ಸಮಾಜದ ರಚನೆಯಲ್ಲಿ ಮಹಿಳೆಯರಿಗೆ ಸಮಾನ ಪಾಲು ಇದೆ- ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್

ವಿದ್ಯಾವಂತ, ಆಧುನಿಕ ಸಮಾಜದಲ್ಲಿ ಹೆಣ್ಣು ಮಕ್ಕಳ ಬಗೆಗಿನ ಅಸಮಾನತೆಯನ್ನು ಹೋಗಲಾಡಿಸಲು ಮತ್ತು ಹೆಣ್ಣುಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಲು ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಸಮಾಜದ ರಚನೆಯಲ್ಲಿ ಮಹಿಳೆಯರಿಗೆ ಸಮಾನ ಪಾಲು ಇದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್ ಹೇಳಿದರು.

ನಗರದ ರೋಜಿಪುರ ವಾರ್ಡ್ ನ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಕೆಲವುಕಡೆ ಹೆಣ್ಣುಮಕ್ಕಳು ಇಂದಿಗೂ ಶಿಕ್ಷಣ, ಆರೋಗ್ಯದಂತಹ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಮೊದಲು ಕಲಿಸಬೇಕಾದದ್ದು ಆತ್ಮರಕ್ಷಣೆ. ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದನ್ನು ಪರಿಗಣಿಸಿ, ಪೋಷಕರು ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದರ ಕುರಿತು ಬಾಲ್ಯದಿಂದಲೇ ಹೆಣ್ಣುಮಕ್ಕಳಿಗೆ ತರಬೇತಿ ನೀಡುವುದು ಅವಶ್ಯಕ ಎಂದರು.

ನಾನು ಹುಡುಗಿ ಎಂಬ ಕಾರಣಕ್ಕೆ ನಾನು ಇದನ್ನು ಮಾಡಲಾರೆ ಎಂಬ ಭಾವನೆ ಅವಳಿಗೆ ಇರಬಾರದು. ಇದಕ್ಕೆ ವ್ಯತಿರಿಕ್ತವಾಗಿ, ನಾನು ಎಲ್ಲವನ್ನೂ ಒಬ್ಬಂಟಿಯಾಗಿ ಮಾಡಬಲ್ಲೆ ಎಂದು ಅವಳಿಗೆ ನಂಬುವಂತೆ ಮಾಡಬೇಕು. ಮನೆಯಲ್ಲಿ ಹೆಣ್ಣು ಮತ್ತು ಗಂಡು ಇದ್ದರೆ ಹುಡುಗಿ ಈ ಕೆಲಸ ಮಾಡಬೇಕು, ಹುಡುಗ ಈ ಕೆಲಸ ಮಾಡಬಾರದು ಎಂದು ಆಚರಣೆಗಳನ್ನು ಮಾಡಬೇಡಿ. ಇವೆರಡೂ ಒಂದೇ ಮಟ್ಟದಲ್ಲಿವೆ ಎಂಬುದನ್ನು ಅರಿತುಕೊಳ್ಳಲಿ. ಹೆಣ್ಣು ಮಗುವಿನ ಆಲೋಚನೆಗಳು ಸ್ವತಂತ್ರವಾಗಿರಬೇಕು, ಸ್ಪಷ್ಟ ಅಭಿಪ್ರಾಯಗಳನ್ನು ಹೊಂದಿರಬೇಕು ಮತ್ತು ಅವುಗಳನ್ನು ದೃಢವಾಗಿ ವ್ಯಕ್ತಪಡಿಸಲು ಸಾಧ್ಯವಾಗುತ್ತದೆ ಎಂಬ ನಂಬಿಕೆಯನ್ನು ಪಾಲಕರು ಮಗಳಲ್ಲಿ ತುಂಬುವುದು ಅವಶ್ಯಕ ಎಂದು ಹೇಳಿದರು.

ದೊಡ್ಡಬಳ್ಳಾಪುರ ನಗರದಲ್ಲಿ ಸುಮಾರು 22 ಅಂಗನಾವಡಿ ಕೇಂದ್ರಗಳಿಗೆ ಸ್ವಂತ‌ಕಟ್ಟಡವಿಲ್ಲದೇ ಖಾಸಗಿ ಕಟ್ಟಡದಲ್ಲಿ ಅಂಗನವಾಡಿ ನಡೆಸಲಾಗುತ್ತಿರುವುದು ಗಮನಕ್ಕೆ ಬಂದಿದ್ದು, ಜಾಗ ಗುರುತಿಸಿಕೊಟ್ಟರೆ ಸಚಿವರ ಗಮನಕ್ಕೆ ತಂದು ಕಟ್ಟಡ ನಿರ್ಮಾಣಕ್ಕೆ ಅನುವುಮಾಡಿಕೊಡಲಾಗುವುದು ಎಂದರು.

ಈ ವೇಳೆ ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷ ವಡ್ಡರಹಳ್ಳಿ ರವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲೂಕು ಅಧಿಕಾರಿ ರವಿಕುಮಾರ್, ಅಂಗನವಾಡಿ ಕಾರ್ಯಕರ್ತೆ ಶೈಲಜಾ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

26 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

13 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

14 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago