Categories: ಕೋಲಾರ

ಸಮಾಜ ಕಾರ್ಯ ವಿಭಾಗದ ವಿಧ್ಯಾರ್ಥಿಗಳ ಕಲಿಕಾ ಶುಲ್ಕ ವಾಪಸ್ಸು ಮಾಡುವಂತೆ ಎಸ್ಎಫ್ಐ ಒತ್ತಾಯ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳ ದಾಖಲಾತಿ ಶುಲ್ಕವನ್ನು. ಹಿಂತಿರುಗಿಸಿಲು ಶುಕ್ರವಾರ ಭಾರತ ವಿಧ್ಯಾರ್ಥಿ ಫೆಡರೇಶನ್ ಎಸ್ಎಫ್ಐ ಸಂಘಟನೆಯಿಂದ ಕುಲ ಸಚಿವರಾದ ಕುಮುದ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಶಿವಪ್ಪ ಮಾತನಾಡಿ ಸಮಾಜ ಕಾರ್ಯ ವಿಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದ್ವಿತೀಯ ವರ್ಷದ ವಿದ್ಯಾರ್ಥಿಗಳ 2022ನೇ ಸಾಲಿನಲ್ಲಿ ಬೆಂಗಳೂರು ವಿವಿ ಸ್ನಾತಕೋತ್ತರ ಕೇಂದ್ರದಲ್ಲಿ ದಾಖಲಾತಿ ಸಂದರ್ಭದಲ್ಲಿ ದಾಖಲಾತಿಗಾಗಿ ಸಿಬ್ಬಂದಿ ವರ್ಗದವರು ಸರಕಾರ ನಿಗಧಿ ಪಡಿಸಿದ 330 ರೂಗಳನ್ನು ಪಾವತಿಸಿಕೊಂಡಿದ್ದಾರೆ ಸರ್ಕಾರದಿಂದ ವಿದ್ಯಾರ್ಥಿ ವೇತನ ಬಂದ ಮೇಲೆ ನೀವು ದಾಖಲಾತಿ ಶುಲ್ಕವನ್ನು ಪಾವತಿಸಬೇಕೆಂದು ಮೌಖಿಕ ಮಾಹಿತಿ ನೀಡಿದ್ದರು ಅದರಂತೆ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಲ್ಲಿ 13,367 ರೂಗಳು ಹಾಗೆಯೇ ದ್ವಿತೀಯ ವರ್ಷದಲ್ಲಿ 12641 ರೂಗಳು ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿ ವೇತನವಾಗಿ ಜಮೆಯಾಗಿದೆ ಆದರೆ ಕಲಿತಾ ಶುಲ್ಕ ಪಾವತಿಸುವಂತೆ ಒತ್ತಾಯ ಮಾಡತ್ತಾ ಇದ್ದಾರೆ ಎಂದು ಆರೋಪಿಸಿದರು,

ವಿಭಾಗದ ಸಂಯೋಜಕರು ಹಾಗೂ ಅಧ್ಯಾಪಕರು ತರಗತಿಯಲ್ಲಿ ಹಣ ಪಾವತಿಸುವ ವಿಚಾರವಾಗಿ ಚರ್ಚಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಗ್ರಾಮೀಣ ಕಲಿಕಾ ಶಿಬಿರದ ಹಣ ಪ್ರಥಮ ವರ್ಷ 4500 ರೂಗಳು ಹಾಗೂ ಬುಡಕಟ್ಟು ಭೇಟಿಯ ದ್ವೀತಿಯ ವರ್ಷ 4500 ರೂಗಳನ್ನು ಮತ್ತು ದಾಖಲಾತಿಯ ಸಮಯದಲ್ಲಿ ಪಾವತಿಸಿದ ಮೊದಲನೇ ವರ್ಷದ ಪ್ರವೇಶ ಶುಲ್ಕ 330 ಮತ್ತು ಎರಡನೇ ವರ್ಷದ ಪ್ರವೇಶ ಶುಲ್ಕ 330 ರೂಗಳು ಮತ್ತು ವಿದ್ಯಾರ್ಥಿ ಗುರುತಿನ ಚೀಟಿ 121 ರೂಗಳನ್ನು ಒಟ್ಟು ಸೇರಿ ಎರಡು ವರ್ಷಗಳಿಗೆ 9781 ಹಣವನ್ನು ವಿದ್ಯಾರ್ಥಿಗಳ ಕೈಯಿಂದ ಪಾವತಿ ಮಾಡಿಕೊಂಡಿವುದನ್ನು ಎಸ್ಎಫ್ಐ ವಿರೋಧ ಮಾಡುತ್ತದೆ ಎಂದರು

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರವರಿಗೆ ಮೂರು ಬಾರಿ ಕಾಲೇಜಿನ ವಿದ್ಯಾರ್ಥಿಗಳು ಮನವಿ ಪತ್ರದೊಂದಿಗೆ ತಿಳಿಯ ಪಡಿಸಲಾಗಿದೆ ಅವರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಪೂರ್ಣ ದಾಖಲಾತಿ ಶುಲ್ಕವನ್ನು ಪಾವತಿಸಲು ತಿಳಿಸಿದ್ದರು ಈಗ ವಿದ್ಯಾರ್ಥಿಗಳಿಗೆ ಬಂದಿರುವ ವಿದ್ಯಾರ್ಥಿ ವೇತನದಲ್ಲಿ ಕಾಲೇಜಿನ ವೆಚ್ಚಗಳ ದಾಖಲಾತಿ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲ್ಲ ಹಾಗಾಗಿ ತಾವುಗಳು ಈ 24 ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ದಾಖಲಾತಿ ಶುಲ್ಕವಾದ 26,008 ರೂಗಳಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಉದ್ದೇಶಕ್ಕಾಗಿ ವೆಚ್ಚ ಮಾಡಿರುವ ಹಣ 9,781 ರೂಗಳನ್ನು ಹೊರತುಪಡಿಸಿ ಉಳಿದ ಮೊತ್ತವನ್ನು 16,227 ರೂ.ಗಳನ್ನು ವಿದ್ಯಾರ್ಥಿಗಳಿಂದ ವಿಶ್ವವಿದ್ಯಾಲಯಕ್ಕೆ ಪಾವತಿಸಿಕೊಂಡು ವಿದ್ಯಾರ್ಥಿಗಳ ನಾಲ್ಕು ಸೆಮಿಸ್ಟರ್‌ನ ಅಂಕಪಟ್ಟಿಗಳನ್ನು ನೀಡಿ ಅವರ ಮುಂದಿನ ಭವಿಷ್ಯಕ್ಕೆ ಅನುಕೂಲ ಮಾಡಿಕೊಡಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ.

ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳು ಭರತ್ ಕುಮಾರ್, ಎಸ್ ತಿಮ್ಮರಾಜು, ಆರ್,ಅಶೋಕ್ ಕುಮಾರ್, ಎಂ,ಪ್ರದೀಪ್ ಕುಮಾರ್, ವೈ ಕಾರ್ತಿಕ್, ಎಂ,ಸಂಧ್ಯಾಕ್ಷಯ, ಜೆ ಎಂ ಶಿರೀಷಾ, ಆರ್ ಸುಷ್ಮಾ, ಲಕ್ಕ್ಮೀ, ಎಸ್ ಎಂ ನಿರ್ಮಲ, ಮುಂತಾದವರು ಭಾಗವಹಿಸಿದ್ದರು,

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

7 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

8 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

13 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

14 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

19 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

20 hours ago