ದುರ್ವರ್ತನೆ ಬದಲಾಯಿಸಿಕೊಂಡು ಸನ್ನಡತೆಯಿಂದ ಸಮಾಜದಲ್ಲಿ ಇರುವಂತೆ ಡಿವೈಎಸ್ಪಿ ರವಿ.ಪಿ ಅವರು ರೌಡಿ ಶೀಟರ್ ಗಳಿಗೆ ಕಿವಿ ಮಾತು ಹೇಳಿದರು.
ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ನಗರ, ಗ್ರಾಮಾಂತರ, ದೊಡ್ಡಬೆಳವಂಗಲ, ಹೊಸಹಳ್ಳಿ ಪೊಲೀಸ್ ಠಾಣೆ ಸೇರಿದಂತೆ ಒಟ್ಟು 8 ಠಾಣೆಗಳ ಸುಮಾರು 52 ರೌಡಿ ಶೀಟರ್ ಗಳ ಮಾಹಿತಿ ಪಡೆದ ಅವರು, ದುಷ್ಟ ವರ್ತನೆಯನ್ನು ಬದಲಾಯಿಸಿಕೊಂಡು ಸೌಜನ್ಯತೆಯಿಂದ ಸಮಾಜದಲ್ಲಿ ನೀವೂ ಬದುಕಿ ಇತರರು ಬದುಕಲು ಅನುವು ಮಾಡಿಕೊಡಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿರುತ್ತದೆ. ಇಲ್ಲವಾದಲ್ಲಿ ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಕಾನೂನಿಗೆ ಗೌರವ, ಮಾನವೀಯತೆ, ನೈತಿಕ, ಸಾಮಾಜಿಕ ಮೌಲ್ಯಗಳಿಗೆ ಬೆಲೆ ಕೊಡುವಂತ ಕೆಲಸ ಪ್ರತಿಯೊಬ್ಬರು ಮಾಡಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನರು ಯಾರೇ ತಪ್ಪು ಮಾಡಿದರು ಕಾನೂನಿನ ಶಿಕ್ಷೆಗೆ ಒಳಗಾಗಲೇಬೇಕು. ಎಲ್ಲರಿಗೂ ಉಜ್ವಲ ಭವಿಷ್ಯ ಇರುತ್ತದೆ ಈ ನಿಟ್ಟಿನಲ್ಲಿ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇತ್ತೀಚಿಗೆ ಯಾವುದಾದರೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆಯೂ ಸಹ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ತಮ್ಮ ತಮ್ಮ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ ಪ್ರತೀ ರೌಡಿಗಳ ಮಾಹಿತಿಯನ್ನು ಪಡೆದುಕೊಂಡು ನಿಗಾವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ದೊಡ್ಡಬೆಳವಂಗಲ ಠಾಣಾ ಇನ್ಸ್ ಪೆಕ್ಟರ್ ಎಂ.ಆರ್. ಹರೀಶ್, ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ರಾವ್ ಗಣೇಶ್ ಸೇರಿದಂತೆ ವಿವಿಧ ಠಾಣೆಗಳ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…