Categories: ಕೋಲಾರ

ಸಮಾಜದಲ್ಲಿ ಶಾಂತಿ ನೆಮ್ಮದಿಗೆ ಧಾರ್ಮಿಕ ಕಾರ್ಯಗಳು ಅಗತ್ಯ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಧಾರ್ಮಿಕ ಕಾರ್ಯಗಳನ್ನು ನಿರಂತರವಾಗಿ ಮಾಡುವುದರಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಹಕಾರಿಯಾಗುತ್ತದೆ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ತಿಳಿಸಿದರು.

ತಾಲೂಕಿನ ಕೆಂದಟ್ಟಿ ಗ್ರಾಮದಲ್ಲಿ ಶುಕ್ರವಾರ ಅಭಯ ಆಂಜನೇಯಸ್ವಾಮಿಯ ನೂತನ ದೇವಾಲಯದ ಪ್ರತಿಷ್ಟಾಪನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಮಾಜದಲ್ಲಿ ಬದುಕುವ ಪ್ರತಿಯೊಬ್ಬರ ಮೇಲೆ ದೇವರ ಅನುಗ್ರಹ ಇರಬೇಕು ಗ್ರಾಮೀಣ ಭಾಗದಲ್ಲಿ ನಿರಂತರ ಧರ್ಮಾಚರಣೆಯಿಂದ ಸಮನ್ವಯತೆ, ಸಹಬಾಳ್ವೆಯಿಂದ ಜೀವನ ನಡೆಸಲು ಸಹಕಾರಿಯಾಗುತ್ತದೆ. ಮನುಷ್ಯನು ಸ್ವಯಂ ಪೇರಿತವಾಗಿ ದೇವರ ದರ್ಶನ, ಧ್ಯಾನ ಹಾಗೂ ಮಹಾತ್ಮರು, ಸಂತರು, ತ್ಯಾಗಿಗಳು ಹಾಕಿದ ಮಾರ್ಗದಲ್ಲಿ ನಡೆಯಬೇಕು ಎಂದರು.

ಇವತ್ತಿನ ಜಾಗತೀಕರಣ ಹಾಗೂ ಅಧುನೀಕರಣದ ಭರಾಟೆಯಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಂರಕ್ಷಣೆ ಅಗತ್ಯವಾಗಿದೆ ನಿಜವಾದ ಮಾನವೀಯತೆ, ಅನುಕಂಪವು ಇಲ್ಲದಂತಹ ವಾತಾವರಣ ನಿರ್ಮಾಣಗೊಳ್ಳುತ್ತಿದ್ದು, ಧಾರ್ಮಿಕ ಹಾಗೂ ಸಾಮಾಜಿಕ ಮೌಲ್ಯಗಳು ಜನರಿಂದ ಕಣ್ಮರೆಯಾದರೆ ಧರ್ಮದ ಮೌಲ್ಯಗಳು ಹಾಗೂ ಸಂಸ್ಕೃತಿ ಉಳಿಯಲಾರದು. ಬದುಕಿನಲ್ಲಿ ಶಾಂತಿ, ನೆಮ್ಮದಿ ಪ್ರಾಪ್ತವಾಗಬೇಕಾದರೆ ಒಳ್ಳೆಯ ಮಾರ್ಗದಲ್ಲಿ ಪ್ರತಿಯೊಬ್ಬರೂ ನಡೆಯಬೇಕು. ಪ್ರತಿಯೊಂದು ಧರ್ಮವನ್ನು ಪರಸ್ಪರ ಅರ್ಥೈಸಿಕೊಂಡು ಪ್ರೀತಿ, ವಿಶ್ವಾಸ ಹಾಗೂ ಸಹಬಾಳ್ವೆಯಿಂದ ಬದುಕಬೇಕು. ಸಮಾಜದಲ್ಲಿ ವಾಸಿಸುವ ಮನುಷ್ಯನ ಅಜ್ಞಾನದ ಕತ್ತಲೆ ಹೋಗಲಾಡಿಸಿ, ಸುಂದರ ಸಮಾಜ ಪರಿವರ್ತನೆಗೆ ದೇವರ ಹಿರಿಯರ ನುಡಿಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ಮನುಷ್ಯನಾಗಿ ಬದುಕುವ ಅಗತ್ಯವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, ಸಮಾಜದಲ್ಲಿ ಮಾನವೀಯತೆ ಹಾಗೂ ನೈತಿಕ ಮೌಲ್ಯಗಳು ನಾಶವಾಗುತ್ತಿವೆ. ಹಿಂದಿನ ಕಾಲದ ಜನರಲ್ಲಿ ತೃಪ್ತಿಯಿತ್ತು. ಇಂದು ಎಷ್ಟಿದ್ದರೂ ಸಾಲದಾಗಿದೆ. ಮಠಾಧಿಪತಿಗಳಿಂದ ಹಿಡಿದು ಸಾಮಾನ್ಯ ಪ್ರಜೆಯವರೆಗೂ ಯಾರಲ್ಲೂ ನೆಮ್ಮದಿಯಿಲ್ಲ. ಆಸೆಯೇ ತುಂಬಿ ತುಳುಕುತ್ತಿದೆ. ನಿರಂತರವಾಗಿ ಆತ್ಮಚಿಂತನೆ ನಡೆಸಬೇಕು. ನಾನು ಯಾರು ಎಂಬ ಪ್ರಶ್ನೆಯನ್ನು ಪ್ರತಿದಿನವೂ ಕೇಳಿಕೊಳ್ಳಬೇಕು. ಆತ್ಮ ಚಿಂತನೆಯಿಂದ ನಡೆದರೆ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತದೆ ಎಂದರು.

ಇವತ್ತು ದೇವರನ್ನು ಒಂದು‌ ಜಾತಿ‌ ಸಮುದಾಯಗಳಿಗೆ ಅದರಲ್ಲೂ ಒಂದು ಪಕ್ಷಕ್ಕೆ ಸೀಮಿತವಾಗೊಳಿಸಲು ಹೊರಟಿದ್ದಾರೆ. ಆದರೆ, ದೇವರು ಎಲ್ಲರಿಗೂ ಎಂಬುದನ್ನು ಮನುಷ್ಯನೇ ಮರೆತಿದ್ದಾನೆ. ಜ್ಞಾನ ಸಂಪತ್ತು, ವಿವೇಕದ ಸಂಪತ್ತು, ಧರ್ಮದ ಸಂಪತ್ತನ್ನು ದೇವರಿಂದ ಪಡೆದಿದ್ದೇವೆ. ಆದರೆ, ಭೌತಿಕ ಜಗತ್ತಿನ ಆಕರ್ಷಣೆಗೆ ಒಳಪಟ್ಟು ಅದೆಲ್ಲವನ್ನು ಮರೆತು ಹಿಂಸೆ ಅನುಭವಿಸುವಂತಾಗಿದೆ ಎಂದು ವಿಷಾದಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ‌ ಅಧ್ಯಕ್ಷ ಚಂಜಿಮಲೆ ರಮೇಶ್, ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಛತ್ರಕೋಡಿಹಳ್ಳಿ ಮಂಜುನಾಥ್, ವೈ.ಶಿವಕುಮಾರ್, ಅಪ್ಪಸಂದ್ರ ರಘು ಸೇರಿದಂತೆ ಕೆಂದಟ್ಟಿ ಗ್ರಾಮಸ್ಥರು ಇದ್ದರು

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago