ದುರ್ವರ್ತನೆ ಬದಲಾಯಿಸಿಕೊಂಡು ಸನ್ನಡತೆಯಿಂದ ಸಮಾಜದಲ್ಲಿ ಇರುವಂತೆ ಡಿವೈಎಸ್ಪಿ ರವಿ.ಪಿ ಅವರು ರೌಡಿ ಶೀಟರ್ ಗಳಿಗೆ ಕಿವಿ ಮಾತು ಹೇಳಿದರು.
ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ನಗರ, ಗ್ರಾಮಾಂತರ, ದೊಡ್ಡಬೆಳವಂಗಲ, ಹೊಸಹಳ್ಳಿ ಪೊಲೀಸ್ ಠಾಣೆ ಸೇರಿದಂತೆ ಒಟ್ಟು 8 ಠಾಣೆಗಳ ಸುಮಾರು 52 ರೌಡಿ ಶೀಟರ್ ಗಳ ಮಾಹಿತಿ ಪಡೆದ ಅವರು, ದುಷ್ಟ ವರ್ತನೆಯನ್ನು ಬದಲಾಯಿಸಿಕೊಂಡು ಸೌಜನ್ಯತೆಯಿಂದ ಸಮಾಜದಲ್ಲಿ ನೀವೂ ಬದುಕಿ ಇತರರು ಬದುಕಲು ಅನುವು ಮಾಡಿಕೊಡಬೇಕು. ಸಮಾಜದ ಸ್ವಾಸ್ಥ್ಯ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿರುತ್ತದೆ. ಇಲ್ಲವಾದಲ್ಲಿ ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಕಾನೂನಿಗೆ ಗೌರವ, ಮಾನವೀಯತೆ, ನೈತಿಕ, ಸಾಮಾಜಿಕ ಮೌಲ್ಯಗಳಿಗೆ ಬೆಲೆ ಕೊಡುವಂತ ಕೆಲಸ ಪ್ರತಿಯೊಬ್ಬರು ಮಾಡಬೇಕು. ಕಾನೂನಿನ ಮುಂದೆ ಎಲ್ಲರೂ ಸಮಾನರು ಯಾರೇ ತಪ್ಪು ಮಾಡಿದರು ಕಾನೂನಿನ ಶಿಕ್ಷೆಗೆ ಒಳಗಾಗಲೇಬೇಕು. ಎಲ್ಲರಿಗೂ ಉಜ್ವಲ ಭವಿಷ್ಯ ಇರುತ್ತದೆ ಈ ನಿಟ್ಟಿನಲ್ಲಿ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇತ್ತೀಚಿಗೆ ಯಾವುದಾದರೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆಯೂ ಸಹ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ತಮ್ಮ ತಮ್ಮ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ ಪ್ರತೀ ರೌಡಿಗಳ ಮಾಹಿತಿಯನ್ನು ಪಡೆದುಕೊಂಡು ನಿಗಾವಹಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಮುನಿಕೃಷ್ಣ, ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ, ದೊಡ್ಡಬೆಳವಂಗಲ ಠಾಣಾ ಇನ್ಸ್ ಪೆಕ್ಟರ್ ಎಂ.ಆರ್. ಹರೀಶ್, ಹೊಸಹಳ್ಳಿ ಠಾಣಾ ಇನ್ಸ್ ಪೆಕ್ಟರ್ ರಾವ್ ಗಣೇಶ್ ಸೇರಿದಂತೆ ವಿವಿಧ ಠಾಣೆಗಳ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…