ಸಮಾಜದ ನಿರೀಕ್ಷೆಗಳಿಗೆ ಸೇವೆಯ ಮೂಲಕ ಸ್ಪಂದನೆ ಆಶಯ ಲಯನ್ಸ್‌ ಸಂಸ್ಥೆ ಹೊಂದಿದೆ – ಸಿ.ಎಂ.ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಸಮಾಜದ ನಿರೀಕ್ಷೆಗಳಿಗೆ ಸೇವೆಯ ಮೂಲಕ ಸ್ಪಂದಿಸುವ ಆಶಯವನ್ನು ಲಯನ್ಸ್‌ ಸಂಸ್ಥೆ ಹೊಂದಿದ್ದು, ವಿಶ್ವಾದ್ಯಂತ ಅಸಂಖ್ಯಾತ ಚಟುವಟಿಕೆಗಳ ಮೂಲಕ ಸಾಮಾಜಿಕ ಸೇವೆಯಲ್ಲಿ ತೊಡಗಿದೆ ಎಂದು ಲಯನ್ಸ್‌ ಜಿಲ್ಲೆ 317ಎಫ್‌ನ ಗೌರ್ನರ್‌ ಸಿ.ಎಂ.ನಾರಾಯಣಸ್ವಾಮಿ ಹೇಳಿದರು.

ನಗರದ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್‌ಸ್ಟಿಟ್ಯೂಷನ್ಸ್‌ಗೆ ಅಧಿಕೃತ ಭೇಟಿ ವೇಳೆ ವಿವಿಧ ಸೇವಾ ಚಟುವಟಿಕೆಗಳಲ್ಲಿ ಪಾಲ್ಗೊಂಡು, ಬಳಿಕ ನಡೆದ ಸರ್ವಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಳೆದ ಮೂರೂವರೆ ವರ್ಷದ ಹಿಂದೆಯಷ್ಟೇ ಆರಂಭವಾದ ಆರ್.ಎಲ್.ಜಾಲಪ್ಪ ಲಯನ್ಸ್‌ ಸಂಸ್ಥೆ ಸೇವಾ ಹಾಗೂ ಆಡಳಿತಾತ್ಮಕವಾಗಿ ಉತ್ತಮ ಕಾರ್ಯ ನಿರ್ವಹಿಸಿ, ಸತತವಾಗಿ ಜಿಲ್ಲೆಯಲ್ಲಿ ಮೊದಲ ಸ್ಥಾನ ಪಡೆದ ಹ್ಯಾಟ್ರಿಕ್ ಸಾಧನೆಯನ್ನು ಮಾಡಿರುವುದು ಇಲ್ಲಿನ ಸೇವಾ ಬದ್ದತೆಗೆ ಸಾಕ್ಷಿಯಾಗಿದೆ. ಈ ವರ್ಷ ಮೊದಲ 6 ತಿಂಗಳಲ್ಲೇ ದಾಖಲೆಯ 416 ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜಮುಖಿ ಆಲೋಚನೆಯನ್ನು ಪ್ರತಿಪಾದಿಸಿದೆ ಎಂದರು.

*ಸದಸ್ಯತ್ವ ದ್ವಿಗುಣ-ಶ್ಲಾಘನೀಯ:*

ಲಯನ್ಸ್‌ ಕ್ಲಬ್‌ನ ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ಲಯನ್ಸ್‌ ಸಂಸ್ಥೆ ಹೊಸ ಮೈಲುಗಲ್ಲನ್ನು ದಾಟಿದೆ. ಈ ವರ್ಷ ಬರೋಬ್ಬರಿ 50 ಹೊಸ ಸದಸ್ಯರನ್ನು ನೊಂದಾಯಿಸುವ ಮೂಲಕ ತನ್ನ ಸದಸ್ಯತ್ವದ ಬಲವನ್ನು 100ಕ್ಕೆ ವೃದ್ದಿಸಿಕೊಂಡಿರುವುದು ಶ್ಲಾಘನೀಯ ವಿಚಾರವಾಗಿದ್ದು, ಈ ನಿಟ್ಟಿನಲ್ಲಿ ಶ್ರಮಿಸಿದ ಗಣ್ಯರ ಪರಿಶ್ರಮ ಅಭಿನಂದನೀಯ ಎಂದರು.

ಇದೇ ವೇಳೆ ಅವರು ವಿವಿಧ ಪುರಸ್ಕಾರ-ಗೌರವಗಳನ್ನು ಕ್ಲಬ್‌ನ ಅಧ್ಯಕ್ಷರು, ಪದಾಧಿಕಾರಿಗಳಿಗೆ ಘೋಷಿಸಿದರು. ಕ್ಲಬ್‌ನ ತ್ರೈಮಾಸಿಕ ಹಾಗೂ ವಿಶೇಷ ಸುದ್ದಿಪತ್ರ ಅನಾವರಣ ಸಂಚಿಕೆಯನ್ನು ಲೋಕಾರ್ಪಣೆ ಮಾಡಿದರು.

