ಗ್ರಾಮೀಣ ಮತ್ತು ಹಳ್ಳಿ ಜನರ ಸಾಮಾಜಿಕ ಭದ್ರತೆಗಾಗಿಯೆ ಮಾಡಲಾದ ಯೋಜನೆ ಇದಾಗಿದ್ದೂ ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಧಾನ ವ್ಯವಸ್ಥಾಪಕ ಸಂದೀಪ್ ಭಟ್ನಾಗರ್ ತಿಳಿಸಿದರು.
ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೊಡ್ಡಬಳ್ಳಾಪುರ ಶಾಖೆಯ ವತಿಯಿಂದ ಸಾಮಾಜಿಕ ಭದ್ರತಾ ಯೋಜನೆಗಳಾದ ಪ್ರಧಾನಮಂತ್ರಿ ಸುರಕ್ಷ ಭೀಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಮತ್ತು ಅಟಲ್ ಪೆನ್ಷನ್ ಯೋಜನೆ ಕುರಿತು ಅರಿವು ಕಾರ್ಯಕ್ರಮವನ್ನು ನಗರದ ಎಸ್ ಬಿಐ ಬ್ಯಾಂಕ್ ಕಚೇರಿ ಎದುರು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ತಮ್ಮ ಕುಟುಂಬಗಳಿಗಾಗಿ ದುಡಿಯುವ ಪ್ರತಿಯೊಬ್ಬ ನಾಗರೀಕನು ಕುಂಟುಂಬಸ್ಥರ ಅನುಕೂಲಕ್ಕಾಗಿ ಪಿಎಂಎಸ್ ಬಿವೈ, ಪಿಎಂಜೆಜೆಬಿವೈ, ಎಪಿವೈ ಯೋಜನೆಗಳನ್ನು ಮಾಡಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು, ನಗರದ ಎಸ್ ಬಿ ಐ ಕಛೇರಿಗೆ ಖುದ್ದು ಹಾಜರಾಗಿ ಅರ್ಜಿ ಸಲ್ಲಿಸಬಹುದು ಅಥವ ಸಿಎಸ್ಸಿ ಸೆಂಟರ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದರು.
ಪ್ರಧಾನಮಂತ್ರಿ ಸುರಕ್ಷಾ ಯೋಜನೆಯಲ್ಲಿ 18 ರಿಂದ 70 ವರ್ಷ ವಯಸ್ಸಿನವರಿಗಾಗಿ ವಾರ್ಷಿಕ ಕೇವಲ 20 ರೂ, ಪಾವತಿಸಿದರೇ ಮರಣಾನಂತರ ಕುಂಟುಂಬಸ್ಥರ 2 ಲಕ್ಷ ರೂಪಾಯಿಗಳನ್ನು ಅವಲಂಬಿತರಿಗೆ ನೀಡಲಾಗುವುದು, ಅಪಘಾತದಿಂದ ಭಾಗಶಃ ಅಂಗವಿಕಲರಾದರೇ 1 ಲಕ್ಷ ರೂಪಾಯಿಗಳನ್ನು, ಸಂಪೂರ್ಣ ಅಂಗವೈಕಲ್ಯ ಉಂಟಾದರೇ 2 ಲಕ್ಷ ರೂ ನೀಡಲಾಗುವುದು ಎಂದರು.
ಇತ್ತೀಚೆಗೆ ಎಲ್ಲೆಡೆ ಡಿಜಿಟಲ್ ಪೇಮೆಂಟ್ ಗಳ ಮೊರೆ ಹೋಗಿದ್ದೂ ಡೆಬಿಟ್ ಕಾರ್ಡ್ ಗಳನ್ನು ಬಳಸುವವರೆ ಇಲ್ಲದಾಗಿದೆ, ರೂಪೇ ಡೆಬಿಟ್ ಕಾರ್ಡ್ ಬಳಕೆಮಾಡುವವರು ಅಚಾನಕ್ಕಾಗಿ ಸಾವಿಗೀಡಾದರೇ ನಾಮಿನಿ ಇದ್ದವರಿಗೆ 1 ಲಕ್ಷ ಹಣ ನೀಡಲಾಗುವುದು ಎಂದರು. ದೇಶದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ಭದ್ರತೆಯನ್ನು ಮೂಡಿಸುವುದೇ ಈ ಯೋಜನೆಗಳ ಉದ್ದೇಶವಾಗಿದೆ ಇದರ ಉಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದು ಉಪಪ್ರಧಾನ ವ್ಯವಸ್ಥಾಪಕರಾದ ರಾಜಶೇಖರ್ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಾದೇಶಿಕ ವ್ಯವಸ್ಥಾಪಕ ದಾಮೋದರ್, ದೊರೆ ರಾಜು, ರಾಜು ಮಿತ್ತಲ್, ಪ್ರಕಾಶ್ ಮೂರ್ತಿ, ಅಂಕೇಗೌಡ ಇತರರು ಇದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…