ದುರ್ವರ್ತನೆ ಬದಲಾಯಿಸಿಕೊಂಡು ಸನ್ನಡತೆಯಿಂದ ಸಮಾಜದಲ್ಲಿ ಇರುವಂತೆ ಡಿವೈಎಸ್ಪಿ ರವಿ.ಪಿ ಅವರು ರೌಡಿ ಶೀಟರ್ ಗಳಿಗೆ ಕಿವಿ ಮಾತು ಹೇಳಿದರು.
ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ನಗರ, ಗ್ರಾಮಾಂತರ, ದೊಡ್ಡಬೆಳವಂಗಲ, ಹೊಸಹಳ್ಳಿ ಪೊಲೀಸ್ ಠಾಣೆ ಸೇರಿದಂತೆ ಒಟ್ಟು 8 ಠಾಣೆಗಳ ಸುಮಾರು 52 ರೌಡಿ ಶೀಟರ್ ಗಳ ಮಾಹಿತಿ ಪಡೆದ ಅವರು, ದುಷ್ಟ ವರ್ತನೆಯನ್ನು ಬದಲಾಯಿಸಿಕೊಂಡು ಸೌಜನ್ಯತೆಯಿಂದ ಸಮಾಜದಲ್ಲಿ ನೀವೂ ಬದುಕಿ ಇತರರು ಬದುಕಲು ಅನುವು ಮಾಡಿಕೊಡಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿರುತ್ತದೆ. ಇಲ್ಲವಾದಲ್ಲಿ ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಕಾನೂನಿಗೆ ಗೌರವ, ಮಾನವೀಯತೆ, ನೈತಿಕ, ಸಾಮಾಜಿಕ ಮೌಲ್ಯಗಳಿಗೆ ಬೆಲೆ ಕೊಡುವಂತ ಕೆಲಸ ಪ್ರತಿಯೊಬ್ಬರು ಮಾಡಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನರು ಯಾರೇ ತಪ್ಪು ಮಾಡಿದರು ಕಾನೂನಿನ ಶಿಕ್ಷೆಗೆ ಒಳಗಾಗಲೇಬೇಕು. ಎಲ್ಲರಿಗೂ ಉಜ್ವಲ ಭವಿಷ್ಯ ಇರುತ್ತದೆ ಈ ನಿಟ್ಟಿನಲ್ಲಿ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇತ್ತೀಚಿಗೆ ಯಾವುದಾದರೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆಯೂ ಸಹ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ತಮ್ಮ ತಮ್ಮ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ ಪ್ರತೀ ರೌಡಿಗಳ ಮಾಹಿತಿಯನ್ನು ಪಡೆದುಕೊಂಡು ನಿಗಾವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ದೊಡ್ಡಬೆಳವಂಗಲ ಠಾಣಾ ಇನ್ಸ್ ಪೆಕ್ಟರ್ ಎಂ.ಆರ್. ಹರೀಶ್, ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ರಾವ್ ಗಣೇಶ್ ಸೇರಿದಂತೆ ವಿವಿಧ ಠಾಣೆಗಳ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…