲ್ ಕಲಾಂ ಅವರು ಹೇಳಿದಂತೆ ಇತರರ ಬಗ್ಗೆ ನಾವು ಅಥವಾ ನಮ್ಮ ಬಗ್ಗೆ ಇತರರು ಹೇಳುವುದನ್ನೇ ನಾವು ಸುಲಭವಾಗಿ ನಂಬುತ್ತೇವೆ. ಆ ಬಗ್ಗೆ ಸಮಗ್ರ ಚಿಂತನೆ ಮಾಡುವುದಿಲ್ಲ. ಅದರಲ್ಲಿ ಕೆಲವೊಮ್ಮೆ ನಿಜ ಇರಬಹುದೇ ಆದರೂ ಒಟ್ಟಾರೆಯಾಗಿ ಇನ್ನೊಬ್ಬರು, ಮುಖ್ಯವಾಗಿ ಅವರ ನೆಗೆಟಿವ್ ಅಥವಾ ನಕಾರಾತ್ಮಕ ಅಥವಾ ಕೆಟ್ಟ ಗುಣಗಳನ್ನು ಹೇಳಿದರೆ ನಾವು ಅದನ್ನೇ ನಂಬಿ ಅವರ ಬಗ್ಗೆ ಅಭಿಪ್ರಾಯ ಹೊಂದುತ್ತೇವೆ…..

ಇದು ಇಂದಿನ ಸಮಾಜದ ಜನರ ಮಾನಸಿಕ ಸ್ಥಿತಿ. ಯಾರೋ ಒಬ್ಬರು ಅವನು ಎಡಪಂಥೀಯ ಎಂತಲೋ ಅಥವಾ ಇನ್ನೊಬ್ಬರು ಆತ ಬಲಪಂಥೀಯ ಎಂತಲೋ ಅಥವಾ ಆತ ಮುಖವಾಡದ ಎಡಬಿಡಂಗಿ ಅಂತಲೋ, ಅಥವಾ ಆತ ಭ್ರಷ್ಟ ಎಂತಲೋ ಅಥವಾ ಅವಕಾಶವಾದಿ ಎಂತಲೋ ಅಥವಾ ಕೆಟ್ಟವನು ಎಂತಲೋ ಹೀಗೆ ಏನಾದರೂ ಹೇಳಿದರೆ ಅದನ್ನು ಸಂಪೂರ್ಣವಾಗಿ ಪರಿಶೀಲಿಸಿ, ಅವರೊಂದಿಗೆ ಮಾತುಕತೆ ನಡೆಸಿ, ಮನದಟ್ಟು ಮಾಡಿಕೊಂಡ ನಂತರವೇ ನಾವು ಒಂದು ತೀರ್ಮಾನಕ್ಕೆ ಬರಬೇಕಾಗುತ್ತದೆ. ಇಲ್ಲದಿದ್ದರೆ ಇತರರು ಹೇಳುವ ಸುಳ್ಳನ್ನೇ ನಿಜ ಎಂದು ನಂಬಿ ನಮ್ಮ ಆತ್ಮಕ್ಕೆ ನಾವು ಮೋಸ ಮಾಡಿಕೊಳ್ಳುತ್ತೇವೆ…..

ಈ ಆಧುನಿಕ ಕಾಲದ ಮಾಧ್ಯಮ ಕ್ರಾಂತಿಯ ಸಂದರ್ಭದಲ್ಲಿ ಅಬ್ದುಲ್ ಕಲಾಂ ಅವರ ಮಾತುಗಳನ್ನು ನಾವು ತುಂಬಾ ಗಂಭೀರವಾಗಿ ತೆಗೆದುಕೊಳ್ಳಬೇಕಾಗುತ್ತದೆ. ಇಲ್ಲದಿದ್ದರೆ ಸುಳ್ಳುಗಳೇ ಈ ಜಗತ್ತನ್ನು ಆಳುವ ದಿನಗಳು ದೂರವಿಲ್ಲ……

ಬ್ರೇಕಿಂಗ್ ನ್ಯೂಸ್ ಗಳು, ವಾಟ್ಸಾಪ್ ಯೂನಿವರ್ಸಿಟಿಗಳು, ಸೋಷಿಯಲ್ ಮೀಡಿಯಾ ತತ್ವಜ್ಞಾನಿಗಳು ಇಡಿ ಸಮಾಜವನ್ನು ಆಕ್ರಮಿಸಿ ಕೃತಕ ಭಾವನೆಯ, ಮನಸ್ಸುಗಳ, ಚಿಂತನೆಯ, ವಿಚಾರಗಳ ನವ ಸಮಾಜ ನಿರ್ಮಾಣವಾಗುವುದು ಖಚಿತ. ಎಚ್ಚರಿಕೆ ಇರಲಿ…….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

23 minutes ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

44 minutes ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

2 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

2 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

3 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

11 hours ago