Categories: ಕೋಲಾರ

ಸಮಾಜ ಕಾರ್ಯ ವಿಭಾಗದ ವಿಧ್ಯಾರ್ಥಿಗಳ ಕಲಿಕಾ ಶುಲ್ಕ ವಾಪಸ್ಸು ಮಾಡುವಂತೆ ಎಸ್ಎಫ್ಐ ಒತ್ತಾಯ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ದ್ವಿತೀಯ ವರ್ಷದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳ ದಾಖಲಾತಿ ಶುಲ್ಕವನ್ನು. ಹಿಂತಿರುಗಿಸಿಲು ಶುಕ್ರವಾರ ಭಾರತ ವಿಧ್ಯಾರ್ಥಿ ಫೆಡರೇಶನ್ ಎಸ್ಎಫ್ಐ ಸಂಘಟನೆಯಿಂದ ಕುಲ ಸಚಿವರಾದ ಕುಮುದ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಶಿವಪ್ಪ ಮಾತನಾಡಿ ಸಮಾಜ ಕಾರ್ಯ ವಿಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದ್ವಿತೀಯ ವರ್ಷದ ವಿದ್ಯಾರ್ಥಿಗಳ 2022ನೇ ಸಾಲಿನಲ್ಲಿ ಬೆಂಗಳೂರು ವಿವಿ ಸ್ನಾತಕೋತ್ತರ ಕೇಂದ್ರದಲ್ಲಿ ದಾಖಲಾತಿ ಸಂದರ್ಭದಲ್ಲಿ ದಾಖಲಾತಿಗಾಗಿ ಸಿಬ್ಬಂದಿ ವರ್ಗದವರು ಸರಕಾರ ನಿಗಧಿ ಪಡಿಸಿದ 330 ರೂಗಳನ್ನು ಪಾವತಿಸಿಕೊಂಡಿದ್ದಾರೆ ಸರ್ಕಾರದಿಂದ ವಿದ್ಯಾರ್ಥಿ ವೇತನ ಬಂದ ಮೇಲೆ ನೀವು ದಾಖಲಾತಿ ಶುಲ್ಕವನ್ನು ಪಾವತಿಸಬೇಕೆಂದು ಮೌಖಿಕ ಮಾಹಿತಿ ನೀಡಿದ್ದರು ಅದರಂತೆ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಲ್ಲಿ 13,367 ರೂಗಳು ಹಾಗೆಯೇ ದ್ವಿತೀಯ ವರ್ಷದಲ್ಲಿ 12641 ರೂಗಳು ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿ ವೇತನವಾಗಿ ಜಮೆಯಾಗಿದೆ ಆದರೆ ಕಲಿತಾ ಶುಲ್ಕ ಪಾವತಿಸುವಂತೆ ಒತ್ತಾಯ ಮಾಡತ್ತಾ ಇದ್ದಾರೆ ಎಂದು ಆರೋಪಿಸಿದರು,

ವಿಭಾಗದ ಸಂಯೋಜಕರು ಹಾಗೂ ಅಧ್ಯಾಪಕರು ತರಗತಿಯಲ್ಲಿ ಹಣ ಪಾವತಿಸುವ ವಿಚಾರವಾಗಿ ಚರ್ಚಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಗ್ರಾಮೀಣ ಕಲಿಕಾ ಶಿಬಿರದ ಹಣ ಪ್ರಥಮ ವರ್ಷ 4500 ರೂಗಳು ಹಾಗೂ ಬುಡಕಟ್ಟು ಭೇಟಿಯ ದ್ವೀತಿಯ ವರ್ಷ 4500 ರೂಗಳನ್ನು ಮತ್ತು ದಾಖಲಾತಿಯ ಸಮಯದಲ್ಲಿ ಪಾವತಿಸಿದ ಮೊದಲನೇ ವರ್ಷದ ಪ್ರವೇಶ ಶುಲ್ಕ 330 ಮತ್ತು ಎರಡನೇ ವರ್ಷದ ಪ್ರವೇಶ ಶುಲ್ಕ 330 ರೂಗಳು ಮತ್ತು ವಿದ್ಯಾರ್ಥಿ ಗುರುತಿನ ಚೀಟಿ 121 ರೂಗಳನ್ನು ಒಟ್ಟು ಸೇರಿ ಎರಡು ವರ್ಷಗಳಿಗೆ 9781 ಹಣವನ್ನು ವಿದ್ಯಾರ್ಥಿಗಳ ಕೈಯಿಂದ ಪಾವತಿ ಮಾಡಿಕೊಂಡಿವುದನ್ನು ಎಸ್ಎಫ್ಐ ವಿರೋಧ ಮಾಡುತ್ತದೆ ಎಂದರು

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರವರಿಗೆ ಮೂರು ಬಾರಿ ಕಾಲೇಜಿನ ವಿದ್ಯಾರ್ಥಿಗಳು ಮನವಿ ಪತ್ರದೊಂದಿಗೆ ತಿಳಿಯ ಪಡಿಸಲಾಗಿದೆ ಅವರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿ ಪೂರ್ಣ ದಾಖಲಾತಿ ಶುಲ್ಕವನ್ನು ಪಾವತಿಸಲು ತಿಳಿಸಿದ್ದರು ಈಗ ವಿದ್ಯಾರ್ಥಿಗಳಿಗೆ ಬಂದಿರುವ ವಿದ್ಯಾರ್ಥಿ ವೇತನದಲ್ಲಿ ಕಾಲೇಜಿನ ವೆಚ್ಚಗಳ ದಾಖಲಾತಿ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲ್ಲ ಹಾಗಾಗಿ ತಾವುಗಳು ಈ 24 ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ದಾಖಲಾತಿ ಶುಲ್ಕವಾದ 26,008 ರೂಗಳಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಉದ್ದೇಶಕ್ಕಾಗಿ ವೆಚ್ಚ ಮಾಡಿರುವ ಹಣ 9,781 ರೂಗಳನ್ನು ಹೊರತುಪಡಿಸಿ ಉಳಿದ ಮೊತ್ತವನ್ನು 16,227 ರೂ.ಗಳನ್ನು ವಿದ್ಯಾರ್ಥಿಗಳಿಂದ ವಿಶ್ವವಿದ್ಯಾಲಯಕ್ಕೆ ಪಾವತಿಸಿಕೊಂಡು ವಿದ್ಯಾರ್ಥಿಗಳ ನಾಲ್ಕು ಸೆಮಿಸ್ಟರ್‌ನ ಅಂಕಪಟ್ಟಿಗಳನ್ನು ನೀಡಿ ಅವರ ಮುಂದಿನ ಭವಿಷ್ಯಕ್ಕೆ ಅನುಕೂಲ ಮಾಡಿಕೊಡಬೇಕಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇವೆ.

ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳು ಭರತ್ ಕುಮಾರ್, ಎಸ್ ತಿಮ್ಮರಾಜು, ಆರ್,ಅಶೋಕ್ ಕುಮಾರ್, ಎಂ,ಪ್ರದೀಪ್ ಕುಮಾರ್, ವೈ ಕಾರ್ತಿಕ್, ಎಂ,ಸಂಧ್ಯಾಕ್ಷಯ, ಜೆ ಎಂ ಶಿರೀಷಾ, ಆರ್ ಸುಷ್ಮಾ, ಲಕ್ಕ್ಮೀ, ಎಸ್ ಎಂ ನಿರ್ಮಲ, ಮುಂತಾದವರು ಭಾಗವಹಿಸಿದ್ದರು,

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

10 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

11 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

12 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

16 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

23 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 days ago