ಸಮಾಜದ ರಚನೆಯಲ್ಲಿ ಮಹಿಳೆಯರಿಗೆ ಸಮಾನ ಪಾಲು ಇದೆ- ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್

ವಿದ್ಯಾವಂತ, ಆಧುನಿಕ ಸಮಾಜದಲ್ಲಿ ಹೆಣ್ಣು ಮಕ್ಕಳ ಬಗೆಗಿನ ಅಸಮಾನತೆಯನ್ನು ಹೋಗಲಾಡಿಸಲು ಮತ್ತು ಹೆಣ್ಣುಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಲು ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಸಮಾಜದ ರಚನೆಯಲ್ಲಿ ಮಹಿಳೆಯರಿಗೆ ಸಮಾನ ಪಾಲು ಇದೆ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಇದರ ಹಿಂದಿನ ಉದ್ದೇಶವಾಗಿದೆ ಎಂದು ಭಾರತ ಸೇವಾದಳ ದೊಡ್ಡಬಳ್ಳಾಪುರ ತಾಲೂಕು ಘಟಕದ ಅಧ್ಯಕ್ಷ ಆರ್.ವಿ ಮಹೇಶ್ ಕುಮಾರ್ ಹೇಳಿದರು.

ನಗರದ ರೋಜಿಪುರ ವಾರ್ಡ್ ನ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಕೆಲವುಕಡೆ ಹೆಣ್ಣುಮಕ್ಕಳು ಇಂದಿಗೂ ಶಿಕ್ಷಣ, ಆರೋಗ್ಯದಂತಹ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಮೊದಲು ಕಲಿಸಬೇಕಾದದ್ದು ಆತ್ಮರಕ್ಷಣೆ. ಅಪ್ರಾಪ್ತ ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದನ್ನು ಪರಿಗಣಿಸಿ, ಪೋಷಕರು ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದರ ಕುರಿತು ಬಾಲ್ಯದಿಂದಲೇ ಹೆಣ್ಣುಮಕ್ಕಳಿಗೆ ತರಬೇತಿ ನೀಡುವುದು ಅವಶ್ಯಕ ಎಂದರು.

ನಾನು ಹುಡುಗಿ ಎಂಬ ಕಾರಣಕ್ಕೆ ನಾನು ಇದನ್ನು ಮಾಡಲಾರೆ ಎಂಬ ಭಾವನೆ ಅವಳಿಗೆ ಇರಬಾರದು. ಇದಕ್ಕೆ ವ್ಯತಿರಿಕ್ತವಾಗಿ, ನಾನು ಎಲ್ಲವನ್ನೂ ಒಬ್ಬಂಟಿಯಾಗಿ ಮಾಡಬಲ್ಲೆ ಎಂದು ಅವಳಿಗೆ ನಂಬುವಂತೆ ಮಾಡಬೇಕು. ಮನೆಯಲ್ಲಿ ಹೆಣ್ಣು ಮತ್ತು ಗಂಡು ಇದ್ದರೆ ಹುಡುಗಿ ಈ ಕೆಲಸ ಮಾಡಬೇಕು, ಹುಡುಗ ಈ ಕೆಲಸ ಮಾಡಬಾರದು ಎಂದು ಆಚರಣೆಗಳನ್ನು ಮಾಡಬೇಡಿ. ಇವೆರಡೂ ಒಂದೇ ಮಟ್ಟದಲ್ಲಿವೆ ಎಂಬುದನ್ನು ಅರಿತುಕೊಳ್ಳಲಿ. ಹೆಣ್ಣು ಮಗುವಿನ ಆಲೋಚನೆಗಳು ಸ್ವತಂತ್ರವಾಗಿರಬೇಕು, ಸ್ಪಷ್ಟ ಅಭಿಪ್ರಾಯಗಳನ್ನು ಹೊಂದಿರಬೇಕು ಮತ್ತು ಅವುಗಳನ್ನು ದೃಢವಾಗಿ ವ್ಯಕ್ತಪಡಿಸಲು ಸಾಧ್ಯವಾಗುತ್ತದೆ ಎಂಬ ನಂಬಿಕೆಯನ್ನು ಪಾಲಕರು ಮಗಳಲ್ಲಿ ತುಂಬುವುದು ಅವಶ್ಯಕ ಎಂದು ಹೇಳಿದರು.

ದೊಡ್ಡಬಳ್ಳಾಪುರ ನಗರದಲ್ಲಿ ಸುಮಾರು 22 ಅಂಗನಾವಡಿ ಕೇಂದ್ರಗಳಿಗೆ ಸ್ವಂತ‌ಕಟ್ಟಡವಿಲ್ಲದೇ ಖಾಸಗಿ ಕಟ್ಟಡದಲ್ಲಿ ಅಂಗನವಾಡಿ ನಡೆಸಲಾಗುತ್ತಿರುವುದು ಗಮನಕ್ಕೆ ಬಂದಿದ್ದು, ಜಾಗ ಗುರುತಿಸಿಕೊಟ್ಟರೆ ಸಚಿವರ ಗಮನಕ್ಕೆ ತಂದು ಕಟ್ಟಡ ನಿರ್ಮಾಣಕ್ಕೆ ಅನುವುಮಾಡಿಕೊಡಲಾಗುವುದು ಎಂದರು.

ಈ ವೇಳೆ ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷ ವಡ್ಡರಹಳ್ಳಿ ರವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲೂಕು ಅಧಿಕಾರಿ ರವಿಕುಮಾರ್, ಅಂಗನವಾಡಿ ಕಾರ್ಯಕರ್ತೆ ಶೈಲಜಾ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 day ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

3 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

3 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

3 days ago