ಲಯನ್ಸ್‌ ಕ್ಲಬ್ ಅಧ್ಯಕ್ಷ ಜೆ.ಆರ್.ರಾಕೇಶ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ದೇವರಾಜ ಅರಸ್‌ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ, ಲಯನ್ಸ್‌ ಜಿಲ್ಲಾ ಸಂಪುಟ ಕಾರ್ಯದರ್ಶಿ ಪ್ರಸನ್ನಕುಮಾರ್‌, ಖಜಾಂಚಿ ವಿಜಯಾ, ಪ್ರಾಂತೀಯ ಅಧ್ಯಕ್ಷ ನಾಗರಾಜ್, ವಲಯ ಅಧ್ಯಕ್ಷ ರಘುಬಾಬು, ಜಿಇಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್, ಮಧುಮೇಹ ಸಂಯೋಜಕ ಎಲ್.ಎನ್.ಪ್ರದೀಪ್‌ಕುಮಾರ್, ಕ್ಲಬ್ ಕಾರ್ಯದರ್ಶಿ ಕೆ.ಸಿ.ನಾಗರಾಜ್, ಖಜಾಂಚಿ ರವಿಕುಮಾರ್, ಉಪಾಧ್ಯಕ್ಷರಾದ ಮುನಿರಾಮೇಗೌಡ, ಪ್ರೊ.ರವಿಕಿರಣ್, ನಿಕಟಪೂರ್ವ ಅಧ್ಯಕ್ಷ ಡಾ.ಶ್ರೀನಿವಾಸರೆಡ್ಡಿ, ಲಿಯೋ ಲಯನ್ಸ್‌ ಕ್ಲಬ್ ಅಧ್ಯಕ್ಷ ಅಮಿತ್ ಸೇರಿದಂತೆ ಕ್ಲಬ್‌ನ ಪದಾಧಿಕಾರಿಗಳು, ಅಕ್ಷಯ ಲಿಯೋ ಕ್ಲಬ್, ಏಕಲವ್ಯ ಲಿಯೋ ಕ್ಲಬ್, ಆರ್ಯಭಟ ಲಿಯೋ ಲಯನ್ಸ್‌ ಕ್ಲಬ್‌ನ ಸದಸ್ಯರು ಹಾಜರಿದ್ದರು.

*ವಿವಿಧ ಸೇವಾ ಚಟುವಟಿಕೆಗಳಲ್ಲಿ ಭಾಗಿ:*

ಗೌರ್ನರ್‌ ಅಧಿಕೃತ ಭೇಟಿ ಹಿನ್ನಲೆ ಆಯೋಜಿಸಿದ್ದ ವಿವಿಧ ಸೇವಾ ಚಟುವಟಿಕೆಗಳಲ್ಲಿ ಅವರು ಭಾಗಿಯಾದರು. ಅಪೆರಲ್ ಪಾರ್ಕ್‌ ಹೆಬ್ಬಾಗಿಲ ಬಳಿ ಆರ್.ಎಲ್.ಜಾಲಪ್ಪ ವೃತ್ತದ ನಾಮಫಲಕ ಅನಾವರಣ, ಬಸ್‌ನಿಲ್ದಾಣ ಮತ್ತು ರೈಲ್ವೇ ನಿಲ್ದಾಣ ವೃತ್ತದಲ್ಲಿ ಸಾರ್ವಜನಿಕರಿಗೆ ಮಧುಮೇಹ ತಪಾಸಣಾ ಶಿಬಿರ, ಬ್ಯಾಂಕ್‌ ಆಫ್‌ ಬರೋಡ ಸಮೀಪ ದೃಷ್ಟಿ ತಪಾಸಣೆ ಹಾಗೂ ಐಒಎಲ್‌ ಕೇಂದ್ರದ ಉದ್ಘಾಟನೆ, ಮೆಳೇಕೋಟೆಯಲ್ಲಿ ಪಶು ಆರೋಗ್ಯ ತಪಾಸಣಾ ಶಿಬಿರ, ತೂಬಗೆರೆಯ ವೃದ್ದಾಶ್ರಮದಲ್ಲಿ ಹಸಿವು ನಿವಾರಣೆ ಸೇವಾ ಕಾರ್ಯ, ಪಾಲನಜೋಗಿಹಳ್ಳಿ ಶಾಲೆಯಲ್ಲಿ ದಂತ ತಪಾಸಣೆ ಶಿಬಿರ-ಪೆನ್ಸಿಲ್‌ ಬಾಕ್ಸ್‌ ವಿತರಣೆ, ಲಿಟ್ಲ್‌ ಮಾಸ್ಟರ್‌ ಶಾಲೆ ಹಾಗೂ ದೇವಲ ಮಹರ್ಷಿ ಶಾಲೆಯಲ್ಲಿ ಕಣ್ಣಿನ ತಪಾಸಣೆ ಶಿಬಿರ, ಸಕ್ಕರೆಗೊಲ್ಲಹಳ್ಳಿ ವಸತಿ ಶಾಲೆಯಲ್ಲಿ ಪುಲ್‌ಓವರ್‌ಗಳ ವಿತರಣೆ, ದ್ವಿಚಕ್ರ ವಾಹನಗಳಿಗೆ ಉಚಿತ ಆಯಿಲ್ ಸರ್ವೀಸ್, ವಾಯುಮಾಲಿನ್ಯ ತಪಾಸಣೆ, ವೇದಿಕೆ ಕಾರ್ಯಕ್ರಮದಲ್ಲಿ ಹಲವು ಗಣ್ಯರಿಗೆ ಸನ್ಮಾನ,ಸೇವಾ ಕಾರ್ಯ ಸೇರಿದಂತೆ ಒಂದೇ ದಿನ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

8 hours ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

22 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

22 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago