ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಸಾಮಾಜಿಕ ಭದ್ರತೆಯ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು: ಸಂದೀಪ್ ಭಟ್ನಾಗರ್

ಗ್ರಾಮೀಣ ಮತ್ತು ಹಳ್ಳಿ ಜನರ ಸಾಮಾಜಿಕ ಭದ್ರತೆಗಾಗಿಯೆ ಮಾಡಲಾದ ಯೋಜನೆ‌ ಇದಾಗಿದ್ದೂ ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಧಾನ ವ್ಯವಸ್ಥಾಪಕ ಸಂದೀಪ್ ಭಟ್ನಾಗರ್ ತಿಳಿಸಿದರು.

ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೊಡ್ಡಬಳ್ಳಾಪುರ ಶಾಖೆಯ ವತಿಯಿಂದ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾ‌ನಮಂತ್ರಿ ಸುರಕ್ಷ ಭೀಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಮತ್ತು ಅಟಲ್ ಪೆನ್ಷನ್ ಯೋಜನೆ ಕುರಿತು ಅರಿವು ಕಾರ್ಯಕ್ರಮವನ್ನು ನಗರದ ಎಸ್ ಬಿಐ ಬ್ಯಾಂಕ್ ಕಚೇರಿ ಎದುರು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ತಮ್ಮ ಕುಟುಂಬಗಳಿಗಾಗಿ ದುಡಿಯುವ ಪ್ರತಿಯೊಬ್ಬ ನಾಗರೀಕನು ಕುಂಟುಂಬಸ್ಥರ ಅನುಕೂಲಕ್ಕಾಗಿ ಪಿಎಂಎಸ್ ಬಿವೈ, ಪಿಎಂಜೆಜೆಬಿವೈ, ಎಪಿವೈ ಯೋಜನೆಗಳನ್ನು ಮಾಡಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು, ನಗರದ ಎಸ್ ಬಿ ಐ ಕಛೇರಿಗೆ ಖುದ್ದು ಹಾಜರಾಗಿ ಅರ್ಜಿ ಸಲ್ಲಿಸಬಹುದು ಅಥವ ಸಿಎಸ್ಸಿ ಸೆಂಟರ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದರು.

ಪ್ರಧಾನಮಂತ್ರಿ ಸುರಕ್ಷಾ ಯೋಜನೆಯಲ್ಲಿ 18 ರಿಂದ 70 ವರ್ಷ ವಯಸ್ಸಿನವರಿಗಾಗಿ ವಾರ್ಷಿಕ ಕೇವಲ 20 ರೂ, ಪಾವತಿಸಿದರೇ ಮರಣಾನಂತರ ಕುಂಟುಂಬಸ್ಥರ 2 ಲಕ್ಷ ರೂಪಾಯಿಗಳನ್ನು ಅವಲಂಬಿತರಿಗೆ ನೀಡಲಾಗುವುದು, ಅಪಘಾತದಿಂದ ಭಾಗಶಃ ಅಂಗವಿಕಲರಾದರೇ 1 ಲಕ್ಷ ರೂಪಾಯಿಗಳನ್ನು, ಸಂಪೂರ್ಣ ಅಂಗವೈಕಲ್ಯ ಉಂಟಾದರೇ 2 ಲಕ್ಷ ರೂ ನೀಡಲಾಗುವುದು ಎಂದರು.

ಇತ್ತೀಚೆಗೆ ಎಲ್ಲೆಡೆ ಡಿಜಿಟಲ್‌ ಪೇಮೆಂಟ್ ಗಳ ಮೊರೆ ಹೋಗಿದ್ದೂ ಡೆಬಿಟ್ ಕಾರ್ಡ್ ಗಳನ್ನು ಬಳಸುವವರೆ ಇಲ್ಲದಾಗಿದೆ, ರೂಪೇ ಡೆಬಿಟ್ ಕಾರ್ಡ್ ಬಳಕೆ‌ಮಾಡುವವರು ಅಚಾನಕ್ಕಾಗಿ ಸಾವಿಗೀಡಾದರೇ ನಾಮಿನಿ ಇದ್ದವರಿಗೆ 1 ಲಕ್ಷ ಹಣ ನೀಡಲಾಗುವುದು ಎಂದರು. ದೇಶದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ಭದ್ರತೆಯನ್ನು ಮೂಡಿಸುವುದೇ ಈ ಯೋಜನೆಗಳ ಉದ್ದೇಶವಾಗಿದೆ ಇದರ ಉಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದು ಉಪಪ್ರಧಾನ ವ್ಯವಸ್ಥಾಪಕರಾದ ರಾಜಶೇಖರ್ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಾದೇಶಿಕ ವ್ಯವಸ್ಥಾಪಕ ದಾಮೋದರ್, ದೊರೆ ರಾಜು, ರಾಜು ಮಿತ್ತಲ್, ಪ್ರಕಾಶ್ ಮೂರ್ತಿ, ಅಂಕೇಗೌಡ ಇತರರು ಇದ್ದರು.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

14 hours ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

15 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

16 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

19 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

19 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

1 day ago